ಮುಗಿದ ಕತೆಗೆ

ಮುಗಿದ ಕತೆಗೆ ತೆರಯಹಾಕಿ
ಬಾಳ ಪುಟದ ತೆರೆಯ ಬಿಚ್ಚಿ
ಕುಂಚ ಹಿಡಿದು ಬಣ್ಣ ಹಚ್ಚಿ
ಚಿತ್ತಾರ ಬಿಡಿಸಿತು ಚಂಚಲ ಮನಸು ||

ಭಾವಲತೆಯ ದಳವ ಬಿಡಿಸಿ
ಬಿರಿದ ಚೆಂದ ಹೂವಾ ಮುಡಿಸಿ
ಮುಡಿಯ ಏರಿ ಒಲವ ತೋರಿ
ಮನವ ಸೆಳೆಯಿತು ಚಂಚಲ ಮನಸು ||

ಕತ್ತಲೆಯ ನೀಗಿಸಿ ಬೆತ್ತಲೆ
ಬೆಳಕನಿರಿಸಿ ಅಂಗಳ ಬೆಳಗಿ
ಬೊಗಸೆ ಕಂಗಳನೊಸೆದು ಕಲ್ಪನಾ
ಲಿಂಗವ ಬಯಸಿತು ಚಂಚಲ ಮನಸು ||

ಕನಸು ಕಂಡ ಮನಸಿಗೆ
ನೆನಪು ತಂದ ಹೊಸತಿಗೆ
ಸುಖ ಸೋಪಾನ ನೀಲಚಿತ್ತ
ಓಕುಳಿ ಎರಚಿತು ಚಂಚಲ ಮನಸು ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರಗತಿ ಅಥವಾ ದಾಸ್ಯವಿಮೋಚನೆ – ೬ನೆಯ ಖಂಡ – ಸಮಯಸಾಫಲ್ಯ
Next post ನೆರಳು

ಸಣ್ಣ ಕತೆ

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…