Home / ಲೇಖನ / ಇತರೆ / ಮಸ್ತಕ ತಿಂತು ಮನುಷ್ಯನ್ನ

ಮಸ್ತಕ ತಿಂತು ಮನುಷ್ಯನ್ನ

ಪ್ರಿಯ ಸಖಿ,

ಅಡಗಿ ಮನಿ ಅವ್ವನ್ನ ತಿಂತು
ಅಧಿಕಾರ ಅಪ್ಪನ್ನ ತಿಂತು
ಪುಸ್ತಕದ ಹೊರೆ ತಿಂತು ತಮ್ಮನ್ನ
ಮಸ್ತಕ ತಿಂತು ಮನುಷ್ಯನ್ನ

ಶೈಲಜಾ ಉಡಚಣ ಅವರ ಈ ಹನಿಗವನ ಮೇಲ್ನೋಟಕ್ಕೆ ಎಷ್ಟು ತಮಾಷೆಯಾಗಿದೆ ಯಲ್ಲವೇ? ಆದರೆ ಆಳಕ್ಕಿಳಿದಷ್ಟು ಅರ್ಥವಾದಂತೆಲ್ಲಾ ವಿಶೇಷ ಅರ್ಥವನ್ನು ಕೊಡುತ್ತದಲ್ಲವೇ? ಅಡುಗೆ ಮನೆಯೆಂಬ ಕಾರ್ಖಾನೆಯಲ್ಲಿ ಮೂರು ಹೊತ್ತು ಅದರಲ್ಲೇ ಕರಗಿಹೋಗುತ್ತಾರೆ ನಮ್ಮ ಅನೇಕ ಹೆಣ್ಣುಮಕ್ಕಳು. ಹಾಗೇ ಗಂಡು ಅಧಿಕಾರ ಸ್ಥಾನದಲ್ಲಿರುವಾಗ ಅದರ ಗರ್ವ, ಅಹಂಕಾರಗಳಲ್ಲೇ ಮೆರೆಯುತ್ತಾ ತನ್ನತನ ಕಳೆದುಕೊಳ್ಳುತ್ತಾನೆ. ರಾಶಿ ಪುಸ್ತಕದ ಹೊರೆ ಮಗುವಿನ ಕ್ರಿಯಾಶೀಲತೆಯನ್ನೂ, ಸೃಜನಶೀಲತೆಯನ್ನೂ ನುಂಗಿಬಿಡುತ್ತದೆ. ಹಾಗೇ ‘ಮನುಷ್ಯನ್ನ ಅವನ ಮಸ್ತಕವೇ ತಿಂದು ಬಿಡುತ್ತದೆ’ ಎನ್ನುತ್ತಾರೆ ಕವಯಿತ್ರಿ.

ನಿಜವಾದ ಮಾತಲ್ಲವೇ ಸಖಿ. ಇತ್ತೀಚಿನ ದಿನಗಳಲ್ಲಿ ಮನುಷ್ಯ ಭಾವನೆಗಳಿಗಿಂತಾ ಬುದ್ಧಿವಂತಿಕೆಗೆ ಹೆಚ್ಚಿನ ಮಹತ್ವ ನೀಡುತ್ತಿದ್ದಾನೆ. ಹೃದಯದಿಂದ ಅಳೆಯಬೇಕಾದ ಎಷ್ಟೊಂದು ಮೌಲ್ಯಗಳನ್ನು ಮೆದುಳಿನಿಂದ ಅಳೆಯಲು ಹೋಗಿ ಖಾಲಿಯಾಗುತ್ತಿದ್ದಾನೆ. ಇಂದಿನ ನಮ್ಮ ಸಾಮಾಜಿಕ ಜೀವನ ಅಸ್ತವ್ಯಸ್ತಗೊಂಡಿರುವುದಕ್ಕೆ ಅದನ್ನು ಎಂಥದೋ ಮಬ್ಬು ಶೂನ್ಯತೆ ಆಳುತ್ತಿರುವುದಕ್ಕೆ ನಾವು ಭಾವನೆಗಳನ್ನು ನಿಕೃಷ್ಟಗೊಳಿಸಿರುವುದೇ ಕಾರಣ ಆಗಿದೆ. ಚಿಂತಕ ಡಿ. ಹೆಚ್. ಲಾರೆನ್ಸ್ ‘A man who is emotionally educated is like a phoenix’  ಭಾವನಾತ್ಮಕವಾಗಿ ಕಲಿತ ಮನುಷ್ಯ ಫೀನಿಕ್ಸ್ ಪಕ್ಷಿಯಂತೆಯೇ ತನ್ನದೇ ಬೂದಿಯಿಂದ ಮತ್ತೆ ಎದ್ದು ಹೊಸ ಜೀವನವನ್ನು ಆರಂಭಿಸಬಹುದು ಎನ್ನುತ್ತಾನೆ. ಬರಿಯ ಬುದ್ಧಿಯನ್ನು ಉಪಯೋಗಿಸಲು ಕಲಿತ ಮನುಷ್ಯ ಬಹಳ ಬೇಗನೆ ಹೊಸತನವನ್ನು ಕಳೆದುಕೊಂಡು ಕಳೆದುಹೋಗುತ್ತಾನೆ.

ಸಖಿ, ಅದಕ್ಕೆಂದೇ ಮನುಷ್ಯನನ್ನು ಭಾವನಾತ್ಮಕವಾಗಿ ತಯಾರಿಸುವುದೇ ಇಂದಿನ ಅವಶ್ಯಕತೆ ಮತ್ತು ತುರ್ತು. ಹಾಗಾದಾಗ ಮನುಷ್ಯ ತನ್ನ ಸೃಜನಶೀಲತೆಯನ್ನು ಹೆಚ್ಚು ಹೆಚ್ಚು ಬಳಸಿಕೊಂಡು ಹೃದಯ ಶ್ರೀಮಂತಿಕೆಯ ಔನ್ನತ್ಯವನ್ನು ಸಾಧಿಸಲು ಸಾಧ್ಯವಾಗುತ್ತದೆ. ಅದಿಲ್ಲದಿದ್ದಾಗ ಮಸ್ತಕವೇ ಮನುಷ್ಯನನ್ನು ತಿಂದು ಅವನನ್ನು ನಿರ್ವೀರ್ಯನನ್ನಾಗಿಸಿ ಬಿಡುತ್ತದೆ. ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...