Home / ಲೇಖನ / ಇತರೆ / ಬೆಳಗದಿರುವುದೇ

ಬೆಳಗದಿರುವುದೇ

ಪ್ರಿಯ ಸಖಿ,
ನನ್ನಿಂದೇನು ಸಾಧ್ಯ ? “ನಾನು ಅತ್ಯಂತ ನಿಕೃಷ್ಟ ಜೀವಿ” ‘ನನ್ನಿಂದ ಯಾರಿಗೂ ಏನೂ ಪ್ರಯೋಜನವಿಲ್ಲ’ ಎಂದು ಹಲುಬುವ ನಿರಾಶಾವಾದಿಗಳನ್ನು ನಮ್ಮ ಸುತ್ತಮುತ್ತ ಕಾಣುತ್ತಲೇ ಇರುತ್ತೇವೆ. ಇಂತಹವರನ್ನು ಕಂಡೇ ಇರಬೇಕು ಕವಿ ಎಸ್. ವಿ. ಪರಮೇಶ್ವರಭಟ್ಟರು ತಮ್ಮ ಕವನವೊಂದರಲ್ಲಿ ಹೀಗೆ ಹೇಳಿದ್ದಾರೆ.
ವಿಶ್ವವ್ಯಾಪಿ ತಮದ
ಮುಂದೆ ತನ್ನ ದೀಪವೆ?
ತನ್ನ ದಿಟ್ಪವೊಂದರಿಂದೆ
ಕತ್ತಲಳಿವದೇ?
ಎನುವ ಶಂಕೆ ಚುಕ್ಕಿಗೇಕೆ?
ಏಕೆ ಹೆದರಿಕೆ?
ಬೆಳಗಲೆಂದು ಹುಟ್ಟಿದಂದು
ಬೆಳಗದಿರುವುದೇ?
ಎಷ್ಟೊಂದು ಸ್ಫೂರ್ತಿದಾಯಕ ಕವನದ ಸಾಲುಗಳಲ್ಲವೇ ಸಖಿ? ದೊಡ್ಡ ಆಕಾಶದಲ್ಲಿ ಪುಟ್ಟ ತಾರೆಯೊಂದು ಇಷ್ಟೊಂದು ಕತ್ತಲಿನಲ್ಲಿ ತನ್ನ ಬೆಳಕು ಯಾವ ಮೂಲೆಗೆ? ತನ್ನ ದೀಪವೊಂದರಿಂದಲೇ ಕತ್ತಲು ಅಳಿಯುವುದೇ? ಎಂದು ಹೆದರುತ್ತದೆ. ಆದರೆ ಕತ್ತಲು ಎಷ್ಟೇ ಇರಲಿ ಬೆಳಗಲೆಂದೇ ಅದು ಹುಟ್ಟಿರುವದು.

ಹಾಗೇ ಮನುಷ್ಯನೂ ಕೂಡ ಪ್ರತಿಯೊಬ್ಬನಿಗೂ ಅವನವನದೇ ಆದ ವಿಶಿಷ್ಟತೆ, ಬೆಳಕು ಇದ್ದೇ ಇರುತ್ತದೆ. ಅದನ್ನವನು ಕಂಡುಕೊಂಡು ಬಾಳಬೇಕು. ಬೆಳಕು ನೀಡಬೇಕು. ಪ್ರತಿಯೊಬ್ಬ ಜೀವಿಯೂ ಇಲ್ಲಿ ಜನ್ಮ ತಳೆದು ಬಂದ ಮೇಲೆ ಅವನವನ ಕರ್ತವ್ಯವನ್ನು ಅವನು ನಿಭಾಯಿಸಲೇಬೇಕು. ಕಷ್ಟವೆಂದು ಸುಮ್ಮನೆ ಕೂರುವಂತಿಲ್ಲ. ‘ತನ್ನಿಂದ ಏನೂ ಸಾಧ್ಯವಿಲ್ಲ’ ಎಂಬ ನಿರಭಿಮಾನವೂ ಬೇಡ. ಹಾಗೇ ‘ತನ್ನಿಂದಲೇ ಪ್ರಪಂಚವೆಲ್ಲಾ ಎಂಬ ದುರಭಿಮಾನವೂ ಬೇಡ. ತನ್ನಿಂದ ಏನಾದರೂ ಸಾಧಿಸಲು ಸಾಧ್ಯ ಎಂದು ವ್ಯಕ್ತಿ ಮನಸ್ಸು ಮಾಡಿದನೆಂದರೆ ಅರ್ಧ ಕೆಲಸ ಆದಂತೆಯೇ ಎನ್ನುತ್ತಾರೆ ಹಿರಿಯರು. ಅದಕ್ಕೆಂದೇ
ಕವಿ ಶೇಕ್ಸ್‍ಪಿಯರ್ ಹೀಗೆ ಹೇಳುತ್ತಾನೆ. ‘Where there is will there is a way’ ಎಲ್ಲಿ ಗುರಿ ಇದೆಯೋ ಅಲ್ಲಿ ದಾರಿಯೂ ಇದ್ದೇ ಇದೆ ಎಂದು.

ಪ್ರಿಯ ಸಖಿ, ಸೂರ್ಯನಂತೆ ಜಗವನ್ನೇ ಬೆಳಗಬಲ್ಲೆನೆಂಬ ಹುಂಬತನವಿಲ್ಲದಿದ್ದರೂ ಚುಕ್ಕಿಯಾಗಿಯೇ ಬೆಳಗಿ ನನ್ನ ಸುತ್ತಮುತ್ತಲಾದರೂ ಸರಿ ಬೆಳಕು ನೀಡುವೆನೆಂಬ ಆತ್ಮವಿಶ್ವಾಸ, ಆಶಾವಾದ, ನಂಬಿಕೆ ನಮ್ಮದಾದರೆ ಅಷ್ಟೇ ಸಾಕು. ದಾರಿ ಹೇಗೋ ತಾನೇ ತೆರೆದುಕೊಳ್ಳುತ್ತಾ ಸಾಗುತ್ತದೆ ! ನೀನೇನೆನ್ನುತ್ತೀ ಸಖಿ?
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...