Home / ಕವನ / ಕವಿತೆ / ಜೋಗದ ಜೋಗಿ ನೀನು

ಜೋಗದ ಜೋಗಿ ನೀನು

ಜೋಗದ ಜೋಗಿ ನೀನು
ಏಕೆ ಕಾಡುವೆ ನನ್ನನ್ನು
ನೀನು ನೀನಾಗಿರಲು ಜೋಗಿ
ನನಗಿಲ್ಲ ಚಿಂತೆ ಏನು

ಹೋಗು ಹೋಗೆಲೋ ಜೋಗಿ ಮುಂದಕೆ
ಹೊಟ್ಟೆಗಿಲ್ಲದೆ ಕಟ್ಟೆಯೇ ಆಸರೆ ಆಗಿದೆ
ಏನೆಂದು ಹೇಳಲೋ ಜೋಗಿ
ಏನನ್ನು ಕೊಡಲೋ ಜೋಗಿ

ಜೋಗಿ- ಜೀವನ ನಿನ್ನದ ಅವ್ವ
ಭಾವನ ನಿನ್ನದು
ಹೋಗೆನ್ನಬೇಡ ಅವ್ವ
ಕಟ್ಟೆಯೇ ಆಸರೆಯಾಗಿರಲೇಕೋ
ಪಟ್ಟ ಪಡಲೇಕೋ ಕಷ್ಟ
ಹಸಿರ ನೆಲದ ಅನಂತೆ ನೀನು
ಉಷೆಯಾಗಿಹೇ ನೀನವ್ವ
ಸಸಿಯೊಂದ ನೀಡಲೇ ಅವ್ವ
ಜೀವನ ಇಹುದು ಮುಂದಕೆ

ಒಡತಿ – ಹಸಿರ ಬಾಳಿನ ಹಂದರದೆ
ಹಸಿಯಾಗಿ ಹುದುಗಿದೆ ಮನವು
ಉಷೆ ನಾನಾಗಿರಲೇನು
ಶಶಿಯು ಇಲ್ಲದೆ ಜೋಗಿ
ಬೆತ್ತಲಾಗಿದೆ ಬಯಲು

ಜೋಗಿ – ಹಸಿರ ಬಾಳಿನ ಹಂದರದ
ನಿಮ್ಮ ಮಕ್ಕಳ ಬಾಳು ಬೆಳಗಲಿ
ಪಡದಿರು ಚಿಂತೆ ಅವ್ವ
ಉಷೆ ನೀನು ಕಿರಣವಾಗಿರು ಬಾಳಿಗೆ

ಒಡತಿ – ಹೊರೆ ಹೊತ್ತಿರುವೆ ಸಂಸಾರ
ಗಗನಕ್ಕೇರುವ ಮಾಳಿಗೆ ಸವತಿ
ತಿಳಿವಿಲ್ಲದೆ ಅರಿವಿಲ್ಲದೆ
ಬೆತ್ತಲಾಗಿದೆ ಬಾಳು
ಬತ್ತಿ ಹೋದವೋ ಕಂಗಳು
ಎದೆಯಾಳದ ನೋವ ಅರಸುತ್ತಾ
ಏನೆಂದು ಹೇಳಲೋ ಜೋಗಿ
ಉಷೆ ನಾನಾದರೇನು ಶಶಿ ಇಲ್ಲದ ಮೇಲೆ

ಜೋಗಿ – ಬಾಳ ಪಯಣದ ಬಾಗಿಲು ತೆರೆದು
ಭಾಗ್ಯಲಕ್ಷಿಯಾಗಿದೆ ಏಕೆ ಕೊರಗುವೆ?
ನೀ ಅವ್ವ…
ತುಂಗೆಯು ನೀನು ಗಂಗೆಯು ನೀನು
ಸತಿಯೆ ನಿನಗೇಕೆ ದಾಹ
ಅರಿವಿಲ್ಲದ ಪರಿವೆ ಏಕೆ ತಿಳಿಯೇ
ನೀನು ನೀನಾಗಲೇನು ಚೆಂದ
ಜೀವನ ಇಹುದು ಮುಂದಕೆ ಅವ್ವ

ಒಡತಿ – ಹೊಗಳಲೇಕೊ ಜೋಗಿ
ನನ್ನದೆನ್ನುವದೇನಿದೆಯೋ
ಭೂಮಿಯು ಬರಡಾಗಿದೆ
ಎನ್ನ ಮನವು ಮಸಕಾಗಿದೆ
ಅಕ್ಷಯ ಪಾತ್ರೆಯ ಹುಡುಕುತಿದೆ
ನಿಶೆಯಲ್ಲಿ ನಾನಾಗಿರಬೇಕು
ಶಶಿಯು ಇಲ್ಲದ ಮೇಲೆ ಜೋಗಿ

ಜೋಗಿ – ನಿನ್ನ ಅಂಗಳದಲ್ಲಿಹುದೆ ಪಾತ್ರೆ
ನಿನ್ನದೇನಿದೆಯೊ ಮಾಯೆ
ಒಂದು ಅಗಳು ಸಾಕೆನಗೆ
ನಾಳೆಗಾಗಿ ಕಾಯುವೆ ಮತ್ತೆ
ತುಂಬಲಿ ಮನೆಯು ಹರಸುವೆ ನಿನ್ನ
ಜೀವನ ಇಹುದೆ ಮುಂದಕೆ ಅವ್ವ

ಒಡತಿ – ನಿನ್ನ ನುಡಿಯಲಿಹುದೆ ಆಶಾಕಿರಣ
ನನ್ನ ಬಾಳಿಗೆ ನೀಡಲಿ ಕಿರಣ
ಚಾತಕ ಪಕ್ಷಿಯಂತೆ ಕಾಯುವೆ
ಹಿಡಿಯು ಹಿಡಿಯಲೇಕೂ ಜೋಗಿ
ನನ್ನ ಅಂಗಳವು ಹಸಿರಾಗಲಿ
ಹಿಡಿಯು ಅಕ್ಷಯವಾಗಲಿ
ಉಸಿರಾಗಲಿ ಸಸಿಗಳು
ನೀ ಬರುವ ತನಕ
ಹೋಗಿ ಬಾರೆಲೋ ಜೋಗಿ
ನಾಳೆಗಿನ ನೆನಪಿಗೆ
ನೀ ಹೋಗಿ ಬಾರಲೋ ಜೋಗಿ
ಉಷನಾಗಿದೆನೋ ಶಶಿಗಾಗಿ ಕಾಯುತಿರುವೆ
ನಿನ್ನ ಮಾತೇ ದೀವಿಗೆ
ನಡೆದು ಬಾ ಮತ್ತೆ
ಶಿಶಿರ ಬಂದ ಮೇಲೆ ಜೋಗಿ
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...