ಎಲ್ಲೆಡೆ ಸಲ್ಲುವುದು ಒಳಿತು

ಪ್ರಿಯ ಸಖಿ,
ಅಲ್ಲಾಗಲಿ ಅಥವಾ ಇಲ್ಲಾಗಲಿ
ಸಲ್ಲದೆನ್ನಬೇಡ
ಒಳಿತು
ಎಲ್ಲೂ ಒಂದೇ ನೋಡ
ಸೆಣಸು ನಿಸು ಒಳ್ಮನಸು ಪತಾಕೆ
ಬೀಳದಂತೆ ಜೋಕೆ !
ಕವಿ ಗೋಪಾಲಕೃಷ್ಣ ಅಡಿಗರ ‘ಅಲ್ಲಾಗಲಿ’ ಎಂಬ ಕವನದ ಈ ಸಾಲುಗಳನ್ನು ಓದಿದೆಯಾ ಸಖಿ? ಎಲ್ಲ ಕೆಡಕುಗಳನ್ನು ನೋಡಿ ನೋಡಿ ತಲ್ಲಣಿಸುತ್ತಿದ್ದ ಎದೆಗೆ ಕೊಂಚ ತಂಪಾಯಿತೆ? ಒಳಿತು ಇಲ್ಲಿ ಇಲ್ಲವೇ ಇಲ್ಲ ಎಂದು ಪರಿತಪಿಸಿ ಕೊರಗಬೇಡ ಎಲ್ಲೆಡೆಯೂ ಒಳಿತು ಇದ್ದೇ ಇದೆ. ಒಳಮನಸ್ಸಿನಲ್ಲೇ ಕೆಟ್ಟದ್ದರೊಂದಿಗೆ ಸೆಣಸು. ಒಳಿತಿನ ಪತಾಕೆ ಕೆಳಜಾರಿ ಬೀಳದಂತೆ ಜೋಪಾನವಾಗಿ ನಿಲ್ಲಿಸು ಎಂದು ಹಿತನುಡಿಗಳನ್ನಾಡಿದ್ದಾರೆ ಕವಿ.

ನಮ್ಮ ಎಲ್ಲ ಒಳಿತು ಕೆಡುಕಿನ ಮೂಲ ನಮ್ಮೊಳಗೇ ಇದೆ. ಅದನ್ನು ಆ ದಿಕ್ಕುಗಳಲ್ಲಿ ನಡೆಸುವವರೂ ನಾವೇ. ಒಳಿತಿನೆಡೆಗೇ ನಾವು ನಡೆಯುತ್ತೇವೆ ಎಂದು ಮನದಲ್ಲಿ ದೃಢವಾಗಿ ನಿಶ್ಚಯಿಸಿದರೆ, ಅದನ್ನು ಮೀರುವ ಧೈರ್ಯ ಬಹುಶಃ ನಮಗೂ ಬರಬಾರದು! ಪದ್ಯವನ್ನು ಮುಂದುವರೆಸುತ್ತಾ ಕವಿ,
ಒಳಮನ ದೇವರ ಮನೆ ಮಣಿಯಲ್ಲಿ
ಇದೆ ಇಂದಿಗೂ ಆ ದೀಪದ ಮಲ್ಲಿ
ಎಣ್ಣೆ ತೀರಿ ಕರಟಿದರೂ ಬತ್ತಿ
ಒತ್ತಿ ತುಳಿದರೂ ತಮಸ್ಸು ಮುತ್ತಿ
ಹೂಡಿದೆ ಕತ್ತಲ ಕೊಡೆ ರಣ
ಈ ಚಿತ್ಕಣ ಘನ ಚಿರಂತನ
ನೋಡಿ ಬೀಗು, ಸಂದೇಹನೀಗು
ಸಾಷ್ಟಾಂಗ ಬಾಗು ಅದಕೆ
ಒಲವಿನ ಹನಿಮಣಿ ಕೊಡುಕೈಗಾಣಿಕೆ
ಎರೆಯೊ ನಿನ್ನ ಎದೆಯೊರತೆ
ಬೆಳಕಿಗೆ ಬಾರದಂತೆ ಕೊರತೆ!
ಎನ್ನುತ್ತಾರೆ ಒಳಮನಸ್ಸಿನ ದೇವರಮನೆಯಲ್ಲಿ ಎಣ್ಣೆ ತೀರಿ, ಬತ್ತಿ ಕರಟಿದ ಹಣತೆ ಇದೆ. ತುಂಬಿರುವ ಕತ್ತಲಿನೊಡನೆ ನಿರಂತರವಾಗಿ ಯುದ್ಧ ಸಾರಿದೆ ಮನಸ್ಸು. ಮನದಲ್ಲಿ ಸದಾ ಒಳಿತು ಕೆಡುಕಿನ ಕುರಿತು ವಿವೇಚನೆ ನಡೆದೇ ಇದೆ. ಅದನ್ನು ನೋಡಿ ಹೆಮ್ಮೆ ಪಡು. ಕತ್ತಲ ಮೇಲೆ ಬೆಳಕು ಗೆಲುವು ಸಾಧಿಸೇ ಸಾಧಿಸುತ್ತದೆ ಸಂದೇಹ ಬೇಡೆನ್ನುತ್ತಾ ಧೈರ್ಯ ತುಂಬುತ್ತಾರೆ ಕವಿ.

ಬೆಳಕನ್ನು ಶಾಶ್ವತವಾಗಿ ನುಂಗಿಬಿಡಲು ಕತ್ತಲು ಶತಪ್ರಯತ್ನ ಮಾಡಿದರೂ ಕತ್ತಲಿನ ಅರಿವಿಗೇ ಬರದಂತೆ ಮೆಲ್ಲ ಮೆಲ್ಲಗೆ ಬೆಳಕು ಪಸರಿಸಿ ಕತ್ತಲನ್ನು ಹೊಡೆದೋಡಿಸಿ ಬಿಡುತ್ತವಲ್ಲವೇ ಸಖಿ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಒಂದು ಎಲ್ಲಕ್ಕಿಂತ ಮೊದಲು
Next post ಕಾಲನಾಗಗಳೊಡಲು ಜಗದ ಮನ

ಸಣ್ಣ ಕತೆ

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

cheap jordans|wholesale air max|wholesale jordans|wholesale jewelry|wholesale jerseys