Home / ಲೇಖನ / ಇತರೆ / ಬೆಳಗದಿರುವುದೇ

ಬೆಳಗದಿರುವುದೇ

ಪ್ರಿಯ ಸಖಿ,
ನನ್ನಿಂದೇನು ಸಾಧ್ಯ ? “ನಾನು ಅತ್ಯಂತ ನಿಕೃಷ್ಟ ಜೀವಿ” ‘ನನ್ನಿಂದ ಯಾರಿಗೂ ಏನೂ ಪ್ರಯೋಜನವಿಲ್ಲ’ ಎಂದು ಹಲುಬುವ ನಿರಾಶಾವಾದಿಗಳನ್ನು ನಮ್ಮ ಸುತ್ತಮುತ್ತ ಕಾಣುತ್ತಲೇ ಇರುತ್ತೇವೆ. ಇಂತಹವರನ್ನು ಕಂಡೇ ಇರಬೇಕು ಕವಿ ಎಸ್. ವಿ. ಪರಮೇಶ್ವರಭಟ್ಟರು ತಮ್ಮ ಕವನವೊಂದರಲ್ಲಿ ಹೀಗೆ ಹೇಳಿದ್ದಾರೆ.
ವಿಶ್ವವ್ಯಾಪಿ ತಮದ
ಮುಂದೆ ತನ್ನ ದೀಪವೆ?
ತನ್ನ ದಿಟ್ಪವೊಂದರಿಂದೆ
ಕತ್ತಲಳಿವದೇ?
ಎನುವ ಶಂಕೆ ಚುಕ್ಕಿಗೇಕೆ?
ಏಕೆ ಹೆದರಿಕೆ?
ಬೆಳಗಲೆಂದು ಹುಟ್ಟಿದಂದು
ಬೆಳಗದಿರುವುದೇ?
ಎಷ್ಟೊಂದು ಸ್ಫೂರ್ತಿದಾಯಕ ಕವನದ ಸಾಲುಗಳಲ್ಲವೇ ಸಖಿ? ದೊಡ್ಡ ಆಕಾಶದಲ್ಲಿ ಪುಟ್ಟ ತಾರೆಯೊಂದು ಇಷ್ಟೊಂದು ಕತ್ತಲಿನಲ್ಲಿ ತನ್ನ ಬೆಳಕು ಯಾವ ಮೂಲೆಗೆ? ತನ್ನ ದೀಪವೊಂದರಿಂದಲೇ ಕತ್ತಲು ಅಳಿಯುವುದೇ? ಎಂದು ಹೆದರುತ್ತದೆ. ಆದರೆ ಕತ್ತಲು ಎಷ್ಟೇ ಇರಲಿ ಬೆಳಗಲೆಂದೇ ಅದು ಹುಟ್ಟಿರುವದು.

ಹಾಗೇ ಮನುಷ್ಯನೂ ಕೂಡ ಪ್ರತಿಯೊಬ್ಬನಿಗೂ ಅವನವನದೇ ಆದ ವಿಶಿಷ್ಟತೆ, ಬೆಳಕು ಇದ್ದೇ ಇರುತ್ತದೆ. ಅದನ್ನವನು ಕಂಡುಕೊಂಡು ಬಾಳಬೇಕು. ಬೆಳಕು ನೀಡಬೇಕು. ಪ್ರತಿಯೊಬ್ಬ ಜೀವಿಯೂ ಇಲ್ಲಿ ಜನ್ಮ ತಳೆದು ಬಂದ ಮೇಲೆ ಅವನವನ ಕರ್ತವ್ಯವನ್ನು ಅವನು ನಿಭಾಯಿಸಲೇಬೇಕು. ಕಷ್ಟವೆಂದು ಸುಮ್ಮನೆ ಕೂರುವಂತಿಲ್ಲ. ‘ತನ್ನಿಂದ ಏನೂ ಸಾಧ್ಯವಿಲ್ಲ’ ಎಂಬ ನಿರಭಿಮಾನವೂ ಬೇಡ. ಹಾಗೇ ‘ತನ್ನಿಂದಲೇ ಪ್ರಪಂಚವೆಲ್ಲಾ ಎಂಬ ದುರಭಿಮಾನವೂ ಬೇಡ. ತನ್ನಿಂದ ಏನಾದರೂ ಸಾಧಿಸಲು ಸಾಧ್ಯ ಎಂದು ವ್ಯಕ್ತಿ ಮನಸ್ಸು ಮಾಡಿದನೆಂದರೆ ಅರ್ಧ ಕೆಲಸ ಆದಂತೆಯೇ ಎನ್ನುತ್ತಾರೆ ಹಿರಿಯರು. ಅದಕ್ಕೆಂದೇ
ಕವಿ ಶೇಕ್ಸ್‍ಪಿಯರ್ ಹೀಗೆ ಹೇಳುತ್ತಾನೆ. ‘Where there is will there is a way’ ಎಲ್ಲಿ ಗುರಿ ಇದೆಯೋ ಅಲ್ಲಿ ದಾರಿಯೂ ಇದ್ದೇ ಇದೆ ಎಂದು.

ಪ್ರಿಯ ಸಖಿ, ಸೂರ್ಯನಂತೆ ಜಗವನ್ನೇ ಬೆಳಗಬಲ್ಲೆನೆಂಬ ಹುಂಬತನವಿಲ್ಲದಿದ್ದರೂ ಚುಕ್ಕಿಯಾಗಿಯೇ ಬೆಳಗಿ ನನ್ನ ಸುತ್ತಮುತ್ತಲಾದರೂ ಸರಿ ಬೆಳಕು ನೀಡುವೆನೆಂಬ ಆತ್ಮವಿಶ್ವಾಸ, ಆಶಾವಾದ, ನಂಬಿಕೆ ನಮ್ಮದಾದರೆ ಅಷ್ಟೇ ಸಾಕು. ದಾರಿ ಹೇಗೋ ತಾನೇ ತೆರೆದುಕೊಳ್ಳುತ್ತಾ ಸಾಗುತ್ತದೆ ! ನೀನೇನೆನ್ನುತ್ತೀ ಸಖಿ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...