Home / ಲೇಖನ / ಇತರೆ / ನಿಲುವು

ನಿಲುವು

ಪ್ರಿಯ ಸಖಿ,
ಇದು ಕಂಪ್ಯೂಟರ್ ಯುಗ. ಬಟನ್ ಒತ್ತಿದರೆ ಸಾಕು ಬೇಕೆಂದ ಮಾಹಿತಿ ನಿಮಿಷಾರ್ಧದಲ್ಲಿ ಕಣ್ಮುಂದೆ ಬರುತ್ತದೆ. ಇದು ಮಾಹಿತಿಯ ವಿಷಯಕ್ಕಾಯ್ತು. ಆದರೆ, ವ್ಯಕ್ತಿಯೊಬ್ಬನ ಭಾವನೆಗಳನ್ನು ಹೀಗೆ ಇಷ್ಟೇ ಸಲೀಸಾಗಿ ಅರ್ಧೈಸಲಾದೀತೇ? ವ್ಯಕ್ತಿಯ ಭಾವನೆಗಳನೇಕ ಇಂದಿಗೂ ನಿಗೂಢವಾಗಿಯೇ ಉಳಿದಿವೆ. ಎಷ್ಟೇ ಸರಳ ವ್ಯಕ್ತಿಯನ್ನೂ ಪರಿಪೂರ್ಣವಾಗಿ ಅರ್ಥ ಮಾಡಿಕೊಳ್ಳುವುದು ಕಷ್ಟದ ಮಾತೇ. ಅದಕ್ಕೆಂದೇ ವ್ಯಕ್ತಿ ಗುಂಪಿನಲ್ಲಿದ್ದಾಗಲೂ ಒಬ್ಬಂಟಿಯೇ! ಅವನ ಮನದ ಭಾವನೆಗಳು ಅವನಿಗಷ್ಟೇ ಪರಿಪೂರ್ಣವಾಗಿ ಅರ್ಥವಾದೀತು. ಎಷ್ಟೆಲ್ಲಾ ಸೃಷ್ಟಿಸಿರುವ ಮಾನವನಿಗೆ, ಮನಸ್ಸಿಗೊಂದು ಸಮರ್ಥ ಕನ್ನಡಿಯನ್ನು, ವ್ಯಕ್ತಿಯ ಮನಸ್ಸನ್ನೋದುವ ಕಂಪ್ಯೂಟರ್ ಒಂದನ್ನು ಇಂದಿಗೂ ಸೃಷ್ಟಿಸಲಾಗಿಲ್ಲ.

ವ್ಯಕ್ತಿಯೊಬ್ಬ ಅರ್ಥವಾಗದಿರುವುದಕ್ಕೆ ಒಂದು ಕಾರಣ ಅವನು ಹಾಕಿಕೊಂಡಿರುವ ಮುಖವಾಡಗಳು. ಸಮಯಕ್ಕೆ ತಕ್ಕಂತೆ, ಎದುರಿನ ವ್ಯಕ್ತಿಗೆ ತಕ್ಕಂತೆ, ಸಂದರ್ಭಕ್ಕೆ ತಕ್ಕಂತೆ ಮುಖವಾಡಗಳನ್ನು ಹಾಕಿಕೊಳ್ಳುವ ಕಲೆ ಮನುಷ್ಯನಿಗೆ ಚೆನ್ನಾಗಿ ಕರಗತವಾಗಿದೆ. ಕೆಲವೊಮ್ಮೆ ತಾನು ತೊಟ್ಟುಕೊಂಡ ಮುಖವಾಡವೇ ನಿಜಮುಖವೆಂದು ಅವನ ಮುಖವಾಡ ಸಮರ್ಥವಾಗಿ ನಟನೆಯಾಡುತ್ತದೆ.

ಹಾಗೆಂದು ವ್ಯಕ್ತಿಯೊಬ್ಬನಿಗೆ ಖಾಸಗಿ ಬದುಕೊಂದು ಇರಲೇಬಾರದೆಂದು ಇದರರ್ಥವಲ್ಲ. ಆದರೆ ತನ್ನ ವ್ಯಕ್ತಿತ್ವವನ್ನು ಗಟ್ಟಿಗೊಳಿಸಿಕೊಂಡು ಬದುಕುವ ವ್ಯಕ್ತಿ ಪೊಳ್ಳು ಸ್ವಾರ್ಥಕ್ಕೆ ಬಲಿಯಾಗಿ ಹೇಗೆಂದರೆ ಹಾಗೆ ವ್ಯಕ್ತಿತ್ವ ಬದಲಿಸುವ ಊಸರವಳ್ಳಿಯಾಗಬಾರದಲ್ಲವೇ ಸಖಿ? ಜಿ. ಎಸ್. ಶಿವರುದ್ರಪ್ಪನವರ ‘ನಿಲುವು’ ಎಂಬ ಈ ಕವನದ ಸಾಲುಗಳು ಇದನ್ನೇ ಸಮರ್ಥಿಸುತ್ತವೆ.

ಬಚ್ಚಿಟ್ಟುಕೊಂಡು ಬದುಕುವುದು ನನಗಿಷ್ಟವಿಲ್ಲ
ಹಾಗಂತ ಎಲ್ಲವನ್ನೂ ಬಿಚ್ಚಿ ಹರಾಜಿಗಿಡುತ್ತೇನೆಂದು
ಇದರರ್ಥವಲ್ಲ
ಬಹುದೊಡ್ಡ ಮಾತನಾಡುತ್ತ
ದಿನದಿನದ ಸರಳ ಸಾಧಾರಣದ ಬದುಕಿ –
ಗವಮಾನ ಮಾಡುವವರನ್ನು ಕಂಡರೆ
ನನಗೆ ಆಗುವುದಿಲ್ಲ
ತೂಗಾಡುವ ಕಿರೀಟಗಳಿಗೆ ತಕ್ಕಂತೆ
ತಲೆಯ ಆಕಾರಗಳನ್ನು ಬದಲಾಯಿಸುತ್ತ
ಪರದಾಡುವುದು ನನಗೆ ಅಭ್ಯಾಸವಿಲ್ಲ

ಎನ್ನುತ್ತಾರೆ. ವ್ಯಕ್ತಿಯೊಬ್ಬ ಪ್ರಾಮಾಣಿಕನಾದಾಗ ಮುಖವಾಡಗಳಿಲ್ಲದೇ ಕಿರೀಟವಿದೆಯೆಂದು ಅದರ ಆಕಾರಕ್ಕೆ ತಕ್ಕಂತೆ ತನ್ನ ತಲೆಯನ್ನು ಬದಲಿಸದೇ ತನ್ನ ನಿಲುವನ್ನು, ತನ್ನ ವ್ಯಕ್ತಿತ್ವವನ್ನು ಸಮರ್ಥಿಸುವಂತೆ ಪಾರದರ್ಶಕವಾಗಿ ಬದುಕಿದರೆ ಅದಕ್ಕಿಂತಾ ದೊಡ್ಡ ಬದುಕು ಬೇರಾವುದಿದೆ? ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...