Home / ಲೇಖನ / ಇತರೆ / ನಿಲುವು

ನಿಲುವು

ಪ್ರಿಯ ಸಖಿ,
ಇದು ಕಂಪ್ಯೂಟರ್ ಯುಗ. ಬಟನ್ ಒತ್ತಿದರೆ ಸಾಕು ಬೇಕೆಂದ ಮಾಹಿತಿ ನಿಮಿಷಾರ್ಧದಲ್ಲಿ ಕಣ್ಮುಂದೆ ಬರುತ್ತದೆ. ಇದು ಮಾಹಿತಿಯ ವಿಷಯಕ್ಕಾಯ್ತು. ಆದರೆ, ವ್ಯಕ್ತಿಯೊಬ್ಬನ ಭಾವನೆಗಳನ್ನು ಹೀಗೆ ಇಷ್ಟೇ ಸಲೀಸಾಗಿ ಅರ್ಧೈಸಲಾದೀತೇ? ವ್ಯಕ್ತಿಯ ಭಾವನೆಗಳನೇಕ ಇಂದಿಗೂ ನಿಗೂಢವಾಗಿಯೇ ಉಳಿದಿವೆ. ಎಷ್ಟೇ ಸರಳ ವ್ಯಕ್ತಿಯನ್ನೂ ಪರಿಪೂರ್ಣವಾಗಿ ಅರ್ಥ ಮಾಡಿಕೊಳ್ಳುವುದು ಕಷ್ಟದ ಮಾತೇ. ಅದಕ್ಕೆಂದೇ ವ್ಯಕ್ತಿ ಗುಂಪಿನಲ್ಲಿದ್ದಾಗಲೂ ಒಬ್ಬಂಟಿಯೇ! ಅವನ ಮನದ ಭಾವನೆಗಳು ಅವನಿಗಷ್ಟೇ ಪರಿಪೂರ್ಣವಾಗಿ ಅರ್ಥವಾದೀತು. ಎಷ್ಟೆಲ್ಲಾ ಸೃಷ್ಟಿಸಿರುವ ಮಾನವನಿಗೆ, ಮನಸ್ಸಿಗೊಂದು ಸಮರ್ಥ ಕನ್ನಡಿಯನ್ನು, ವ್ಯಕ್ತಿಯ ಮನಸ್ಸನ್ನೋದುವ ಕಂಪ್ಯೂಟರ್ ಒಂದನ್ನು ಇಂದಿಗೂ ಸೃಷ್ಟಿಸಲಾಗಿಲ್ಲ.

ವ್ಯಕ್ತಿಯೊಬ್ಬ ಅರ್ಥವಾಗದಿರುವುದಕ್ಕೆ ಒಂದು ಕಾರಣ ಅವನು ಹಾಕಿಕೊಂಡಿರುವ ಮುಖವಾಡಗಳು. ಸಮಯಕ್ಕೆ ತಕ್ಕಂತೆ, ಎದುರಿನ ವ್ಯಕ್ತಿಗೆ ತಕ್ಕಂತೆ, ಸಂದರ್ಭಕ್ಕೆ ತಕ್ಕಂತೆ ಮುಖವಾಡಗಳನ್ನು ಹಾಕಿಕೊಳ್ಳುವ ಕಲೆ ಮನುಷ್ಯನಿಗೆ ಚೆನ್ನಾಗಿ ಕರಗತವಾಗಿದೆ. ಕೆಲವೊಮ್ಮೆ ತಾನು ತೊಟ್ಟುಕೊಂಡ ಮುಖವಾಡವೇ ನಿಜಮುಖವೆಂದು ಅವನ ಮುಖವಾಡ ಸಮರ್ಥವಾಗಿ ನಟನೆಯಾಡುತ್ತದೆ.

ಹಾಗೆಂದು ವ್ಯಕ್ತಿಯೊಬ್ಬನಿಗೆ ಖಾಸಗಿ ಬದುಕೊಂದು ಇರಲೇಬಾರದೆಂದು ಇದರರ್ಥವಲ್ಲ. ಆದರೆ ತನ್ನ ವ್ಯಕ್ತಿತ್ವವನ್ನು ಗಟ್ಟಿಗೊಳಿಸಿಕೊಂಡು ಬದುಕುವ ವ್ಯಕ್ತಿ ಪೊಳ್ಳು ಸ್ವಾರ್ಥಕ್ಕೆ ಬಲಿಯಾಗಿ ಹೇಗೆಂದರೆ ಹಾಗೆ ವ್ಯಕ್ತಿತ್ವ ಬದಲಿಸುವ ಊಸರವಳ್ಳಿಯಾಗಬಾರದಲ್ಲವೇ ಸಖಿ? ಜಿ. ಎಸ್. ಶಿವರುದ್ರಪ್ಪನವರ ‘ನಿಲುವು’ ಎಂಬ ಈ ಕವನದ ಸಾಲುಗಳು ಇದನ್ನೇ ಸಮರ್ಥಿಸುತ್ತವೆ.

ಬಚ್ಚಿಟ್ಟುಕೊಂಡು ಬದುಕುವುದು ನನಗಿಷ್ಟವಿಲ್ಲ
ಹಾಗಂತ ಎಲ್ಲವನ್ನೂ ಬಿಚ್ಚಿ ಹರಾಜಿಗಿಡುತ್ತೇನೆಂದು
ಇದರರ್ಥವಲ್ಲ
ಬಹುದೊಡ್ಡ ಮಾತನಾಡುತ್ತ
ದಿನದಿನದ ಸರಳ ಸಾಧಾರಣದ ಬದುಕಿ –
ಗವಮಾನ ಮಾಡುವವರನ್ನು ಕಂಡರೆ
ನನಗೆ ಆಗುವುದಿಲ್ಲ
ತೂಗಾಡುವ ಕಿರೀಟಗಳಿಗೆ ತಕ್ಕಂತೆ
ತಲೆಯ ಆಕಾರಗಳನ್ನು ಬದಲಾಯಿಸುತ್ತ
ಪರದಾಡುವುದು ನನಗೆ ಅಭ್ಯಾಸವಿಲ್ಲ

ಎನ್ನುತ್ತಾರೆ. ವ್ಯಕ್ತಿಯೊಬ್ಬ ಪ್ರಾಮಾಣಿಕನಾದಾಗ ಮುಖವಾಡಗಳಿಲ್ಲದೇ ಕಿರೀಟವಿದೆಯೆಂದು ಅದರ ಆಕಾರಕ್ಕೆ ತಕ್ಕಂತೆ ತನ್ನ ತಲೆಯನ್ನು ಬದಲಿಸದೇ ತನ್ನ ನಿಲುವನ್ನು, ತನ್ನ ವ್ಯಕ್ತಿತ್ವವನ್ನು ಸಮರ್ಥಿಸುವಂತೆ ಪಾರದರ್ಶಕವಾಗಿ ಬದುಕಿದರೆ ಅದಕ್ಕಿಂತಾ ದೊಡ್ಡ ಬದುಕು ಬೇರಾವುದಿದೆ? ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...