ಎಚ್ಚರಿಕೆ

ಹಣೆ ಬರಹದಣೆಕಟ್ಟು
ಜಾತಿ ಮತಗಳ ಸುಟ್ಟು
ಬಂದೇವು ಬಡವರು
ಹೊಸ ಪಂಜು ಹಿಡಿದು.

ಭೋರ್ಗರೆವ ನೀರೊಳಗೆ
ಬಡವರೊಂದಾದೇವು
ಹನಿ ಹನಿಯ ಕಿಡಿಗೊಳಿಸಿ
ಅಲೆಯಾಗಿ ಹರಿದೇವು.

ಅಪ್ಪಳಿಸಿ ಅಲೆಯಾಗ್ನಿ
ಬೆಟ್ಟ ಬೂದಿಯಾದೀತು
ಮಂತ್ರ ಹೇಳುವ ಮರ
ಮೊದಲೆ ಬಿದ್ದಿತು.

ರತ್ನಗಂಬಳಿ ಪೀಠ
ಸುಳ್ಳು ಸಂಸ್ಕೃತಿ ಪಾಠ
ಉರಿ ಉಕ್ಕುವ ನೆರೆಗೆ ಸಿಕ್ಕಿ
ಅತ್ತು ಕರೆದಾವು-
ಸತ್ತು ಹೋದಾವು.

ಕೊಚ್ಚಿ ಹಾಕುವ ಕಿಚ್ಚು
ಹುಚ್ಚಾಗದಂತೆ
ಸುಟ್ಟ ಹಾದಿಯ ತುಂಬ
ಹೊಸ ಹಾಡು ಹರಿದೀತು
ಹೊಸ ಮನಸು ಮೆರೆದೀತು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರೊಫೆಶನಲಿಸಂ ಎಂಬ ಮಾಯೆ
Next post ಮಾತಿನ ಮರ್ಮ

ಸಣ್ಣ ಕತೆ

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

cheap jordans|wholesale air max|wholesale jordans|wholesale jewelry|wholesale jerseys