ದೊಡ್ಡವರು ಸಣ್ಣವರಾಗುವುದೇಕೆ?

ಪ್ರಿಯ ಸಖಿ,
ದೊಡ್ಡವರು ಸಣ್ಣವರಾಗುವುದು ಯಾವಾಗ? ಎನ್ನುವುದನ್ನು ಕವಿ ಸುಮತೀಂದ್ರ ನಾಡಿಗರು ತಮ್ಮ ದೊಡ್ಡವರು ಕವನದಲ್ಲಿ ಹೀಗೆ ವಿವರಿಸುತ್ತಾರೆ.
ದೊಡ್ಡವರು ಸಣ್ಣವರಾಗುವುದು
ತಾವೆಲ್ಲ ಮಾಡಿದ್ದೇವೆ, ತಾವೆಲ್ಲ ಮಾಡಿದ್ದೇವೆ
ತಮೆಗೆಲ್ಲ ಗೊತ್ತಿದೆ ಎಂದು ತಿಳಿದುಕೊಂಡಾಗ
ತಮ್ಮ ನಂತರ ಮುಂದೆ
ಪ್ರಲಯವೇ ಎಂದು ಭಾವಿಸಿದಾಗ
ಸಾಮಾನ್ಯವಾಗಿ ಹಿರಿಯರು ನಮ್ಮ ಕಾಲದಲ್ಲಿ ಹೀಗಿತ್ತು ನಮ್ಮ ಕಾಲವೇ ಚೆನ್ನ, ಕಾಲ ಕೆಟ್ಟು ಹೋಯ್ತು, ಮುಂದೆ ಭವಿಷ್ಯವೇ ಕಾಣುತ್ತಿಲ್ಲ ಇತ್ಯಾದಿ ಮಾತನಾಡುತ್ತಿರುತ್ತಾರೆ. ಹಾಗೆಂದು ಬದಲಾವಣೆಯೇ ಇಲ್ಲದೇ ಇರಲು ಬದುಕು ನಿಂತ ನೀರಲ್ಲ. ಈ ದೊಡ್ಡವರು ಹಿಂದೊಮ್ಮೆ ಚಿಕ್ಕವರಾಗಿದ್ದರು ಆಗಲೂ ಅವರ ಹಿರಿಯರು ಇವರನ್ನು ಇದೇ ಮಾತುಗಳಿಂದ ಚುಚ್ಚುತ್ತಿದ್ದರು ಎಂಬುದನ್ನು ಅವರು ನೆನಪಿಟ್ಟುಕೊಳ್ಳಬೇಕು. ತಾವೆಲ್ಲ ಎಲ್ಲವನ್ನೂ ಮಾಡಿಬಿಟ್ಟಿದ್ದೇವೆ,  ಬದುಕಿನಲ್ಲಿ ಎಲ್ಲವೂ ನೋಡಿದ್ದೇವೆ. ನಮಗೆ ಪ್ರಪಂಚದ ಆಗು ಹೋಗುಗಳೆಲ್ಲ ತಿಳಿದಿದೆ, ತಮ್ಮ ನಂತರ ಮುಂದೆ ಬದುಕೆಂಬುದಕ್ಕೆ ಅರ್ಥವೇ ಇಲ್ಲ ಎಂದು ಕಿರಿಯರನ್ನು ತಾತ್ಸಾರದಿಂದ ಕಾಣಲಾರಂಭಿಸಿದಾಗ, ದೊಡ್ಡವರು ಸಣ್ಣವರಾಗುತ್ತಾ ಹೋಗುತ್ತಾರೆಂದು ಕವಿ ಹೇಳುತ್ತಾರೆ. ನಂತರ, ಮುಂದುವರಿಯುತ್ತಾ ಹೀಗೆ ಪ್ರಶ್ನಿಸುತ್ತಾರೆ.
ನಿಮ್ಮ ನಂತರ ಬೀಜ ಮೊಳೆಯುವದಿಲ್ಲವೇ ಸ್ವಾಮಿ?
ಸಸಿ ಬೆಳೆಯುವುದಿಲ್ಲವೇ?
ಸೂರ್ಯ ಮೇಲೆದ್ದಾಗ ನೀರು
ಥಳಥಳಿಸುತ್ತ ಹೊಳೆಯುವುದಿಲ್ಲವೇ?
ರವಿಬಿಂಬ ಕಣ್ಣುಗಳ ಕುಕ್ಕುವುದೇ ಇಲ್ಲವೇ?
ಸಖಿ, ಬದುಕು ಎಲ್ಲಿಯೋ ಒಂದು ಕಡೆ ನಿಂತುಹೋಗುವುದಿಲ್ಲ. ಅದು ನಿರಂತರವಾಗಿ ಚಲಿಸುತ್ತಲೇ ಇರುತ್ತದೆ. ಹಾಗೇ ಹೊಸತೆನ್ನುವುದೂ ಇಲ್ಲಿ ಅನಿವಾರ್ಯ. ಕಾಲಕ್ಕೆ ತಕ್ಕಂತೆ ಪರಿಸ್ಥಿತಿಗೆ ಹೊಂದಿಕೊಂಡು ಕಾಲನೊಂದಿಗೇ ಮುಂದೆ ಹೋಗುವವನು ವಿವೇಚನಾ ಶೀಲನೆನಿಸಿಕೊಳ್ಳುತ್ತಾನೆ. ಅದು ಬಿಟ್ಟು ನನ್ನ ಕಾಲದ್ದೇ ಸರಿ ಮುಂದಿನ ಬದುಕು ಸರಿಯಲ್ಲ ನಾನು ನಿಂತಲ್ಲೇ ನಿಂತಿರುತ್ತೇನೆ ಎಂದರೆ ಕಾಲ ಅವನನ್ನು ಹಿಂದೆ ತಳ್ಳಿ ತಾನು ಮುಂದೋಡುತ್ತದೆ! ಅಲ್ಲವೇ ಸಖಿ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಟಾಮೀ ಟಾಮೀ ನಮ್ಮನೆ ನಾಯಿ
Next post ಓಡಿ ಬಾ

ಸಣ್ಣ ಕತೆ

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

cheap jordans|wholesale air max|wholesale jordans|wholesale jewelry|wholesale jerseys