Home / ಕವನ / ಕವಿತೆ / ಎದ್ದೇಳು ಎದ್ದೇಳು ಕನ್ನಡಿಗ

ಎದ್ದೇಳು ಎದ್ದೇಳು ಕನ್ನಡಿಗ

ಎದ್ದೇಳು ಎದ್ದೇಳು ಕನ್ನಡಿಗ
ಎಚ್ಚರದಿಂದೇಳು ಕನ್ನಡಿಗ
ಉದಯವಾಯಿತು ಕನ್ನಡ ನಾಡು ||
ಉದಯರಾಗಲಹರಿಯಿಂ ಹಾಡು
ಜಯ ಕನ್ನಡ ಜಯಕನ್ನಡ
ಜಯಕನ್ನಡವೇ ನಮ್ಮುಸಿರು ||

ಹಚ್ಚಿರಿ ಕನ್ನಡದ ಹಣತೆಯನು
ಮೊಳಗಿಸಿ ಕನ್ನಡ ಜಯಭೇರಿಯನ್ನು ||
ಭಾರಿಸಿತು ಕನ್ನಡ ಡಿಂಡಿಮವ
ಕಟ್ಟಿತು ಹಸಿರು ತೋರಣವ
ಸಂಭ್ರಮಿಸಿತು ನವಕರ್ನಾಟಕ
ನವ ಚೈತನ್ಯದ ನೀಡಿತು || ಜ ||

ಕೆಂಪು ಹಳದಿ ಬಾವುಟ
ಕೆಚ್ಚೆದೆಯನು ಸಾರಿ ಕ್ರಾಂತಿ
ಶಾಂತಿ ದಿವ್ಯ ಮೊಗವ ತೋರಿ
ಜಯ ಕನ್ನಡ ಜಯಕನ್ನಡ
ಜಯಕನ್ನಡವೇ ನಮ್ಮುಸಿರು
ಹಚ್ಚಿರಿ ಕನ್ನಡದ ಹಣತೆಯನು
ಮೊಳಗಿಸಿ ಕನ್ನಡ ಜಯಭೇರಿಯನು ||

ಸಾವಿರಾರು ವರುಷಗಳ ಹರುಷ
ಹೊನಲು ಹಿಗ್ಗಿನೊಲುಮೆಯಲಿ
ಕುಣಿದು ನಲಿದು ಭಾವೈಕ್ಯತೆಯಲಿ ಕೂಡಿ
ಜಯಕನ್ನಡ ಜಯಕನ್ನಡ
ಜಯ ಕನ್ನಡವೇ ನಮ್ಮುಸಿರು
ಹಚ್ಚಿರಿ ಕನ್ನಡದ ಹಣತೆಯನು
ಮೊಳಗಿಸಿ ಕನ್ನಡ ಜಯಭೇರಿಯನ್ನು ||

ಗಂಗ ಕದಂಬಾದಿ ರಾಷ್ಟ್ರಕೂಟ
ಹೊಯ್ಸಳಾಧೀಶರು ಕಟ್ಟಿದ
ವೀರ ಧೀರ ತ್ಯಾಗ ಕಲಿಗಳ
ಭವ್ಯ ನಾಡು ನುಡಿಯು ಕನ್ನಡ
ಜಯ ಕನ್ನಡ ಜಯ ಕನ್ನಡ
ಜಯ ಕನ್ನಡವೇ ನಮ್ಮುಸಿರು
ಹಚ್ಚಿರಿ ಕನ್ನಡದ ಹಣತೆಯನು
ಮೊಳಗಿಸಿ ಕನ್ನಡ ಜಯ ಭೇರಿಯನ್ನು ||

ಮುನ್ನುಗ್ಗಿದೆ ಮುನ್ನಡೆದಿದೆ
ಕಗ್ಗತ್ತಲ ಮೌಢ್ಯಗಳ ಕಳಚಿ
ವಿಜ್ಞಾನ ದೀವಿಗೆಯ ಹಚ್ಚಿ
ಅಭಿಮಾನ ಸ್ವಾಭಿಮಾನದಿಂ
ನುಡಿದಿದೆ ಜಯಕನ್ನಡ
ಜಯ ಕನ್ನಡ ಜಯಕನ್ನಡ
ಜಯಕನ್ನಡವೇ ನಮ್ಮುಸಿರು
ಬೆಳಗಿರಿ ಕನ್ನಡ ಜೋತಿಯನು
ಮೊಳಗಿಸಿ ಕನ್ನಡ ಜಯಭೇರಿಯನ್ನು ||
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...