ಎದ್ದೇಳು ಎದ್ದೇಳು ಕನ್ನಡಿಗ

ಎದ್ದೇಳು ಎದ್ದೇಳು ಕನ್ನಡಿಗ
ಎಚ್ಚರದಿಂದೇಳು ಕನ್ನಡಿಗ
ಉದಯವಾಯಿತು ಕನ್ನಡ ನಾಡು ||
ಉದಯರಾಗಲಹರಿಯಿಂ ಹಾಡು
ಜಯ ಕನ್ನಡ ಜಯಕನ್ನಡ
ಜಯಕನ್ನಡವೇ ನಮ್ಮುಸಿರು ||

ಹಚ್ಚಿರಿ ಕನ್ನಡದ ಹಣತೆಯನು
ಮೊಳಗಿಸಿ ಕನ್ನಡ ಜಯಭೇರಿಯನ್ನು ||
ಭಾರಿಸಿತು ಕನ್ನಡ ಡಿಂಡಿಮವ
ಕಟ್ಟಿತು ಹಸಿರು ತೋರಣವ
ಸಂಭ್ರಮಿಸಿತು ನವಕರ್ನಾಟಕ
ನವ ಚೈತನ್ಯದ ನೀಡಿತು || ಜ ||

ಕೆಂಪು ಹಳದಿ ಬಾವುಟ
ಕೆಚ್ಚೆದೆಯನು ಸಾರಿ ಕ್ರಾಂತಿ
ಶಾಂತಿ ದಿವ್ಯ ಮೊಗವ ತೋರಿ
ಜಯ ಕನ್ನಡ ಜಯಕನ್ನಡ
ಜಯಕನ್ನಡವೇ ನಮ್ಮುಸಿರು
ಹಚ್ಚಿರಿ ಕನ್ನಡದ ಹಣತೆಯನು
ಮೊಳಗಿಸಿ ಕನ್ನಡ ಜಯಭೇರಿಯನು ||

ಸಾವಿರಾರು ವರುಷಗಳ ಹರುಷ
ಹೊನಲು ಹಿಗ್ಗಿನೊಲುಮೆಯಲಿ
ಕುಣಿದು ನಲಿದು ಭಾವೈಕ್ಯತೆಯಲಿ ಕೂಡಿ
ಜಯಕನ್ನಡ ಜಯಕನ್ನಡ
ಜಯ ಕನ್ನಡವೇ ನಮ್ಮುಸಿರು
ಹಚ್ಚಿರಿ ಕನ್ನಡದ ಹಣತೆಯನು
ಮೊಳಗಿಸಿ ಕನ್ನಡ ಜಯಭೇರಿಯನ್ನು ||

ಗಂಗ ಕದಂಬಾದಿ ರಾಷ್ಟ್ರಕೂಟ
ಹೊಯ್ಸಳಾಧೀಶರು ಕಟ್ಟಿದ
ವೀರ ಧೀರ ತ್ಯಾಗ ಕಲಿಗಳ
ಭವ್ಯ ನಾಡು ನುಡಿಯು ಕನ್ನಡ
ಜಯ ಕನ್ನಡ ಜಯ ಕನ್ನಡ
ಜಯ ಕನ್ನಡವೇ ನಮ್ಮುಸಿರು
ಹಚ್ಚಿರಿ ಕನ್ನಡದ ಹಣತೆಯನು
ಮೊಳಗಿಸಿ ಕನ್ನಡ ಜಯ ಭೇರಿಯನ್ನು ||

ಮುನ್ನುಗ್ಗಿದೆ ಮುನ್ನಡೆದಿದೆ
ಕಗ್ಗತ್ತಲ ಮೌಢ್ಯಗಳ ಕಳಚಿ
ವಿಜ್ಞಾನ ದೀವಿಗೆಯ ಹಚ್ಚಿ
ಅಭಿಮಾನ ಸ್ವಾಭಿಮಾನದಿಂ
ನುಡಿದಿದೆ ಜಯಕನ್ನಡ
ಜಯ ಕನ್ನಡ ಜಯಕನ್ನಡ
ಜಯಕನ್ನಡವೇ ನಮ್ಮುಸಿರು
ಬೆಳಗಿರಿ ಕನ್ನಡ ಜೋತಿಯನು
ಮೊಳಗಿಸಿ ಕನ್ನಡ ಜಯಭೇರಿಯನ್ನು ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರಗತಿ ಅಥವಾ ದಾಸ್ಯವಿಮೋಚನೆ – ೮ನೆಯ ಖಂಡ – ಸಾಮರ್‍ಥ್ಯಸಂಚಯ
Next post ದೇವರಿಗೆ ಬೈದೆ

ಸಣ್ಣ ಕತೆ

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…