Home / ಲೇಖನ / ಇತರೆ / ದೊಡ್ಡವರು ಸಣ್ಣವರಾಗುವುದೇಕೆ?

ದೊಡ್ಡವರು ಸಣ್ಣವರಾಗುವುದೇಕೆ?

ಪ್ರಿಯ ಸಖಿ,
ದೊಡ್ಡವರು ಸಣ್ಣವರಾಗುವುದು ಯಾವಾಗ? ಎನ್ನುವುದನ್ನು ಕವಿ ಸುಮತೀಂದ್ರ ನಾಡಿಗರು ತಮ್ಮ ದೊಡ್ಡವರು ಕವನದಲ್ಲಿ ಹೀಗೆ ವಿವರಿಸುತ್ತಾರೆ.
ದೊಡ್ಡವರು ಸಣ್ಣವರಾಗುವುದು
ತಾವೆಲ್ಲ ಮಾಡಿದ್ದೇವೆ, ತಾವೆಲ್ಲ ಮಾಡಿದ್ದೇವೆ
ತಮೆಗೆಲ್ಲ ಗೊತ್ತಿದೆ ಎಂದು ತಿಳಿದುಕೊಂಡಾಗ
ತಮ್ಮ ನಂತರ ಮುಂದೆ
ಪ್ರಲಯವೇ ಎಂದು ಭಾವಿಸಿದಾಗ
ಸಾಮಾನ್ಯವಾಗಿ ಹಿರಿಯರು ನಮ್ಮ ಕಾಲದಲ್ಲಿ ಹೀಗಿತ್ತು ನಮ್ಮ ಕಾಲವೇ ಚೆನ್ನ, ಕಾಲ ಕೆಟ್ಟು ಹೋಯ್ತು, ಮುಂದೆ ಭವಿಷ್ಯವೇ ಕಾಣುತ್ತಿಲ್ಲ ಇತ್ಯಾದಿ ಮಾತನಾಡುತ್ತಿರುತ್ತಾರೆ. ಹಾಗೆಂದು ಬದಲಾವಣೆಯೇ ಇಲ್ಲದೇ ಇರಲು ಬದುಕು ನಿಂತ ನೀರಲ್ಲ. ಈ ದೊಡ್ಡವರು ಹಿಂದೊಮ್ಮೆ ಚಿಕ್ಕವರಾಗಿದ್ದರು ಆಗಲೂ ಅವರ ಹಿರಿಯರು ಇವರನ್ನು ಇದೇ ಮಾತುಗಳಿಂದ ಚುಚ್ಚುತ್ತಿದ್ದರು ಎಂಬುದನ್ನು ಅವರು ನೆನಪಿಟ್ಟುಕೊಳ್ಳಬೇಕು. ತಾವೆಲ್ಲ ಎಲ್ಲವನ್ನೂ ಮಾಡಿಬಿಟ್ಟಿದ್ದೇವೆ,  ಬದುಕಿನಲ್ಲಿ ಎಲ್ಲವೂ ನೋಡಿದ್ದೇವೆ. ನಮಗೆ ಪ್ರಪಂಚದ ಆಗು ಹೋಗುಗಳೆಲ್ಲ ತಿಳಿದಿದೆ, ತಮ್ಮ ನಂತರ ಮುಂದೆ ಬದುಕೆಂಬುದಕ್ಕೆ ಅರ್ಥವೇ ಇಲ್ಲ ಎಂದು ಕಿರಿಯರನ್ನು ತಾತ್ಸಾರದಿಂದ ಕಾಣಲಾರಂಭಿಸಿದಾಗ, ದೊಡ್ಡವರು ಸಣ್ಣವರಾಗುತ್ತಾ ಹೋಗುತ್ತಾರೆಂದು ಕವಿ ಹೇಳುತ್ತಾರೆ. ನಂತರ, ಮುಂದುವರಿಯುತ್ತಾ ಹೀಗೆ ಪ್ರಶ್ನಿಸುತ್ತಾರೆ.
ನಿಮ್ಮ ನಂತರ ಬೀಜ ಮೊಳೆಯುವದಿಲ್ಲವೇ ಸ್ವಾಮಿ?
ಸಸಿ ಬೆಳೆಯುವುದಿಲ್ಲವೇ?
ಸೂರ್ಯ ಮೇಲೆದ್ದಾಗ ನೀರು
ಥಳಥಳಿಸುತ್ತ ಹೊಳೆಯುವುದಿಲ್ಲವೇ?
ರವಿಬಿಂಬ ಕಣ್ಣುಗಳ ಕುಕ್ಕುವುದೇ ಇಲ್ಲವೇ?
ಸಖಿ, ಬದುಕು ಎಲ್ಲಿಯೋ ಒಂದು ಕಡೆ ನಿಂತುಹೋಗುವುದಿಲ್ಲ. ಅದು ನಿರಂತರವಾಗಿ ಚಲಿಸುತ್ತಲೇ ಇರುತ್ತದೆ. ಹಾಗೇ ಹೊಸತೆನ್ನುವುದೂ ಇಲ್ಲಿ ಅನಿವಾರ್ಯ. ಕಾಲಕ್ಕೆ ತಕ್ಕಂತೆ ಪರಿಸ್ಥಿತಿಗೆ ಹೊಂದಿಕೊಂಡು ಕಾಲನೊಂದಿಗೇ ಮುಂದೆ ಹೋಗುವವನು ವಿವೇಚನಾ ಶೀಲನೆನಿಸಿಕೊಳ್ಳುತ್ತಾನೆ. ಅದು ಬಿಟ್ಟು ನನ್ನ ಕಾಲದ್ದೇ ಸರಿ ಮುಂದಿನ ಬದುಕು ಸರಿಯಲ್ಲ ನಾನು ನಿಂತಲ್ಲೇ ನಿಂತಿರುತ್ತೇನೆ ಎಂದರೆ ಕಾಲ ಅವನನ್ನು ಹಿಂದೆ ತಳ್ಳಿ ತಾನು ಮುಂದೋಡುತ್ತದೆ! ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...