ಎತ್ತೆತ್ತ ಹರಿಯುತಿದೆ

ಎತ್ತೆತ್ತ ಹರಿಯುತಿದೆ
ಸೆಲೆಯು ಬದುಕು
ಬರಿದಾದ ಯಾನ ||

ಚಿತ್ತ ಕಳೆದು
ಭಾಗಿಸಿತು ಕಡಲ
ಕಲರವ ಮೌನ ||

ಬಣ್ಣ ಚಿತ್ತಾರ
ವಿಲ್ಲದ ಬಾಳಿನಗಲ
ಬವಣೆ ಪಯಣದಲಿ ||

ಬಡವನಂಗಳದಲಿ
ಸಿರಿತನದ ಬೆಳಕು
ಬೆಸೆದ ಭೂಮಿಕೆಯಲಿ ||

ಗಗನ ತುಂಬೆಲ್ಲಾ
ಸ್ವಚ್ಚಂದ ಹಾರಾಡುವ
ಹಕ್ಕಿಯ ಚೈತನ್ಯ ||

ಹಕ್ಕಿಯಂತಯೆ
ಬದುಕು ಮೃದುಮನ
ಬಂಡಾಯವೆದ್ದ ಗೀಳು ||

ಸಾವಿರದ ದೂರ
ಹಾದಿಯ ಕನಸು
ಕಟ್ಟುವ ಮಹಾಪುರ ||

ನಿನ್ನ ಬದುಕಿದು
ನಿಲ್ಲದು ಸಾಗರದಾ
ಹರಿಗೋಲ ಯಾನ ||

ಎಚ್ಚೆತ್ತ ದನಿಯು
ನಿನ್ನದು ದಡವ ಸೇರಿ
ಹಾಡ ಹಾಡು
ಮನಸಾರೆ ಹಾಡು !!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಜಾನಪದದಲ್ಲಿ ಮಾನವೀಯ ಮೌಲ್ಯಗಳು
Next post ಅನಂತ

ಸಣ್ಣ ಕತೆ

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…