ನೀ ನಗಲೇನು ಮನವೆ

ನೀ ನಗಲೇನು ಮನವೆ
ಅಳಲೇನು ಮೌನ ತಾಳಲೇನು
ಹಸಿವು ಕಾಡದೆ ಬಿಡುವುದೇ ||

ಊಟ ಬಟ್ಟೆ ತಳಕು ಬಳುಕು
ನೋವುಂಡ ಮನವು
ಹಸಿವ ಅಡಗಿ ನಿಲ್ಲ ಬಲ್ಲುದೇ ||

ಮಮತೆ ವಾತ್ಸಲ್ಯಗಳು
ಹೃದಯ ತುಂಬಿದರೇನು
ಹಸಿವು ಅದನು ಮೆಟ್ಟಲಹುದೇ ||

ಜ್ಞಾನಕ್ಕೆ ವಿದ್ಯೆಯ ಹಸಿವು
ಭಕ್ತನಿಗೆ ಭಕ್ತಿ ಭಾವದ ಹಸಿವು
ಯೋಗಿಗೆ ಮುಕ್ತಿಯ ಹಸಿವು ||

ಇಳೆಗೆ ಮಳೆ ತಣಿವ ಹಸಿವು
ಬಡತನ ಸಿರಿತನದ ಜೀವ
ಜೀವಿಗೆ ಹಸಿವೆಂಬುದೆ ಜೀವನವು ||

ಎಲ್ಲಾ ಬಲ್ಲವ ಪರಶಿವನಿರಲು
ನಗಲು ಅಳಲು ಹಸಿವಿಗೆ
ಅನ್ನದಗುಳೇ ಸಾಕಾರವು ನಿತ್ಯ
ನೂತನ ವಸಂತವು ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅರ್ಥ
Next post ಸ್ವಗತ

ಸಣ್ಣ ಕತೆ

  • ಕುಟೀರವಾಣಿ

    ಪೀಠಿಕೆ ನನ್ನ ಬಡಗುಡಿಸಲ ಹೆಸರು "ಆನಂದಕುಟೀರ". ಒಂದು ದಿನ ನಡುಮಧ್ಯಾಹ್ನ. ಕುಟೀರದೊಳಗೆ ಮುರುಕು ಕಿಟಿಕಿಯ ಹತ್ತಿರ ಕುಳಿತು, ಹೊರಗಿನ ಪ್ರಸಂಚವನು ನೋಡುತಿದ್ದೆ. ಮನಸು ಬೇಸರದಿಂದ ತುಂಬಿ ಹೋಗಿತ್ತು.… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…