ನಿನ್ನೆದೆಯ ದನಿಯ ಖುಷಿ

ನಿನ್ನೆದೆಯ ದನಿಯ ಖುಷಿ

ಪ್ರಿಯ ಸಖಿ,
ಬಹಳಷ್ಟು ಸಂದರ್ಭಗಳಲ್ಲಿ ಧರ್ಮ-ಶಾಸ್ತ್ರಕ್ಕೆ ಎದುರಾಗಿ ಮೌಲ್ಯ, ಮಾನವೀಯತೆಯ ನಂಬುಗೆಗಳು ಬಂದಾಗ ಯಾವದು ಸರಿ ? ಯಾವುದು ತಪ್ಪು ಎಂದು ಗೊಂದಲಕ್ಕೊಳಗಾಗುತ್ತೇವೆ. ಇಂತಹ ಸಂದರ್ಭದಲ್ಲೇ ಕವಿ ಕುವೆಂಪು ಅವರ ‘ಯಾವ ಕಾಲದ ಶಾಸ್ತ್ರವೇನು ಹೇಳಿದರೇನು?’ ಎಂಬ ಕವನದ ಸಾಲುಗಳು ನೆನಪಾಗುತ್ತಿವೆ.Chitte

     ಯಾವ ಕಾಲದ ಶಾಸ್ತ್ರವೇನು ಹೇಳಿದರೇನು?
ಎದೆಯ ದನಿಗೂ ಮಿಗಿಲು ಶಾಸ್ತ್ರವಿಹುದೇನು?
ಎಂದೋ ಮನು ಬರೆದಿಟ್ಟುದಿಂದೆಮಗೆ ಕಟ್ಟೇನು?
ನಿನ್ನೆದೆಯ ದನಿಯೆ ಋಷಿ! ಮನು ನಿನಗೆ ನೀನು!

ಎನ್ನುತ್ತಾ ಪದ್ಯದ ಕೊನೆಯಲ್ಲಿ

ಕಾಲಕ್ಕೆ ತಕ್ಕಂತೆ, ದೇಶಕ್ಕೆ ತಕ್ಕಂತೆ
ನಮ್ಮ ಹೃದಯವೇ ನಮಗೆ ಶ್ರೀಧರ್ಮಸೂತ್ರ!

ಎಂದಿದ್ದಾರೆ. ಹೌದಲ್ಲವೇ ಸಖಿ. ನಿಜವಾದ ಪ್ರಾಮಾಣಿಕ ಮನಸ್ಸು ಸಂದರ್ಭಕ್ಕೆ ತಕ್ಕಂತೆ ವಿವೇಚನೆಯಿಂದ ತೆಗೆದುಕೊಳ್ಳುವ ತೀರ್ಮಾನವೇ ಸರಿಯಾದದ್ದು. ಅದು ಬಿಟ್ಟು ಎಂದೋ ಹೇಳಿದ ಧರ್ಮ-ಶಾಸ್ತ್ರಗಳನ್ನೇ ಇಂದಿನ ನಮ್ಮ ಬದಲಾದ ಎಲ್ಲ ಸಂದರ್ಭಗಳಲ್ಲಿಯೂ ಅಳವಡಿಸಿಕೊಳ್ಳಲಾದೀತೇ. ಸದಾ ಕಾಲ ಎಚ್ಚೆತ್ತಿರುವ, ಜಾಗೃತ ಮನಸ್ಸೊಂದು ನಮ್ಮೊಳಗಿದ್ದರೆ ಸರಿ-ತಪ್ಪುಗಳನ್ನು ವಿವೇಚಿಸಿ ತೀರ್ಮಾನ ನೀಡುತ್ತದೆ. ಆಗ ‘ನಿನ್ನೆದೆಯ ದನಿಯೆ ಋಷಿ! ಮನು ನಿನಗೆ ನೀನು’ ಎಂಬ ಮಾತು ಸತ್ಯವಾಗುತ್ತದೆ. ಸಖಿ, ಇದಕ್ಕೆ ಪೂರಕವಾಗಿ ಥ್ಯಾಕರೇ ಎಂಬ ಚಿಂತಕನ ಚಿಂತನೆ ಹೀಗೆ ಸಾಗುತ್ತದೆ ’You will never be sorry for doing your level best, for hearing before judging, for thinking before speaking, for standing by your principles’ ನಿನಗೆ ಸಾಧ್ಯವಾದಷ್ಟು ಒಳಿತನ್ನು ಮಾಡುತ್ತಿದ್ದಾಗ, ತೀರ್ಮಾನ ಕೊಡುವ ಮುನ್ನ ಕೇಳಿ ತಿಳಿದುಕೊಂಡಿದ್ದಾಗ, ಮಾತನಾಡುವ ಮೊದಲು ಆಲೋಚಿಸಿದ್ದಾಗ, ನಿನ್ನ ತತ್ವಗಳಿಗೆ ನೀನು ಬದ್ಧನಾಗಿದ್ದಾಗ ಪಶ್ಚಾತ್ತಾಪ ಪಡುವದೇ ಬೇಕಿಲ್ಲ’ ಎನ್ನುತ್ತಾನೆ.

ಈ ಚಿಂತನೆಗಳನ್ನು ನಮ್ಮ ಬದುಕಿನಲ್ಲೂ ಅಳವಡಿಸಿಕೊಂಡಾಗ ನಾವು ಯಾವುದು ಸರಿ, ಯಾವುದು ತಪ್ಪೆಂದು ಗೊಂದಲಕ್ಕೊಳಗಾಗುವುದೂ ಇಲ್ಲ. ನಮ್ಮ ತತ್ವಗಳು ಪ್ರಾಮಾಣಿಕವಾಗಿದ್ದಾಗ ಅವಗಳನ್ನು ನಾವು ಮನಃಪೂರ್ವಕವಾಗಿ ನಂಬಿದ್ದಾಗ, ನಮ್ಮ ನಿರ್ಧಾರಕ್ಕಾಗಿ ಪಶ್ಚಾತ್ತಾಪ ಪಡುವುದೂ ಇಲ್ಲ. ಅಲ್ಲವೇ ಸಖಿ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶಿವನಿಗ್ಯಾಕೆ ಮೂರ್‍ ಕಣ್ಣು?
Next post ನಾಲ್ಕು ವರ್ಷದ ಕಾಲ

ಸಣ್ಣ ಕತೆ

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…