Home / ಲೇಖನ / ಇತರೆ / ಬರಹವೆಂಬ ಮುತ್ತು

ಬರಹವೆಂಬ ಮುತ್ತು

ಪ್ರಿಯ ಸಖಿ,
ವ್ಯವಹಾರದ ಈ ಜಗತ್ತಿನಲ್ಲಿ ಸಾಹಿತ್ಯವೂ ವ್ಯಾಪಾರವಾಗುತ್ತಿರುವುದನ್ನು ನೋಡುತ್ತಿದ್ದೇವೆ. ತಾನು ಬರೆದ ಸಾಹಿತ್ಯದಿಂದ ತನಗೆ ಸಿಗುವ ಆತ್ಮತೃಪ್ತಿಗಿಂತ, ತನಗೆ ಸಿಗುವ ಹಣ, ಕೀರ್ತಿಯೇ ಮಾನದಂಡವೆನ್ನುವ ಸಾಹಿತಿಗಳನೇಕರು ಇದ್ದಾರೆ. ಇಂತಹವರನ್ನು ಕಂಡಾಗ ಧುತ್ತನೆ ನನ್ನನ್ನೊಂದು ಗೊಂದಲ ಕಾಡಲಾರಂಭಿಸುತ್ತದೆ. ಬರವಣಿಗೆ ಒಂದು ಹೊರಹಾಕುವ ತುರ್ತೋ ಅಥವಾ ಮಾರಾಟಕ್ಕಿಡುವ ಕಲೆಯೋ?

ಭಾವೋತ್ಕರ್ಷದ ತುರ್ತನ್ನು ಹೊರಹಾಕಲೊಂದು ಮಾರ್ಗ ಬರವಣಿಗೆ. ಆದರೆ ಆ ಪ್ರಾಮಾಣಿಕ ಪರಿಪಕ್ವತೆಗಾಗಿ ಕಾಯುವವರೆಷ್ಟು ಮಂದಿ? ಹಸಿಬಿಸಿ ಬೆಂದ ಭಾವಗಳನ್ನೇ ಹಾಳೆಯಲ್ಲಿ ಮೂಡಿಸಿ ಬರೆಯಲೇಬೇಕು ಬರೆದು ಕೀರ್ತಿ, ಹೆಸರು ಸಂಪಾದಿಸಬೇಕು. ಹಣ ಮಾಡಬೇಕು ಎಂಬ ವ್ಯಾವಹಾರಿಕ ಕಾರಣದಿಂದಲೇ ಬರೆಯುವವರು ಹಲವು ಮಂದಿ. ಎಲ್ಲರಿಗೂ ಬರೆವ ಕಲೆ ಸಿದ್ಧಿಸುವುದಿಲ್ಲವಾದರೂ ಸ್ಪಲ್ಪಮಟ್ಟಿನ ಪ್ರಯತ್ನದಿಂದ ಏನೋ ಒಂದು ಬರೆಯಬಹುದು. ‘ಪ್ರತಿಭೆ ಇದ್ದವರು, ಯಾವುದಕ್ಕೂ ಕಾಯಬೇಕಿಲ್ಲ ಬರೆದು ಬಿಸಾಡಿದರೆ ಸಾಕು’ ಎಂಬ ವಿತಂಡವಾದ ಬೇರೆ. ಇಂತಹ ಕಳಪೆ ಸಾಹಿತ್ಯದ ನಡುವೆಯೂ ಬಲವಂತಕ್ಕೆ ಹೊರಹೊಮ್ಮಿಸದ, ತಂತಾನೇ ಹೊರಹೊಮ್ಮಿದ ಶುದ್ಧ ಸಾಹಿತ್ಯ ‘ಸೃಜನಶೀಲ ಬರಹಗಳು’ ಮೂಡುತ್ತಲೇ ಇರುತ್ತವೆ. ಇವು ಕಳಪೆ ಸಾಹಿತ್ಯದಂತೆ ಕ್ಷಣಕಾಲವಷ್ಟೇ ಇದ್ದು ಮರೆಯಾಗದೇ ವರ್ಷಗಳು ಕಳೆದರೂ ನೆನಪಿನಲ್ಲಿ ಉಳಿಯುತ್ತವೆ. ಹಾಗೆಂದೇ ಶೇಕ್ಸ್‍ಪಿಯರ್, ಎಲಿಯಟ್, ಪಂಪ, ಕುವೆಂಪು, ಬೇಂದ್ರೆ, ಮುಂತಾದ ಗಟ್ಟಿ ಸಾಹಿತಿಗಳು ತಾವಳಿದಿದ್ದರೂ ತಮ್ಮ ಸಾಹಿತ್ಯದಿಂದ ನಮ್ಮಲ್ಲಿ ಹಸುರಾಗಿಯೇ ಇದ್ದಾರೆ.

ಹಾಗಿದ್ದರೆ ನಿಜವಾದ ಸಾಹಿತ್ಯದ ಉದಯ ಹೇಗಾಗುತ್ತದೆ ಎಂಬುದನ್ನು ಕವಿ ಜಿ. ಎಸ್. ಶಿವರುದ್ರಪ್ಪನವರು ತಮ್ಮ ‘ಕಾವ್ಯೋದಯ’ ಎಂಬ ಕವನದ ಕೊನೆಯ ಸಾಲುಗಳಲ್ಲಿ ಹೀಗೆ ಹೇಳಿದ್ದಾರೆ. ಇಲ್ಲವರು ಕಾವ್ಯವನ್ನು ಕುರಿತು ಹೇಳಿದ್ದರೂ ಎಲ್ಲ ಬರಹಗಳಿಗೂ ಈ ಮಾತು ಅನ್ವಯಿಸಬಹುದು.

ಕೊತ ಕೊತ ಕುದಿವ ಹುಡುಕಾಟಗಳ ನಡುವೆ
ಮಾತಿರದ ಮೌನದೊಳ
ಗಸ್ತವ್ಯಸ್ತವಾಗಿ ತೊಳಲಿದ್ದ ಅಶರೀರಭಾವ
ನಿಧಾನಕ್ಕೆ ಪಾಕವಾಗುತ್ತ
ಶಬ್ದಾರ್ಥ ಸಂಪುಟದೊಳಗೆ ಮೊಳೆವ ಮುತ್ತಾಗಿ
ಮಿನುಗುತಿದೆಯಲ್ಲ

ಹೀಗೆ ಶುದ್ಧ ಭಾವಗಳನ್ನು ಅಭಿವ್ಯಕ್ತಿಸಿ, ಗಟ್ಟಿಗೊಳಿಸಿ, ಹರಳಾಗಿಸಿ ಒಂದು ಮುತ್ತು ಮಾಡಿದರೆ ಸಾಕು. ಅದಲ್ಲದೇ ಹಣ, ಕೀರ್ತಿ, ಪ್ರತಿಷ್ಠೆಗಾಗಿ ಮತ್ತೇನೋ ಕ್ಷುಲ್ಲಕ ಕಾರಣಕ್ಕಾಗಿ ಬಲವಂತಕ್ಕೆ ಬರೆದ ಬರಹಕ್ಕೆ ಏನು ಬೆಲೆ? ಹೇಳುವೆಯಾ ಸಖಿ?
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...