Home / ಲೇಖನ / ಇತರೆ / ನಿಲುವು

ನಿಲುವು

ಪ್ರಿಯ ಸಖಿ,
ಇದು ಕಂಪ್ಯೂಟರ್ ಯುಗ. ಬಟನ್ ಒತ್ತಿದರೆ ಸಾಕು ಬೇಕೆಂದ ಮಾಹಿತಿ ನಿಮಿಷಾರ್ಧದಲ್ಲಿ ಕಣ್ಮುಂದೆ ಬರುತ್ತದೆ. ಇದು ಮಾಹಿತಿಯ ವಿಷಯಕ್ಕಾಯ್ತು. ಆದರೆ, ವ್ಯಕ್ತಿಯೊಬ್ಬನ ಭಾವನೆಗಳನ್ನು ಹೀಗೆ ಇಷ್ಟೇ ಸಲೀಸಾಗಿ ಅರ್ಧೈಸಲಾದೀತೇ? ವ್ಯಕ್ತಿಯ ಭಾವನೆಗಳನೇಕ ಇಂದಿಗೂ ನಿಗೂಢವಾಗಿಯೇ ಉಳಿದಿವೆ. ಎಷ್ಟೇ ಸರಳ ವ್ಯಕ್ತಿಯನ್ನೂ ಪರಿಪೂರ್ಣವಾಗಿ ಅರ್ಥ ಮಾಡಿಕೊಳ್ಳುವುದು ಕಷ್ಟದ ಮಾತೇ. ಅದಕ್ಕೆಂದೇ ವ್ಯಕ್ತಿ ಗುಂಪಿನಲ್ಲಿದ್ದಾಗಲೂ ಒಬ್ಬಂಟಿಯೇ! ಅವನ ಮನದ ಭಾವನೆಗಳು ಅವನಿಗಷ್ಟೇ ಪರಿಪೂರ್ಣವಾಗಿ ಅರ್ಥವಾದೀತು. ಎಷ್ಟೆಲ್ಲಾ ಸೃಷ್ಟಿಸಿರುವ ಮಾನವನಿಗೆ, ಮನಸ್ಸಿಗೊಂದು ಸಮರ್ಥ ಕನ್ನಡಿಯನ್ನು, ವ್ಯಕ್ತಿಯ ಮನಸ್ಸನ್ನೋದುವ ಕಂಪ್ಯೂಟರ್ ಒಂದನ್ನು ಇಂದಿಗೂ ಸೃಷ್ಟಿಸಲಾಗಿಲ್ಲ.

ವ್ಯಕ್ತಿಯೊಬ್ಬ ಅರ್ಥವಾಗದಿರುವುದಕ್ಕೆ ಒಂದು ಕಾರಣ ಅವನು ಹಾಕಿಕೊಂಡಿರುವ ಮುಖವಾಡಗಳು. ಸಮಯಕ್ಕೆ ತಕ್ಕಂತೆ, ಎದುರಿನ ವ್ಯಕ್ತಿಗೆ ತಕ್ಕಂತೆ, ಸಂದರ್ಭಕ್ಕೆ ತಕ್ಕಂತೆ ಮುಖವಾಡಗಳನ್ನು ಹಾಕಿಕೊಳ್ಳುವ ಕಲೆ ಮನುಷ್ಯನಿಗೆ ಚೆನ್ನಾಗಿ ಕರಗತವಾಗಿದೆ. ಕೆಲವೊಮ್ಮೆ ತಾನು ತೊಟ್ಟುಕೊಂಡ ಮುಖವಾಡವೇ ನಿಜಮುಖವೆಂದು ಅವನ ಮುಖವಾಡ ಸಮರ್ಥವಾಗಿ ನಟನೆಯಾಡುತ್ತದೆ.

ಹಾಗೆಂದು ವ್ಯಕ್ತಿಯೊಬ್ಬನಿಗೆ ಖಾಸಗಿ ಬದುಕೊಂದು ಇರಲೇಬಾರದೆಂದು ಇದರರ್ಥವಲ್ಲ. ಆದರೆ ತನ್ನ ವ್ಯಕ್ತಿತ್ವವನ್ನು ಗಟ್ಟಿಗೊಳಿಸಿಕೊಂಡು ಬದುಕುವ ವ್ಯಕ್ತಿ ಪೊಳ್ಳು ಸ್ವಾರ್ಥಕ್ಕೆ ಬಲಿಯಾಗಿ ಹೇಗೆಂದರೆ ಹಾಗೆ ವ್ಯಕ್ತಿತ್ವ ಬದಲಿಸುವ ಊಸರವಳ್ಳಿಯಾಗಬಾರದಲ್ಲವೇ ಸಖಿ? ಜಿ. ಎಸ್. ಶಿವರುದ್ರಪ್ಪನವರ ‘ನಿಲುವು’ ಎಂಬ ಈ ಕವನದ ಸಾಲುಗಳು ಇದನ್ನೇ ಸಮರ್ಥಿಸುತ್ತವೆ.

ಬಚ್ಚಿಟ್ಟುಕೊಂಡು ಬದುಕುವುದು ನನಗಿಷ್ಟವಿಲ್ಲ
ಹಾಗಂತ ಎಲ್ಲವನ್ನೂ ಬಿಚ್ಚಿ ಹರಾಜಿಗಿಡುತ್ತೇನೆಂದು
ಇದರರ್ಥವಲ್ಲ
ಬಹುದೊಡ್ಡ ಮಾತನಾಡುತ್ತ
ದಿನದಿನದ ಸರಳ ಸಾಧಾರಣದ ಬದುಕಿ –
ಗವಮಾನ ಮಾಡುವವರನ್ನು ಕಂಡರೆ
ನನಗೆ ಆಗುವುದಿಲ್ಲ
ತೂಗಾಡುವ ಕಿರೀಟಗಳಿಗೆ ತಕ್ಕಂತೆ
ತಲೆಯ ಆಕಾರಗಳನ್ನು ಬದಲಾಯಿಸುತ್ತ
ಪರದಾಡುವುದು ನನಗೆ ಅಭ್ಯಾಸವಿಲ್ಲ

ಎನ್ನುತ್ತಾರೆ. ವ್ಯಕ್ತಿಯೊಬ್ಬ ಪ್ರಾಮಾಣಿಕನಾದಾಗ ಮುಖವಾಡಗಳಿಲ್ಲದೇ ಕಿರೀಟವಿದೆಯೆಂದು ಅದರ ಆಕಾರಕ್ಕೆ ತಕ್ಕಂತೆ ತನ್ನ ತಲೆಯನ್ನು ಬದಲಿಸದೇ ತನ್ನ ನಿಲುವನ್ನು, ತನ್ನ ವ್ಯಕ್ತಿತ್ವವನ್ನು ಸಮರ್ಥಿಸುವಂತೆ ಪಾರದರ್ಶಕವಾಗಿ ಬದುಕಿದರೆ ಅದಕ್ಕಿಂತಾ ದೊಡ್ಡ ಬದುಕು ಬೇರಾವುದಿದೆ? ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...