Home / ಲೇಖನ / ಇತರೆ / ನಿನ್ನೆದೆಯ ದನಿಯ ಖುಷಿ

ನಿನ್ನೆದೆಯ ದನಿಯ ಖುಷಿ

ಪ್ರಿಯ ಸಖಿ,
ಬಹಳಷ್ಟು ಸಂದರ್ಭಗಳಲ್ಲಿ ಧರ್ಮ-ಶಾಸ್ತ್ರಕ್ಕೆ ಎದುರಾಗಿ ಮೌಲ್ಯ, ಮಾನವೀಯತೆಯ ನಂಬುಗೆಗಳು ಬಂದಾಗ ಯಾವದು ಸರಿ ? ಯಾವುದು ತಪ್ಪು ಎಂದು ಗೊಂದಲಕ್ಕೊಳಗಾಗುತ್ತೇವೆ. ಇಂತಹ ಸಂದರ್ಭದಲ್ಲೇ ಕವಿ ಕುವೆಂಪು ಅವರ ‘ಯಾವ ಕಾಲದ ಶಾಸ್ತ್ರವೇನು ಹೇಳಿದರೇನು?’ ಎಂಬ ಕವನದ ಸಾಲುಗಳು ನೆನಪಾಗುತ್ತಿವೆ.Chitte

     ಯಾವ ಕಾಲದ ಶಾಸ್ತ್ರವೇನು ಹೇಳಿದರೇನು?
ಎದೆಯ ದನಿಗೂ ಮಿಗಿಲು ಶಾಸ್ತ್ರವಿಹುದೇನು?
ಎಂದೋ ಮನು ಬರೆದಿಟ್ಟುದಿಂದೆಮಗೆ ಕಟ್ಟೇನು?
ನಿನ್ನೆದೆಯ ದನಿಯೆ ಋಷಿ! ಮನು ನಿನಗೆ ನೀನು!

ಎನ್ನುತ್ತಾ ಪದ್ಯದ ಕೊನೆಯಲ್ಲಿ

ಕಾಲಕ್ಕೆ ತಕ್ಕಂತೆ, ದೇಶಕ್ಕೆ ತಕ್ಕಂತೆ
ನಮ್ಮ ಹೃದಯವೇ ನಮಗೆ ಶ್ರೀಧರ್ಮಸೂತ್ರ!

ಎಂದಿದ್ದಾರೆ. ಹೌದಲ್ಲವೇ ಸಖಿ. ನಿಜವಾದ ಪ್ರಾಮಾಣಿಕ ಮನಸ್ಸು ಸಂದರ್ಭಕ್ಕೆ ತಕ್ಕಂತೆ ವಿವೇಚನೆಯಿಂದ ತೆಗೆದುಕೊಳ್ಳುವ ತೀರ್ಮಾನವೇ ಸರಿಯಾದದ್ದು. ಅದು ಬಿಟ್ಟು ಎಂದೋ ಹೇಳಿದ ಧರ್ಮ-ಶಾಸ್ತ್ರಗಳನ್ನೇ ಇಂದಿನ ನಮ್ಮ ಬದಲಾದ ಎಲ್ಲ ಸಂದರ್ಭಗಳಲ್ಲಿಯೂ ಅಳವಡಿಸಿಕೊಳ್ಳಲಾದೀತೇ. ಸದಾ ಕಾಲ ಎಚ್ಚೆತ್ತಿರುವ, ಜಾಗೃತ ಮನಸ್ಸೊಂದು ನಮ್ಮೊಳಗಿದ್ದರೆ ಸರಿ-ತಪ್ಪುಗಳನ್ನು ವಿವೇಚಿಸಿ ತೀರ್ಮಾನ ನೀಡುತ್ತದೆ. ಆಗ ‘ನಿನ್ನೆದೆಯ ದನಿಯೆ ಋಷಿ! ಮನು ನಿನಗೆ ನೀನು’ ಎಂಬ ಮಾತು ಸತ್ಯವಾಗುತ್ತದೆ. ಸಖಿ, ಇದಕ್ಕೆ ಪೂರಕವಾಗಿ ಥ್ಯಾಕರೇ ಎಂಬ ಚಿಂತಕನ ಚಿಂತನೆ ಹೀಗೆ ಸಾಗುತ್ತದೆ ’You will never be sorry for doing your level best, for hearing before judging, for thinking before speaking, for standing by your principles’ ನಿನಗೆ ಸಾಧ್ಯವಾದಷ್ಟು ಒಳಿತನ್ನು ಮಾಡುತ್ತಿದ್ದಾಗ, ತೀರ್ಮಾನ ಕೊಡುವ ಮುನ್ನ ಕೇಳಿ ತಿಳಿದುಕೊಂಡಿದ್ದಾಗ, ಮಾತನಾಡುವ ಮೊದಲು ಆಲೋಚಿಸಿದ್ದಾಗ, ನಿನ್ನ ತತ್ವಗಳಿಗೆ ನೀನು ಬದ್ಧನಾಗಿದ್ದಾಗ ಪಶ್ಚಾತ್ತಾಪ ಪಡುವದೇ ಬೇಕಿಲ್ಲ’ ಎನ್ನುತ್ತಾನೆ.

ಈ ಚಿಂತನೆಗಳನ್ನು ನಮ್ಮ ಬದುಕಿನಲ್ಲೂ ಅಳವಡಿಸಿಕೊಂಡಾಗ ನಾವು ಯಾವುದು ಸರಿ, ಯಾವುದು ತಪ್ಪೆಂದು ಗೊಂದಲಕ್ಕೊಳಗಾಗುವುದೂ ಇಲ್ಲ. ನಮ್ಮ ತತ್ವಗಳು ಪ್ರಾಮಾಣಿಕವಾಗಿದ್ದಾಗ ಅವಗಳನ್ನು ನಾವು ಮನಃಪೂರ್ವಕವಾಗಿ ನಂಬಿದ್ದಾಗ, ನಮ್ಮ ನಿರ್ಧಾರಕ್ಕಾಗಿ ಪಶ್ಚಾತ್ತಾಪ ಪಡುವುದೂ ಇಲ್ಲ. ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...