Home / ಲೇಖನ / ಇತರೆ / ನಿನ್ನೆದೆಯ ದನಿಯ ಖುಷಿ

ನಿನ್ನೆದೆಯ ದನಿಯ ಖುಷಿ

ಪ್ರಿಯ ಸಖಿ,
ಬಹಳಷ್ಟು ಸಂದರ್ಭಗಳಲ್ಲಿ ಧರ್ಮ-ಶಾಸ್ತ್ರಕ್ಕೆ ಎದುರಾಗಿ ಮೌಲ್ಯ, ಮಾನವೀಯತೆಯ ನಂಬುಗೆಗಳು ಬಂದಾಗ ಯಾವದು ಸರಿ ? ಯಾವುದು ತಪ್ಪು ಎಂದು ಗೊಂದಲಕ್ಕೊಳಗಾಗುತ್ತೇವೆ. ಇಂತಹ ಸಂದರ್ಭದಲ್ಲೇ ಕವಿ ಕುವೆಂಪು ಅವರ ‘ಯಾವ ಕಾಲದ ಶಾಸ್ತ್ರವೇನು ಹೇಳಿದರೇನು?’ ಎಂಬ ಕವನದ ಸಾಲುಗಳು ನೆನಪಾಗುತ್ತಿವೆ.Chitte

     ಯಾವ ಕಾಲದ ಶಾಸ್ತ್ರವೇನು ಹೇಳಿದರೇನು?
ಎದೆಯ ದನಿಗೂ ಮಿಗಿಲು ಶಾಸ್ತ್ರವಿಹುದೇನು?
ಎಂದೋ ಮನು ಬರೆದಿಟ್ಟುದಿಂದೆಮಗೆ ಕಟ್ಟೇನು?
ನಿನ್ನೆದೆಯ ದನಿಯೆ ಋಷಿ! ಮನು ನಿನಗೆ ನೀನು!

ಎನ್ನುತ್ತಾ ಪದ್ಯದ ಕೊನೆಯಲ್ಲಿ

ಕಾಲಕ್ಕೆ ತಕ್ಕಂತೆ, ದೇಶಕ್ಕೆ ತಕ್ಕಂತೆ
ನಮ್ಮ ಹೃದಯವೇ ನಮಗೆ ಶ್ರೀಧರ್ಮಸೂತ್ರ!

ಎಂದಿದ್ದಾರೆ. ಹೌದಲ್ಲವೇ ಸಖಿ. ನಿಜವಾದ ಪ್ರಾಮಾಣಿಕ ಮನಸ್ಸು ಸಂದರ್ಭಕ್ಕೆ ತಕ್ಕಂತೆ ವಿವೇಚನೆಯಿಂದ ತೆಗೆದುಕೊಳ್ಳುವ ತೀರ್ಮಾನವೇ ಸರಿಯಾದದ್ದು. ಅದು ಬಿಟ್ಟು ಎಂದೋ ಹೇಳಿದ ಧರ್ಮ-ಶಾಸ್ತ್ರಗಳನ್ನೇ ಇಂದಿನ ನಮ್ಮ ಬದಲಾದ ಎಲ್ಲ ಸಂದರ್ಭಗಳಲ್ಲಿಯೂ ಅಳವಡಿಸಿಕೊಳ್ಳಲಾದೀತೇ. ಸದಾ ಕಾಲ ಎಚ್ಚೆತ್ತಿರುವ, ಜಾಗೃತ ಮನಸ್ಸೊಂದು ನಮ್ಮೊಳಗಿದ್ದರೆ ಸರಿ-ತಪ್ಪುಗಳನ್ನು ವಿವೇಚಿಸಿ ತೀರ್ಮಾನ ನೀಡುತ್ತದೆ. ಆಗ ‘ನಿನ್ನೆದೆಯ ದನಿಯೆ ಋಷಿ! ಮನು ನಿನಗೆ ನೀನು’ ಎಂಬ ಮಾತು ಸತ್ಯವಾಗುತ್ತದೆ. ಸಖಿ, ಇದಕ್ಕೆ ಪೂರಕವಾಗಿ ಥ್ಯಾಕರೇ ಎಂಬ ಚಿಂತಕನ ಚಿಂತನೆ ಹೀಗೆ ಸಾಗುತ್ತದೆ ’You will never be sorry for doing your level best, for hearing before judging, for thinking before speaking, for standing by your principles’ ನಿನಗೆ ಸಾಧ್ಯವಾದಷ್ಟು ಒಳಿತನ್ನು ಮಾಡುತ್ತಿದ್ದಾಗ, ತೀರ್ಮಾನ ಕೊಡುವ ಮುನ್ನ ಕೇಳಿ ತಿಳಿದುಕೊಂಡಿದ್ದಾಗ, ಮಾತನಾಡುವ ಮೊದಲು ಆಲೋಚಿಸಿದ್ದಾಗ, ನಿನ್ನ ತತ್ವಗಳಿಗೆ ನೀನು ಬದ್ಧನಾಗಿದ್ದಾಗ ಪಶ್ಚಾತ್ತಾಪ ಪಡುವದೇ ಬೇಕಿಲ್ಲ’ ಎನ್ನುತ್ತಾನೆ.

ಈ ಚಿಂತನೆಗಳನ್ನು ನಮ್ಮ ಬದುಕಿನಲ್ಲೂ ಅಳವಡಿಸಿಕೊಂಡಾಗ ನಾವು ಯಾವುದು ಸರಿ, ಯಾವುದು ತಪ್ಪೆಂದು ಗೊಂದಲಕ್ಕೊಳಗಾಗುವುದೂ ಇಲ್ಲ. ನಮ್ಮ ತತ್ವಗಳು ಪ್ರಾಮಾಣಿಕವಾಗಿದ್ದಾಗ ಅವಗಳನ್ನು ನಾವು ಮನಃಪೂರ್ವಕವಾಗಿ ನಂಬಿದ್ದಾಗ, ನಮ್ಮ ನಿರ್ಧಾರಕ್ಕಾಗಿ ಪಶ್ಚಾತ್ತಾಪ ಪಡುವುದೂ ಇಲ್ಲ. ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...