Home / ಲೇಖನ / ಇತರೆ / ಮಾತಿನಲಿ ಹೃದಯವಿರಲಿ

ಮಾತಿನಲಿ ಹೃದಯವಿರಲಿ

ಪ್ರಿಯ ಸಖಿ,
ಇಂದು ನಾವು ಆಡುತ್ತಿರುವ ಮಾತು ತನ್ನ ಮೌಲ್ಯವನ್ನೇ ಕಳೆದುಕೂಂಡಿದೆ. ಬೇಕಾದಾಗ ಬೇಕಾದಂತೆ ಮಾತಾಡುವ, ಅದಕ್ಕೆ ಬದ್ಧರಾಗಿರಬೇಕೆಂಬ ಯಾವುದೇ ಸಿದ್ಧಾಂತವನ್ನೂ ನಾವಿಂದು ಇಟ್ಟುಕೊಂಡಿಲ್ಲ. ಆಡುವ ಮಾತಿಗೂ ನಡೆದುಕೊಳ್ಳುವ ರೀತಿಗೂ ಒಂದಕ್ಕೊಂದು ಸಂಬಂಧವೇ ಇರುವುದಿಲ್ಲ. ಅದನ್ನು ಕಂಡೇ ಕವಿ ಬಿ. ಅರ್. ಲಕ್ಷ್ಮಣರಾವ್ ಅವರು ತಮ್ಮ ‘ಇಂದು’ ಎಂಬ ಹನಿಗವನದಲ್ಲಿ ಹೀಗೆನ್ನುತ್ತಾರೆ.

     ಮಾತು
ತನ್ನ ನಂಬಿಕೆ ಕಳೆದುಕೊಂಡಿರುವ
ಇಂದು
ಪ್ರತಿ ದಿನವೂ
ಏಪ್ರಿಲ್ ಒಂದು

ಯಾರದೋ ಮಾತನ್ನು ನಂಬಿಕೂತವನು ಇಂದು ಮೂರ್ಖನಾಗುವ ಕಾಲ ಬಂದಿದೆ. ‘ಮಾತನಾಡುವ ಮೊದಲು ಅದರಲ್ಲಿ ನಿನ್ನ ಹೃದಯವಿದೆಯೇ ಎಂದು ಪರೀಕ್ಷಿಸು ಎನ್ನುವ ಹಳೆಯ ನಾನ್ನುಡಿಯೊಂದು ನಮ್ಮಲ್ಲಿದೆ. ಹೃದಯವಿರಲಿ ಇಂದು ಮಾತಿನಲ್ಲಿ ನಾಲಿಗೆಯೂ ಇರುವುದಿಲ್ಲ. ಬರಿಯ ಗಾಳಿಯಲ್ಲಿ ಮಾತುಗಳು ಹಾರಾಡುತ್ತವೆ.

ಮಾನವೀಯ ಮೌಲ್ಯಗಳು ಕಳೆದು ಹೋಗುತ್ತಿರುವ ಇಂದಿನ ದಿನಗಳಲ್ಲಿ ಮಾತೂ ತನ್ನ ಅರ್ಥ ಕಳೆದುಕೊಳ್ಳುತ್ತಿದೆ. ತನ್ನ ಲಾಭಕ್ಕಾಗಿ ಯಾವ ಮಾತನ್ನಾದರೂ ಹೇಗೆ ಬೇಕಾದರೂ ಆಡಿ ಕಾರ್ಯ ಸಾಧಿಸಿಕೊಳ್ಳುವ ಹಂತಕ್ಕೆ ಮನುಷ್ಯ ಬಂದು ಮುಟ್ಟಿದ್ದಾನೆ. ಅವನಿಗೆ ತನ್ನ ಸ್ವಾರ್ಥ, ಸ್ವಹಿತಗಳೇ ಮುಖ್ಯ. ಇಂತಹ ನಾಟಕಗಳನ್ನರಿಯದ ಮುಗ್ಧ ವ್ಯಕ್ತಿಗಳೂ ನಮ್ಮಲ್ಲಿದ್ದಾರೆ. ಅವರೆಲ್ಲ ಇಂತಹ ಕಪಟ ಮಾತುಗಾರರ ಮಾತುಗಳನ್ನು ನಂಬಿ ಕ್ಷಣ ಕ್ಷಣವೂ ಮೂರ್ಖರಾಗುತ್ತಿರುತ್ತಾರೆ.

ನುಡಿದಂತೆ ನಡೆಯಬೇಕು ನಡೆದಂತೆ ನುಡಿಯಬೇಕು ಎಂಬ ತತ್ವಕ್ಕೆ ನಾವು ಯಾವಾಗ ಬದ್ಧರಾಗುವುದಿಲ್ಲವೋ ಅಲ್ಲಿಯವರೆಗೂ ನಾವು ಆತ್ಮವಂಚನೆ ಮಾಡಿಕೊಳ್ಳುತ್ತಲೇ ಇರುತ್ತೇವೆ. ಮಾತಿಗೂ ಅದರದ್ದೇ ಮಹತ್ವವಿದೆ. ಪ್ರಾಮಾಣಿಕ ಮಾತಿನಿಂದಲೇ ಮಾನವನಿಗೆ ಗೌರವ, ಪ್ರತಿಷ್ಠೆಗಳು ಬರುತ್ತವೆ ಎಂದು ಎಲ್ಲಿಯವರೆಗೆ ಮನುಷ್ಯ ತಿಳಿದು ಕೊಳ್ಳುವದಿಲ್ಲವೋ ಅಲ್ಲಿಯವರೆಗೆ ಬೇರೆ ಯಾರೇ ಅವನನ್ನು ಕ್ಷಮಿಸಿದರೂ ಅವನ ಆತ್ಮ ಅವನನ್ನು ಎಂದೂ ಕ್ಷಮಿಸುವುದಿಲ್ಲ. ಈ ಕುರಿತು ನಿನ್ನ ನಿಲುವೇನು ಸಖಿ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...