Home / ಕವನ / ಕವಿತೆ / ಜೋಗದ ಜೋಗಿ ನೀನು

ಜೋಗದ ಜೋಗಿ ನೀನು

ಜೋಗದ ಜೋಗಿ ನೀನು
ಏಕೆ ಕಾಡುವೆ ನನ್ನನ್ನು
ನೀನು ನೀನಾಗಿರಲು ಜೋಗಿ
ನನಗಿಲ್ಲ ಚಿಂತೆ ಏನು

ಹೋಗು ಹೋಗೆಲೋ ಜೋಗಿ ಮುಂದಕೆ
ಹೊಟ್ಟೆಗಿಲ್ಲದೆ ಕಟ್ಟೆಯೇ ಆಸರೆ ಆಗಿದೆ
ಏನೆಂದು ಹೇಳಲೋ ಜೋಗಿ
ಏನನ್ನು ಕೊಡಲೋ ಜೋಗಿ

ಜೋಗಿ- ಜೀವನ ನಿನ್ನದ ಅವ್ವ
ಭಾವನ ನಿನ್ನದು
ಹೋಗೆನ್ನಬೇಡ ಅವ್ವ
ಕಟ್ಟೆಯೇ ಆಸರೆಯಾಗಿರಲೇಕೋ
ಪಟ್ಟ ಪಡಲೇಕೋ ಕಷ್ಟ
ಹಸಿರ ನೆಲದ ಅನಂತೆ ನೀನು
ಉಷೆಯಾಗಿಹೇ ನೀನವ್ವ
ಸಸಿಯೊಂದ ನೀಡಲೇ ಅವ್ವ
ಜೀವನ ಇಹುದು ಮುಂದಕೆ

ಒಡತಿ – ಹಸಿರ ಬಾಳಿನ ಹಂದರದೆ
ಹಸಿಯಾಗಿ ಹುದುಗಿದೆ ಮನವು
ಉಷೆ ನಾನಾಗಿರಲೇನು
ಶಶಿಯು ಇಲ್ಲದೆ ಜೋಗಿ
ಬೆತ್ತಲಾಗಿದೆ ಬಯಲು

ಜೋಗಿ – ಹಸಿರ ಬಾಳಿನ ಹಂದರದ
ನಿಮ್ಮ ಮಕ್ಕಳ ಬಾಳು ಬೆಳಗಲಿ
ಪಡದಿರು ಚಿಂತೆ ಅವ್ವ
ಉಷೆ ನೀನು ಕಿರಣವಾಗಿರು ಬಾಳಿಗೆ

ಒಡತಿ – ಹೊರೆ ಹೊತ್ತಿರುವೆ ಸಂಸಾರ
ಗಗನಕ್ಕೇರುವ ಮಾಳಿಗೆ ಸವತಿ
ತಿಳಿವಿಲ್ಲದೆ ಅರಿವಿಲ್ಲದೆ
ಬೆತ್ತಲಾಗಿದೆ ಬಾಳು
ಬತ್ತಿ ಹೋದವೋ ಕಂಗಳು
ಎದೆಯಾಳದ ನೋವ ಅರಸುತ್ತಾ
ಏನೆಂದು ಹೇಳಲೋ ಜೋಗಿ
ಉಷೆ ನಾನಾದರೇನು ಶಶಿ ಇಲ್ಲದ ಮೇಲೆ

ಜೋಗಿ – ಬಾಳ ಪಯಣದ ಬಾಗಿಲು ತೆರೆದು
ಭಾಗ್ಯಲಕ್ಷಿಯಾಗಿದೆ ಏಕೆ ಕೊರಗುವೆ?
ನೀ ಅವ್ವ…
ತುಂಗೆಯು ನೀನು ಗಂಗೆಯು ನೀನು
ಸತಿಯೆ ನಿನಗೇಕೆ ದಾಹ
ಅರಿವಿಲ್ಲದ ಪರಿವೆ ಏಕೆ ತಿಳಿಯೇ
ನೀನು ನೀನಾಗಲೇನು ಚೆಂದ
ಜೀವನ ಇಹುದು ಮುಂದಕೆ ಅವ್ವ

ಒಡತಿ – ಹೊಗಳಲೇಕೊ ಜೋಗಿ
ನನ್ನದೆನ್ನುವದೇನಿದೆಯೋ
ಭೂಮಿಯು ಬರಡಾಗಿದೆ
ಎನ್ನ ಮನವು ಮಸಕಾಗಿದೆ
ಅಕ್ಷಯ ಪಾತ್ರೆಯ ಹುಡುಕುತಿದೆ
ನಿಶೆಯಲ್ಲಿ ನಾನಾಗಿರಬೇಕು
ಶಶಿಯು ಇಲ್ಲದ ಮೇಲೆ ಜೋಗಿ

ಜೋಗಿ – ನಿನ್ನ ಅಂಗಳದಲ್ಲಿಹುದೆ ಪಾತ್ರೆ
ನಿನ್ನದೇನಿದೆಯೊ ಮಾಯೆ
ಒಂದು ಅಗಳು ಸಾಕೆನಗೆ
ನಾಳೆಗಾಗಿ ಕಾಯುವೆ ಮತ್ತೆ
ತುಂಬಲಿ ಮನೆಯು ಹರಸುವೆ ನಿನ್ನ
ಜೀವನ ಇಹುದೆ ಮುಂದಕೆ ಅವ್ವ

ಒಡತಿ – ನಿನ್ನ ನುಡಿಯಲಿಹುದೆ ಆಶಾಕಿರಣ
ನನ್ನ ಬಾಳಿಗೆ ನೀಡಲಿ ಕಿರಣ
ಚಾತಕ ಪಕ್ಷಿಯಂತೆ ಕಾಯುವೆ
ಹಿಡಿಯು ಹಿಡಿಯಲೇಕೂ ಜೋಗಿ
ನನ್ನ ಅಂಗಳವು ಹಸಿರಾಗಲಿ
ಹಿಡಿಯು ಅಕ್ಷಯವಾಗಲಿ
ಉಸಿರಾಗಲಿ ಸಸಿಗಳು
ನೀ ಬರುವ ತನಕ
ಹೋಗಿ ಬಾರೆಲೋ ಜೋಗಿ
ನಾಳೆಗಿನ ನೆನಪಿಗೆ
ನೀ ಹೋಗಿ ಬಾರಲೋ ಜೋಗಿ
ಉಷನಾಗಿದೆನೋ ಶಶಿಗಾಗಿ ಕಾಯುತಿರುವೆ
ನಿನ್ನ ಮಾತೇ ದೀವಿಗೆ
ನಡೆದು ಬಾ ಮತ್ತೆ
ಶಿಶಿರ ಬಂದ ಮೇಲೆ ಜೋಗಿ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...