Home / ಕವನ / ಕವಿತೆ / ಗಿಳಿ ಮತ್ತು ಸೀತೆ

ಗಿಳಿ ಮತ್ತು ಸೀತೆ

ಹೇಳು ಗಿಳಿಯೆ ಹೇಳು ಇಂದೇಕೆ ನೀ ಮೌನ
ಕಣ್ಣೀರ ಸುರಿಸುತ್ತಾ ಕೊರಗುವೇಕೆ!
ಇಷ್ಟು ವರ್ಷಗಳಿಂದ ಜೊತೆ ಗೆಳತಿಯಾಗಿದ್ದ
ಸೀತೆ ಮಿಥಿಲೆ ತೊರೆದು ಹೋಗುವಳೆಂದೆ!

ಸೀತೆ ಮನ ತುಂಬಿದವ ಶ್ರೀರಾಮ
ಶ್ರೀರಾಮ ವರಿಸಿದ ಹೆಣ್ಣು ಸೀತೆ
ಇಬ್ಬರಾಸೆಗಳಿಂದು ಕೈಗೂಡಿ ಅವರಿಂದು
ಸತಿಪತಿಗಳಾಗಿಹುದು ದೈವಲೀಲೆ |

ಇಂದು ಮಿಥಿಲಾಪುರವೂ ವೈಭವದಿ ಮಿಂಚಿಹುದು
ಅರಮನೆಯ ತುಂಬೆಲ್ಲಾ ಜನಸಾಗರ
ಜನಕರಾಜನ ಕಣ್ಣು ತುಂಬಿ ನಿಂತಿದೆ ಇಂದು
ಸಂತೋಷದಲಿ ದುಃಖ ಕೂಡಿಕೊಂಡು |

ನೋಡು ಗಿಳಿಯೆ ನಿನ್ನ ಆ ಗೆಳತಿ ಸೀತೆಯನು
ಹಿರಿಯ ಸಂತಸದಲ್ಲು ದುಃಖಭಾವ
ಚಿಗುರು ಬೆರಳುಗಳಿಂದ ತಂದೆ ಕಣ್ಣೀರನ್ನು
ಒರೆಸಿ ನಗಿಸುತಲಿಹುದು ಕಾಣದೇನು!

ಸಲಹಿದಪ್ಪನ ಹೊರತು ಆತ್ಮೀಯರಾರಿಹರು!
ನೀನಲ್ಲವೇ ಅವಳ ಪ್ರೀತಿ ಗೆಳತಿ!
ನಿನ್ನ ಮರೆಯುವಳೇನೇ, ನಿನ್ನ ಬಿಟ್ಹೋಗುವಳೆ!
ತವರು ನೆನಪಿನ ಒಡವೆ ನೀನೆ ತಾನೆ!

ನೋಡು ಅರಮನೆ ಮುಂದೆ ಕನಕರಥ ನಿಂತಿಹುದು
ಶ್ರೀರಾಮ ಅದರಲ್ಲಿ ಕುಳಿತಿಹನು
ಕಣ್ಣ ಕುಡಿ ನೋಟದಲೆ ರಾಮ, ಸೀತೆಯ ಕರೆವ
ನಿನಗೆ ಆಯಿತೆ ಲಜ್ಜೆ! ಘಾಟಿ ನೀನು|
ನಿನ್ನ ಇನಿದನಿ ನಿನ್ನ ಇಂಪಾದ ಸವಿನುಡಿಯ
ಎಲ್ಲೂ ಕೇಳದೆ ಸೀತೆ ಹುಡುಕುತಿಹಳು
ಬಾ ನನ್ನ ತೊಡೆವೇರು ಎನುತ ಕರೆಯುತಿಹಳು
ಪಿಸುಮಾತು ಮೆಲು ದನಿಯ ದಾಟಿಯಲ್ಲಿ|

ನವ ದಂಪತಿಗಳ ನಡುವೆ ನನ್ನ ಇರುವಿಕೆ ಸರಿಯೇ
ಎಂದೇಕೆ ಬೇಸರ ಪಡುತಲಿರುವೆ ||
ಸೀತೆ ಪ್ರತಿರೂಪದಲಿ ಆ ರಥದ ಕೆಳೆಯು ನೀನು
ಪಯಣಿಸಮ್ಮ ಗಿಳಿಯೆ ಮುಂದೆ ನೀನು !
ಬಾ ಗಿಳಿಯೆ ರಥವೇರು ಸೀತೆ ಕರೆಯುತಲಿಹಳು
ಹೊತ್ತಾಯ್ತು ಇನ್ನೇಕೆ ಚಿಂತೆ ನಿನಗೆ!
ಮೌನ ಬಿಡು ಸುತ್ತೆಲ್ಲ ಚೈತ್ರ ಚೆಲುವಿದೆ ನೋಡು
ಹಾಡುತ್ತ ನೀ ಸಾಗು ಹೆಮ್ಮೆಯಿಂದ |
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...