ಗಿಳಿ ಮತ್ತು ಸೀತೆ

ಹೇಳು ಗಿಳಿಯೆ ಹೇಳು ಇಂದೇಕೆ ನೀ ಮೌನ
ಕಣ್ಣೀರ ಸುರಿಸುತ್ತಾ ಕೊರಗುವೇಕೆ!
ಇಷ್ಟು ವರ್ಷಗಳಿಂದ ಜೊತೆ ಗೆಳತಿಯಾಗಿದ್ದ
ಸೀತೆ ಮಿಥಿಲೆ ತೊರೆದು ಹೋಗುವಳೆಂದೆ!

ಸೀತೆ ಮನ ತುಂಬಿದವ ಶ್ರೀರಾಮ
ಶ್ರೀರಾಮ ವರಿಸಿದ ಹೆಣ್ಣು ಸೀತೆ
ಇಬ್ಬರಾಸೆಗಳಿಂದು ಕೈಗೂಡಿ ಅವರಿಂದು
ಸತಿಪತಿಗಳಾಗಿಹುದು ದೈವಲೀಲೆ |

ಇಂದು ಮಿಥಿಲಾಪುರವೂ ವೈಭವದಿ ಮಿಂಚಿಹುದು
ಅರಮನೆಯ ತುಂಬೆಲ್ಲಾ ಜನಸಾಗರ
ಜನಕರಾಜನ ಕಣ್ಣು ತುಂಬಿ ನಿಂತಿದೆ ಇಂದು
ಸಂತೋಷದಲಿ ದುಃಖ ಕೂಡಿಕೊಂಡು |

ನೋಡು ಗಿಳಿಯೆ ನಿನ್ನ ಆ ಗೆಳತಿ ಸೀತೆಯನು
ಹಿರಿಯ ಸಂತಸದಲ್ಲು ದುಃಖಭಾವ
ಚಿಗುರು ಬೆರಳುಗಳಿಂದ ತಂದೆ ಕಣ್ಣೀರನ್ನು
ಒರೆಸಿ ನಗಿಸುತಲಿಹುದು ಕಾಣದೇನು!

ಸಲಹಿದಪ್ಪನ ಹೊರತು ಆತ್ಮೀಯರಾರಿಹರು!
ನೀನಲ್ಲವೇ ಅವಳ ಪ್ರೀತಿ ಗೆಳತಿ!
ನಿನ್ನ ಮರೆಯುವಳೇನೇ, ನಿನ್ನ ಬಿಟ್ಹೋಗುವಳೆ!
ತವರು ನೆನಪಿನ ಒಡವೆ ನೀನೆ ತಾನೆ!

ನೋಡು ಅರಮನೆ ಮುಂದೆ ಕನಕರಥ ನಿಂತಿಹುದು
ಶ್ರೀರಾಮ ಅದರಲ್ಲಿ ಕುಳಿತಿಹನು
ಕಣ್ಣ ಕುಡಿ ನೋಟದಲೆ ರಾಮ, ಸೀತೆಯ ಕರೆವ
ನಿನಗೆ ಆಯಿತೆ ಲಜ್ಜೆ! ಘಾಟಿ ನೀನು|
ನಿನ್ನ ಇನಿದನಿ ನಿನ್ನ ಇಂಪಾದ ಸವಿನುಡಿಯ
ಎಲ್ಲೂ ಕೇಳದೆ ಸೀತೆ ಹುಡುಕುತಿಹಳು
ಬಾ ನನ್ನ ತೊಡೆವೇರು ಎನುತ ಕರೆಯುತಿಹಳು
ಪಿಸುಮಾತು ಮೆಲು ದನಿಯ ದಾಟಿಯಲ್ಲಿ|

ನವ ದಂಪತಿಗಳ ನಡುವೆ ನನ್ನ ಇರುವಿಕೆ ಸರಿಯೇ
ಎಂದೇಕೆ ಬೇಸರ ಪಡುತಲಿರುವೆ ||
ಸೀತೆ ಪ್ರತಿರೂಪದಲಿ ಆ ರಥದ ಕೆಳೆಯು ನೀನು
ಪಯಣಿಸಮ್ಮ ಗಿಳಿಯೆ ಮುಂದೆ ನೀನು !
ಬಾ ಗಿಳಿಯೆ ರಥವೇರು ಸೀತೆ ಕರೆಯುತಲಿಹಳು
ಹೊತ್ತಾಯ್ತು ಇನ್ನೇಕೆ ಚಿಂತೆ ನಿನಗೆ!
ಮೌನ ಬಿಡು ಸುತ್ತೆಲ್ಲ ಚೈತ್ರ ಚೆಲುವಿದೆ ನೋಡು
ಹಾಡುತ್ತ ನೀ ಸಾಗು ಹೆಮ್ಮೆಯಿಂದ |
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

ಪಾಳೇಗಾರ Previous post ಪಾಳಯಗಾರರು – ಬಂಗಾಳ ಪ್ರಾಂತದಲ್ಲಿರುವ ಜಮೀನ್ದಾರರು
Next post ಕವಿತೆ…

ಸಣ್ಣ ಕತೆ

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

cheap jordans|wholesale air max|wholesale jordans|wholesale jewelry|wholesale jerseys