ಎತ್ತೆತ್ತ ಹರಿಯುತಿದೆ

ಎತ್ತೆತ್ತ ಹರಿಯುತಿದೆ
ಸೆಲೆಯು ಬದುಕು
ಬರಿದಾದ ಯಾನ ||

ಚಿತ್ತ ಕಳೆದು
ಭಾಗಿಸಿತು ಕಡಲ
ಕಲರವ ಮೌನ ||

ಬಣ್ಣ ಚಿತ್ತಾರ
ವಿಲ್ಲದ ಬಾಳಿನಗಲ
ಬವಣೆ ಪಯಣದಲಿ ||

ಬಡವನಂಗಳದಲಿ
ಸಿರಿತನದ ಬೆಳಕು
ಬೆಸೆದ ಭೂಮಿಕೆಯಲಿ ||

ಗಗನ ತುಂಬೆಲ್ಲಾ
ಸ್ವಚ್ಚಂದ ಹಾರಾಡುವ
ಹಕ್ಕಿಯ ಚೈತನ್ಯ ||

ಹಕ್ಕಿಯಂತಯೆ
ಬದುಕು ಮೃದುಮನ
ಬಂಡಾಯವೆದ್ದ ಗೀಳು ||

ಸಾವಿರದ ದೂರ
ಹಾದಿಯ ಕನಸು
ಕಟ್ಟುವ ಮಹಾಪುರ ||

ನಿನ್ನ ಬದುಕಿದು
ನಿಲ್ಲದು ಸಾಗರದಾ
ಹರಿಗೋಲ ಯಾನ ||

ಎಚ್ಚೆತ್ತ ದನಿಯು
ನಿನ್ನದು ದಡವ ಸೇರಿ
ಹಾಡ ಹಾಡು
ಮನಸಾರೆ ಹಾಡು !!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಜಾನಪದದಲ್ಲಿ ಮಾನವೀಯ ಮೌಲ್ಯಗಳು
Next post ಅನಂತ

ಸಣ್ಣ ಕತೆ

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

cheap jordans|wholesale air max|wholesale jordans|wholesale jewelry|wholesale jerseys