Home / ಕವನ / ಕವಿತೆ / ಎದ್ದೇಳು ಎದ್ದೇಳು ಕನ್ನಡಿಗ

ಎದ್ದೇಳು ಎದ್ದೇಳು ಕನ್ನಡಿಗ

ಎದ್ದೇಳು ಎದ್ದೇಳು ಕನ್ನಡಿಗ
ಎಚ್ಚರದಿಂದೇಳು ಕನ್ನಡಿಗ
ಉದಯವಾಯಿತು ಕನ್ನಡ ನಾಡು ||
ಉದಯರಾಗಲಹರಿಯಿಂ ಹಾಡು
ಜಯ ಕನ್ನಡ ಜಯಕನ್ನಡ
ಜಯಕನ್ನಡವೇ ನಮ್ಮುಸಿರು ||

ಹಚ್ಚಿರಿ ಕನ್ನಡದ ಹಣತೆಯನು
ಮೊಳಗಿಸಿ ಕನ್ನಡ ಜಯಭೇರಿಯನ್ನು ||
ಭಾರಿಸಿತು ಕನ್ನಡ ಡಿಂಡಿಮವ
ಕಟ್ಟಿತು ಹಸಿರು ತೋರಣವ
ಸಂಭ್ರಮಿಸಿತು ನವಕರ್ನಾಟಕ
ನವ ಚೈತನ್ಯದ ನೀಡಿತು || ಜ ||

ಕೆಂಪು ಹಳದಿ ಬಾವುಟ
ಕೆಚ್ಚೆದೆಯನು ಸಾರಿ ಕ್ರಾಂತಿ
ಶಾಂತಿ ದಿವ್ಯ ಮೊಗವ ತೋರಿ
ಜಯ ಕನ್ನಡ ಜಯಕನ್ನಡ
ಜಯಕನ್ನಡವೇ ನಮ್ಮುಸಿರು
ಹಚ್ಚಿರಿ ಕನ್ನಡದ ಹಣತೆಯನು
ಮೊಳಗಿಸಿ ಕನ್ನಡ ಜಯಭೇರಿಯನು ||

ಸಾವಿರಾರು ವರುಷಗಳ ಹರುಷ
ಹೊನಲು ಹಿಗ್ಗಿನೊಲುಮೆಯಲಿ
ಕುಣಿದು ನಲಿದು ಭಾವೈಕ್ಯತೆಯಲಿ ಕೂಡಿ
ಜಯಕನ್ನಡ ಜಯಕನ್ನಡ
ಜಯ ಕನ್ನಡವೇ ನಮ್ಮುಸಿರು
ಹಚ್ಚಿರಿ ಕನ್ನಡದ ಹಣತೆಯನು
ಮೊಳಗಿಸಿ ಕನ್ನಡ ಜಯಭೇರಿಯನ್ನು ||

ಗಂಗ ಕದಂಬಾದಿ ರಾಷ್ಟ್ರಕೂಟ
ಹೊಯ್ಸಳಾಧೀಶರು ಕಟ್ಟಿದ
ವೀರ ಧೀರ ತ್ಯಾಗ ಕಲಿಗಳ
ಭವ್ಯ ನಾಡು ನುಡಿಯು ಕನ್ನಡ
ಜಯ ಕನ್ನಡ ಜಯ ಕನ್ನಡ
ಜಯ ಕನ್ನಡವೇ ನಮ್ಮುಸಿರು
ಹಚ್ಚಿರಿ ಕನ್ನಡದ ಹಣತೆಯನು
ಮೊಳಗಿಸಿ ಕನ್ನಡ ಜಯ ಭೇರಿಯನ್ನು ||

ಮುನ್ನುಗ್ಗಿದೆ ಮುನ್ನಡೆದಿದೆ
ಕಗ್ಗತ್ತಲ ಮೌಢ್ಯಗಳ ಕಳಚಿ
ವಿಜ್ಞಾನ ದೀವಿಗೆಯ ಹಚ್ಚಿ
ಅಭಿಮಾನ ಸ್ವಾಭಿಮಾನದಿಂ
ನುಡಿದಿದೆ ಜಯಕನ್ನಡ
ಜಯ ಕನ್ನಡ ಜಯಕನ್ನಡ
ಜಯಕನ್ನಡವೇ ನಮ್ಮುಸಿರು
ಬೆಳಗಿರಿ ಕನ್ನಡ ಜೋತಿಯನು
ಮೊಳಗಿಸಿ ಕನ್ನಡ ಜಯಭೇರಿಯನ್ನು ||
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...