ನಿಲುವು

ಪ್ರಿಯ ಸಖಿ,
ಇದು ಕಂಪ್ಯೂಟರ್ ಯುಗ. ಬಟನ್ ಒತ್ತಿದರೆ ಸಾಕು ಬೇಕೆಂದ ಮಾಹಿತಿ ನಿಮಿಷಾರ್ಧದಲ್ಲಿ ಕಣ್ಮುಂದೆ ಬರುತ್ತದೆ. ಇದು ಮಾಹಿತಿಯ ವಿಷಯಕ್ಕಾಯ್ತು. ಆದರೆ, ವ್ಯಕ್ತಿಯೊಬ್ಬನ ಭಾವನೆಗಳನ್ನು ಹೀಗೆ ಇಷ್ಟೇ ಸಲೀಸಾಗಿ ಅರ್ಧೈಸಲಾದೀತೇ? ವ್ಯಕ್ತಿಯ ಭಾವನೆಗಳನೇಕ ಇಂದಿಗೂ ನಿಗೂಢವಾಗಿಯೇ ಉಳಿದಿವೆ. ಎಷ್ಟೇ ಸರಳ ವ್ಯಕ್ತಿಯನ್ನೂ ಪರಿಪೂರ್ಣವಾಗಿ ಅರ್ಥ ಮಾಡಿಕೊಳ್ಳುವುದು ಕಷ್ಟದ ಮಾತೇ. ಅದಕ್ಕೆಂದೇ ವ್ಯಕ್ತಿ ಗುಂಪಿನಲ್ಲಿದ್ದಾಗಲೂ ಒಬ್ಬಂಟಿಯೇ! ಅವನ ಮನದ ಭಾವನೆಗಳು ಅವನಿಗಷ್ಟೇ ಪರಿಪೂರ್ಣವಾಗಿ ಅರ್ಥವಾದೀತು. ಎಷ್ಟೆಲ್ಲಾ ಸೃಷ್ಟಿಸಿರುವ ಮಾನವನಿಗೆ, ಮನಸ್ಸಿಗೊಂದು ಸಮರ್ಥ ಕನ್ನಡಿಯನ್ನು, ವ್ಯಕ್ತಿಯ ಮನಸ್ಸನ್ನೋದುವ ಕಂಪ್ಯೂಟರ್ ಒಂದನ್ನು ಇಂದಿಗೂ ಸೃಷ್ಟಿಸಲಾಗಿಲ್ಲ.

ವ್ಯಕ್ತಿಯೊಬ್ಬ ಅರ್ಥವಾಗದಿರುವುದಕ್ಕೆ ಒಂದು ಕಾರಣ ಅವನು ಹಾಕಿಕೊಂಡಿರುವ ಮುಖವಾಡಗಳು. ಸಮಯಕ್ಕೆ ತಕ್ಕಂತೆ, ಎದುರಿನ ವ್ಯಕ್ತಿಗೆ ತಕ್ಕಂತೆ, ಸಂದರ್ಭಕ್ಕೆ ತಕ್ಕಂತೆ ಮುಖವಾಡಗಳನ್ನು ಹಾಕಿಕೊಳ್ಳುವ ಕಲೆ ಮನುಷ್ಯನಿಗೆ ಚೆನ್ನಾಗಿ ಕರಗತವಾಗಿದೆ. ಕೆಲವೊಮ್ಮೆ ತಾನು ತೊಟ್ಟುಕೊಂಡ ಮುಖವಾಡವೇ ನಿಜಮುಖವೆಂದು ಅವನ ಮುಖವಾಡ ಸಮರ್ಥವಾಗಿ ನಟನೆಯಾಡುತ್ತದೆ.

ಹಾಗೆಂದು ವ್ಯಕ್ತಿಯೊಬ್ಬನಿಗೆ ಖಾಸಗಿ ಬದುಕೊಂದು ಇರಲೇಬಾರದೆಂದು ಇದರರ್ಥವಲ್ಲ. ಆದರೆ ತನ್ನ ವ್ಯಕ್ತಿತ್ವವನ್ನು ಗಟ್ಟಿಗೊಳಿಸಿಕೊಂಡು ಬದುಕುವ ವ್ಯಕ್ತಿ ಪೊಳ್ಳು ಸ್ವಾರ್ಥಕ್ಕೆ ಬಲಿಯಾಗಿ ಹೇಗೆಂದರೆ ಹಾಗೆ ವ್ಯಕ್ತಿತ್ವ ಬದಲಿಸುವ ಊಸರವಳ್ಳಿಯಾಗಬಾರದಲ್ಲವೇ ಸಖಿ? ಜಿ. ಎಸ್. ಶಿವರುದ್ರಪ್ಪನವರ ‘ನಿಲುವು’ ಎಂಬ ಈ ಕವನದ ಸಾಲುಗಳು ಇದನ್ನೇ ಸಮರ್ಥಿಸುತ್ತವೆ.

ಬಚ್ಚಿಟ್ಟುಕೊಂಡು ಬದುಕುವುದು ನನಗಿಷ್ಟವಿಲ್ಲ
ಹಾಗಂತ ಎಲ್ಲವನ್ನೂ ಬಿಚ್ಚಿ ಹರಾಜಿಗಿಡುತ್ತೇನೆಂದು
ಇದರರ್ಥವಲ್ಲ
ಬಹುದೊಡ್ಡ ಮಾತನಾಡುತ್ತ
ದಿನದಿನದ ಸರಳ ಸಾಧಾರಣದ ಬದುಕಿ –
ಗವಮಾನ ಮಾಡುವವರನ್ನು ಕಂಡರೆ
ನನಗೆ ಆಗುವುದಿಲ್ಲ
ತೂಗಾಡುವ ಕಿರೀಟಗಳಿಗೆ ತಕ್ಕಂತೆ
ತಲೆಯ ಆಕಾರಗಳನ್ನು ಬದಲಾಯಿಸುತ್ತ
ಪರದಾಡುವುದು ನನಗೆ ಅಭ್ಯಾಸವಿಲ್ಲ

ಎನ್ನುತ್ತಾರೆ. ವ್ಯಕ್ತಿಯೊಬ್ಬ ಪ್ರಾಮಾಣಿಕನಾದಾಗ ಮುಖವಾಡಗಳಿಲ್ಲದೇ ಕಿರೀಟವಿದೆಯೆಂದು ಅದರ ಆಕಾರಕ್ಕೆ ತಕ್ಕಂತೆ ತನ್ನ ತಲೆಯನ್ನು ಬದಲಿಸದೇ ತನ್ನ ನಿಲುವನ್ನು, ತನ್ನ ವ್ಯಕ್ತಿತ್ವವನ್ನು ಸಮರ್ಥಿಸುವಂತೆ ಪಾರದರ್ಶಕವಾಗಿ ಬದುಕಿದರೆ ಅದಕ್ಕಿಂತಾ ದೊಡ್ಡ ಬದುಕು ಬೇರಾವುದಿದೆ? ಅಲ್ಲವೇ ಸಖಿ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಭಾಳ ಒಳ್ಳೇವ್ರ್‍ ನಮ್ ಮಿಸ್ಸು
Next post ಶೆಲ್ಲಿಗೆ

ಸಣ್ಣ ಕತೆ

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

cheap jordans|wholesale air max|wholesale jordans|wholesale jewelry|wholesale jerseys