Home / ಕವನ / ಕವಿತೆ / ನಮ್ಮ ಮನೆಯ ಮಗಳು

ನಮ್ಮ ಮನೆಯ ಮಗಳು

ನಮ್ಮ ಮನೆಯಲೆ ಹುಟ್ಟಿ ನಮ್ಮನೆಯ ಮಗಳಾಗಿ
ಪ್ರೀತಿ ವಾತ್ಸಲ್ಯಗಳ ನಮಗೆ ಉಣಿಸಿ
ನಮ್ಮ ಸುಖದುಃಖಗಳ ನಡುವೆ ನೀನು ನಲಿದಾಡಿ
ಸಂತಸದಿ ನಗುನಗುತ ಬೆಳೆದು ಬಂದವಳು
ನೀ ನಲ್ಲವೇ ನಮ್ಮ ಮಗಳಲ್ಲವೆ ||

ಸುಳ್ಳು ತಟವಟ, ಮೋಸ ವಂಚನೆಯ ಅರಿಯದಿಹ
ಮುಗ್ಧ ಬಾಲೆಯು ನೀನು ಪಾಪದವಳು
ಜಗದ ಜಂಜಡವೆಲ್ಲ ನನಗೇಕೆ ಬೇಕೆಂಬ
ನೈರಾಶ್ಯ ಭಾವದಲಿ ಮುಗುಳಾಗಿ ಬಂದವಳು
ನೀ ನಲ್ಲವೇ ನಮ್ಮ ಮಗಳಲ್ಲವೇ ||

ಹಿಂಡು ಮಕ್ಕಳ ಜೊತೆಗೆ ದುಂಡು ಮಲ್ಲಿಗೆಯಾಗಿ
ಅವರೊಡನೆ ಆಡುತ್ತ ಅರಳಿನಿಂತೆ
ಪ್ರೀತಿ ವಾತ್ಸಲ್ಯಗಳೆ ಮೈ ತುಂಬಿ ನೀನವರ
ಮುತ್ತು ಮಳೆಗೈಯುತಲೆ ಬೆಳೆದು ನಿಂತವಳು
ನೀನಲ್ಲವೇ ನಮ್ಮ ಮಗಳಲ್ಲವೇ ||

ಬೆಳೆದಂತೆ ಕೊಡುಗನ್ನೆ ನೀನಾದರೂ ನಿನ್ನ
ಮುಗ್ಧ ಭಾವವೂ ಇನ್ನೂ ಮಾಸಲಿಲ್ಲ
ನನ್ನವರು, ಅನ್ಯರು ಎಲ್ಲರೂ ಒಂದೆಂದು
ಆತ್ಮೀಯತೆಯ ಲತೆಯ ಬೆಸೆದ ಹುಡುಗಿ
ನೀನಲ್ಲವೇ ನಮ್ಮ ಮಗಳಲ್ಲವೇ ||

ಸ್ವಾತಿ ಮಳೆ ನೀರು ಕುಡಿದು ಸ್ವಾತಿ ಮುತ್ತಾದವಳು
ಮಾತಿನಲಿ ಮುತ್ತುಗಳ ಸುರಿಸಿದಳು
ನಗೆನಗೆಯ ನಡುನಡುವೆ ಬಿಡಿಮೊಲ್ಲೆಗಳ ಕೆಡಹಿ
ಸೊಂಪಾಗಿ ಕಂಪಾಗಿ ಆಡಿ ಬೆಳೆದವಳು
ನೀನಲ್ಲವೇ ನಮ್ಮ ಮಗಳಲ್ಲವೇ ||

ದುಷ್ಟ ಕಾಮುಕ ಕೂಟ ಬೇಟೆ ಬಾಣಕೆ ಸಿಲುಕಿ
ಅಸಹಾಯಕತೆಯಿಂದ ನರಳಿದವಳು
ನಿನ್ನ ಆ ಅಳು ಅಳುವು ಕಾಡು ರೋಧನವಾಗಿ
ಸೊಪ್ಪಾಗಿ ನೆಲನಪ್ಪಿ ಸತ್ತು ಹೋದವಳು
ನೀನಲ್ಲವೇ ನಮ್ಮ ಮಗಳಲ್ಲವೇ ||

ಇನ್ನೆಲ್ಲಿ ಆ ನಗುವು! ಇನ್ನೆಲ್ಲಿ ಆ ಚೆಲುವೆ |
ಮತ್ತೆಲ್ಲಿ ಆ ಮುದ್ದು ನಡೆ ನುಡಿಗಳು |
ಅವಳಿಲ್ಲದೇ ಬಾಳ್ವೆ ಬದುಕು ದುರ್ದೈವಿಗಳು
ನಾವಲ್ಲವೇ ನಮ್ಮ ಬಾಳಲ್ಲವೇ ||

ನಿನ್ನ ಕಥೆ ಮರುಹುಟ್ಟು ಬಾಳುವೆಯ
ನೀರಸ ಮೌನ ತಳೆದ ಗೆಳತಿಯರು
ಆತ್ಮವಿಶ್ವಾಸ ಬೆಳೆಸಿಕೊಳ್ಳುತ್ತಾ ಬಾಳಲಿ
ಬೆಳಕು ಚೆಲ್ಲಿ ಸದಾ ನಮ್ಮ ಮನೆಯ ಬೆಳಕಾಗಲಿ ||
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...