Home / ಲೇಖನ / ಇತರೆ / ಮಸ್ತಕ ತಿಂತು ಮನುಷ್ಯನ್ನ

ಮಸ್ತಕ ತಿಂತು ಮನುಷ್ಯನ್ನ

ಪ್ರಿಯ ಸಖಿ,

ಅಡಗಿ ಮನಿ ಅವ್ವನ್ನ ತಿಂತು
ಅಧಿಕಾರ ಅಪ್ಪನ್ನ ತಿಂತು
ಪುಸ್ತಕದ ಹೊರೆ ತಿಂತು ತಮ್ಮನ್ನ
ಮಸ್ತಕ ತಿಂತು ಮನುಷ್ಯನ್ನ

ಶೈಲಜಾ ಉಡಚಣ ಅವರ ಈ ಹನಿಗವನ ಮೇಲ್ನೋಟಕ್ಕೆ ಎಷ್ಟು ತಮಾಷೆಯಾಗಿದೆ ಯಲ್ಲವೇ? ಆದರೆ ಆಳಕ್ಕಿಳಿದಷ್ಟು ಅರ್ಥವಾದಂತೆಲ್ಲಾ ವಿಶೇಷ ಅರ್ಥವನ್ನು ಕೊಡುತ್ತದಲ್ಲವೇ? ಅಡುಗೆ ಮನೆಯೆಂಬ ಕಾರ್ಖಾನೆಯಲ್ಲಿ ಮೂರು ಹೊತ್ತು ಅದರಲ್ಲೇ ಕರಗಿಹೋಗುತ್ತಾರೆ ನಮ್ಮ ಅನೇಕ ಹೆಣ್ಣುಮಕ್ಕಳು. ಹಾಗೇ ಗಂಡು ಅಧಿಕಾರ ಸ್ಥಾನದಲ್ಲಿರುವಾಗ ಅದರ ಗರ್ವ, ಅಹಂಕಾರಗಳಲ್ಲೇ ಮೆರೆಯುತ್ತಾ ತನ್ನತನ ಕಳೆದುಕೊಳ್ಳುತ್ತಾನೆ. ರಾಶಿ ಪುಸ್ತಕದ ಹೊರೆ ಮಗುವಿನ ಕ್ರಿಯಾಶೀಲತೆಯನ್ನೂ, ಸೃಜನಶೀಲತೆಯನ್ನೂ ನುಂಗಿಬಿಡುತ್ತದೆ. ಹಾಗೇ ‘ಮನುಷ್ಯನ್ನ ಅವನ ಮಸ್ತಕವೇ ತಿಂದು ಬಿಡುತ್ತದೆ’ ಎನ್ನುತ್ತಾರೆ ಕವಯಿತ್ರಿ.

ನಿಜವಾದ ಮಾತಲ್ಲವೇ ಸಖಿ. ಇತ್ತೀಚಿನ ದಿನಗಳಲ್ಲಿ ಮನುಷ್ಯ ಭಾವನೆಗಳಿಗಿಂತಾ ಬುದ್ಧಿವಂತಿಕೆಗೆ ಹೆಚ್ಚಿನ ಮಹತ್ವ ನೀಡುತ್ತಿದ್ದಾನೆ. ಹೃದಯದಿಂದ ಅಳೆಯಬೇಕಾದ ಎಷ್ಟೊಂದು ಮೌಲ್ಯಗಳನ್ನು ಮೆದುಳಿನಿಂದ ಅಳೆಯಲು ಹೋಗಿ ಖಾಲಿಯಾಗುತ್ತಿದ್ದಾನೆ. ಇಂದಿನ ನಮ್ಮ ಸಾಮಾಜಿಕ ಜೀವನ ಅಸ್ತವ್ಯಸ್ತಗೊಂಡಿರುವುದಕ್ಕೆ ಅದನ್ನು ಎಂಥದೋ ಮಬ್ಬು ಶೂನ್ಯತೆ ಆಳುತ್ತಿರುವುದಕ್ಕೆ ನಾವು ಭಾವನೆಗಳನ್ನು ನಿಕೃಷ್ಟಗೊಳಿಸಿರುವುದೇ ಕಾರಣ ಆಗಿದೆ. ಚಿಂತಕ ಡಿ. ಹೆಚ್. ಲಾರೆನ್ಸ್ ‘A man who is emotionally educated is like a phoenix’  ಭಾವನಾತ್ಮಕವಾಗಿ ಕಲಿತ ಮನುಷ್ಯ ಫೀನಿಕ್ಸ್ ಪಕ್ಷಿಯಂತೆಯೇ ತನ್ನದೇ ಬೂದಿಯಿಂದ ಮತ್ತೆ ಎದ್ದು ಹೊಸ ಜೀವನವನ್ನು ಆರಂಭಿಸಬಹುದು ಎನ್ನುತ್ತಾನೆ. ಬರಿಯ ಬುದ್ಧಿಯನ್ನು ಉಪಯೋಗಿಸಲು ಕಲಿತ ಮನುಷ್ಯ ಬಹಳ ಬೇಗನೆ ಹೊಸತನವನ್ನು ಕಳೆದುಕೊಂಡು ಕಳೆದುಹೋಗುತ್ತಾನೆ.

ಸಖಿ, ಅದಕ್ಕೆಂದೇ ಮನುಷ್ಯನನ್ನು ಭಾವನಾತ್ಮಕವಾಗಿ ತಯಾರಿಸುವುದೇ ಇಂದಿನ ಅವಶ್ಯಕತೆ ಮತ್ತು ತುರ್ತು. ಹಾಗಾದಾಗ ಮನುಷ್ಯ ತನ್ನ ಸೃಜನಶೀಲತೆಯನ್ನು ಹೆಚ್ಚು ಹೆಚ್ಚು ಬಳಸಿಕೊಂಡು ಹೃದಯ ಶ್ರೀಮಂತಿಕೆಯ ಔನ್ನತ್ಯವನ್ನು ಸಾಧಿಸಲು ಸಾಧ್ಯವಾಗುತ್ತದೆ. ಅದಿಲ್ಲದಿದ್ದಾಗ ಮಸ್ತಕವೇ ಮನುಷ್ಯನನ್ನು ತಿಂದು ಅವನನ್ನು ನಿರ್ವೀರ್ಯನನ್ನಾಗಿಸಿ ಬಿಡುತ್ತದೆ. ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...