Home / ಲೇಖನ / ಇತರೆ / ದೊಡ್ಡವರು ಸಣ್ಣವರಾಗುವುದೇಕೆ?

ದೊಡ್ಡವರು ಸಣ್ಣವರಾಗುವುದೇಕೆ?

ಪ್ರಿಯ ಸಖಿ,
ದೊಡ್ಡವರು ಸಣ್ಣವರಾಗುವುದು ಯಾವಾಗ? ಎನ್ನುವುದನ್ನು ಕವಿ ಸುಮತೀಂದ್ರ ನಾಡಿಗರು ತಮ್ಮ ದೊಡ್ಡವರು ಕವನದಲ್ಲಿ ಹೀಗೆ ವಿವರಿಸುತ್ತಾರೆ.
ದೊಡ್ಡವರು ಸಣ್ಣವರಾಗುವುದು
ತಾವೆಲ್ಲ ಮಾಡಿದ್ದೇವೆ, ತಾವೆಲ್ಲ ಮಾಡಿದ್ದೇವೆ
ತಮೆಗೆಲ್ಲ ಗೊತ್ತಿದೆ ಎಂದು ತಿಳಿದುಕೊಂಡಾಗ
ತಮ್ಮ ನಂತರ ಮುಂದೆ
ಪ್ರಲಯವೇ ಎಂದು ಭಾವಿಸಿದಾಗ
ಸಾಮಾನ್ಯವಾಗಿ ಹಿರಿಯರು ನಮ್ಮ ಕಾಲದಲ್ಲಿ ಹೀಗಿತ್ತು ನಮ್ಮ ಕಾಲವೇ ಚೆನ್ನ, ಕಾಲ ಕೆಟ್ಟು ಹೋಯ್ತು, ಮುಂದೆ ಭವಿಷ್ಯವೇ ಕಾಣುತ್ತಿಲ್ಲ ಇತ್ಯಾದಿ ಮಾತನಾಡುತ್ತಿರುತ್ತಾರೆ. ಹಾಗೆಂದು ಬದಲಾವಣೆಯೇ ಇಲ್ಲದೇ ಇರಲು ಬದುಕು ನಿಂತ ನೀರಲ್ಲ. ಈ ದೊಡ್ಡವರು ಹಿಂದೊಮ್ಮೆ ಚಿಕ್ಕವರಾಗಿದ್ದರು ಆಗಲೂ ಅವರ ಹಿರಿಯರು ಇವರನ್ನು ಇದೇ ಮಾತುಗಳಿಂದ ಚುಚ್ಚುತ್ತಿದ್ದರು ಎಂಬುದನ್ನು ಅವರು ನೆನಪಿಟ್ಟುಕೊಳ್ಳಬೇಕು. ತಾವೆಲ್ಲ ಎಲ್ಲವನ್ನೂ ಮಾಡಿಬಿಟ್ಟಿದ್ದೇವೆ,  ಬದುಕಿನಲ್ಲಿ ಎಲ್ಲವೂ ನೋಡಿದ್ದೇವೆ. ನಮಗೆ ಪ್ರಪಂಚದ ಆಗು ಹೋಗುಗಳೆಲ್ಲ ತಿಳಿದಿದೆ, ತಮ್ಮ ನಂತರ ಮುಂದೆ ಬದುಕೆಂಬುದಕ್ಕೆ ಅರ್ಥವೇ ಇಲ್ಲ ಎಂದು ಕಿರಿಯರನ್ನು ತಾತ್ಸಾರದಿಂದ ಕಾಣಲಾರಂಭಿಸಿದಾಗ, ದೊಡ್ಡವರು ಸಣ್ಣವರಾಗುತ್ತಾ ಹೋಗುತ್ತಾರೆಂದು ಕವಿ ಹೇಳುತ್ತಾರೆ. ನಂತರ, ಮುಂದುವರಿಯುತ್ತಾ ಹೀಗೆ ಪ್ರಶ್ನಿಸುತ್ತಾರೆ.
ನಿಮ್ಮ ನಂತರ ಬೀಜ ಮೊಳೆಯುವದಿಲ್ಲವೇ ಸ್ವಾಮಿ?
ಸಸಿ ಬೆಳೆಯುವುದಿಲ್ಲವೇ?
ಸೂರ್ಯ ಮೇಲೆದ್ದಾಗ ನೀರು
ಥಳಥಳಿಸುತ್ತ ಹೊಳೆಯುವುದಿಲ್ಲವೇ?
ರವಿಬಿಂಬ ಕಣ್ಣುಗಳ ಕುಕ್ಕುವುದೇ ಇಲ್ಲವೇ?
ಸಖಿ, ಬದುಕು ಎಲ್ಲಿಯೋ ಒಂದು ಕಡೆ ನಿಂತುಹೋಗುವುದಿಲ್ಲ. ಅದು ನಿರಂತರವಾಗಿ ಚಲಿಸುತ್ತಲೇ ಇರುತ್ತದೆ. ಹಾಗೇ ಹೊಸತೆನ್ನುವುದೂ ಇಲ್ಲಿ ಅನಿವಾರ್ಯ. ಕಾಲಕ್ಕೆ ತಕ್ಕಂತೆ ಪರಿಸ್ಥಿತಿಗೆ ಹೊಂದಿಕೊಂಡು ಕಾಲನೊಂದಿಗೇ ಮುಂದೆ ಹೋಗುವವನು ವಿವೇಚನಾ ಶೀಲನೆನಿಸಿಕೊಳ್ಳುತ್ತಾನೆ. ಅದು ಬಿಟ್ಟು ನನ್ನ ಕಾಲದ್ದೇ ಸರಿ ಮುಂದಿನ ಬದುಕು ಸರಿಯಲ್ಲ ನಾನು ನಿಂತಲ್ಲೇ ನಿಂತಿರುತ್ತೇನೆ ಎಂದರೆ ಕಾಲ ಅವನನ್ನು ಹಿಂದೆ ತಳ್ಳಿ ತಾನು ಮುಂದೋಡುತ್ತದೆ! ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...