Home / ಕವನ / ಕವಿತೆ / ಜೋಗದ ಜೋಗಿ ನೀನು

ಜೋಗದ ಜೋಗಿ ನೀನು

ಜೋಗದ ಜೋಗಿ ನೀನು
ಏಕೆ ಕಾಡುವೆ ನನ್ನನ್ನು
ನೀನು ನೀನಾಗಿರಲು ಜೋಗಿ
ನನಗಿಲ್ಲ ಚಿಂತೆ ಏನು

ಹೋಗು ಹೋಗೆಲೋ ಜೋಗಿ ಮುಂದಕೆ
ಹೊಟ್ಟೆಗಿಲ್ಲದೆ ಕಟ್ಟೆಯೇ ಆಸರೆ ಆಗಿದೆ
ಏನೆಂದು ಹೇಳಲೋ ಜೋಗಿ
ಏನನ್ನು ಕೊಡಲೋ ಜೋಗಿ

ಜೋಗಿ- ಜೀವನ ನಿನ್ನದ ಅವ್ವ
ಭಾವನ ನಿನ್ನದು
ಹೋಗೆನ್ನಬೇಡ ಅವ್ವ
ಕಟ್ಟೆಯೇ ಆಸರೆಯಾಗಿರಲೇಕೋ
ಪಟ್ಟ ಪಡಲೇಕೋ ಕಷ್ಟ
ಹಸಿರ ನೆಲದ ಅನಂತೆ ನೀನು
ಉಷೆಯಾಗಿಹೇ ನೀನವ್ವ
ಸಸಿಯೊಂದ ನೀಡಲೇ ಅವ್ವ
ಜೀವನ ಇಹುದು ಮುಂದಕೆ

ಒಡತಿ – ಹಸಿರ ಬಾಳಿನ ಹಂದರದೆ
ಹಸಿಯಾಗಿ ಹುದುಗಿದೆ ಮನವು
ಉಷೆ ನಾನಾಗಿರಲೇನು
ಶಶಿಯು ಇಲ್ಲದೆ ಜೋಗಿ
ಬೆತ್ತಲಾಗಿದೆ ಬಯಲು

ಜೋಗಿ – ಹಸಿರ ಬಾಳಿನ ಹಂದರದ
ನಿಮ್ಮ ಮಕ್ಕಳ ಬಾಳು ಬೆಳಗಲಿ
ಪಡದಿರು ಚಿಂತೆ ಅವ್ವ
ಉಷೆ ನೀನು ಕಿರಣವಾಗಿರು ಬಾಳಿಗೆ

ಒಡತಿ – ಹೊರೆ ಹೊತ್ತಿರುವೆ ಸಂಸಾರ
ಗಗನಕ್ಕೇರುವ ಮಾಳಿಗೆ ಸವತಿ
ತಿಳಿವಿಲ್ಲದೆ ಅರಿವಿಲ್ಲದೆ
ಬೆತ್ತಲಾಗಿದೆ ಬಾಳು
ಬತ್ತಿ ಹೋದವೋ ಕಂಗಳು
ಎದೆಯಾಳದ ನೋವ ಅರಸುತ್ತಾ
ಏನೆಂದು ಹೇಳಲೋ ಜೋಗಿ
ಉಷೆ ನಾನಾದರೇನು ಶಶಿ ಇಲ್ಲದ ಮೇಲೆ

ಜೋಗಿ – ಬಾಳ ಪಯಣದ ಬಾಗಿಲು ತೆರೆದು
ಭಾಗ್ಯಲಕ್ಷಿಯಾಗಿದೆ ಏಕೆ ಕೊರಗುವೆ?
ನೀ ಅವ್ವ…
ತುಂಗೆಯು ನೀನು ಗಂಗೆಯು ನೀನು
ಸತಿಯೆ ನಿನಗೇಕೆ ದಾಹ
ಅರಿವಿಲ್ಲದ ಪರಿವೆ ಏಕೆ ತಿಳಿಯೇ
ನೀನು ನೀನಾಗಲೇನು ಚೆಂದ
ಜೀವನ ಇಹುದು ಮುಂದಕೆ ಅವ್ವ

ಒಡತಿ – ಹೊಗಳಲೇಕೊ ಜೋಗಿ
ನನ್ನದೆನ್ನುವದೇನಿದೆಯೋ
ಭೂಮಿಯು ಬರಡಾಗಿದೆ
ಎನ್ನ ಮನವು ಮಸಕಾಗಿದೆ
ಅಕ್ಷಯ ಪಾತ್ರೆಯ ಹುಡುಕುತಿದೆ
ನಿಶೆಯಲ್ಲಿ ನಾನಾಗಿರಬೇಕು
ಶಶಿಯು ಇಲ್ಲದ ಮೇಲೆ ಜೋಗಿ

ಜೋಗಿ – ನಿನ್ನ ಅಂಗಳದಲ್ಲಿಹುದೆ ಪಾತ್ರೆ
ನಿನ್ನದೇನಿದೆಯೊ ಮಾಯೆ
ಒಂದು ಅಗಳು ಸಾಕೆನಗೆ
ನಾಳೆಗಾಗಿ ಕಾಯುವೆ ಮತ್ತೆ
ತುಂಬಲಿ ಮನೆಯು ಹರಸುವೆ ನಿನ್ನ
ಜೀವನ ಇಹುದೆ ಮುಂದಕೆ ಅವ್ವ

ಒಡತಿ – ನಿನ್ನ ನುಡಿಯಲಿಹುದೆ ಆಶಾಕಿರಣ
ನನ್ನ ಬಾಳಿಗೆ ನೀಡಲಿ ಕಿರಣ
ಚಾತಕ ಪಕ್ಷಿಯಂತೆ ಕಾಯುವೆ
ಹಿಡಿಯು ಹಿಡಿಯಲೇಕೂ ಜೋಗಿ
ನನ್ನ ಅಂಗಳವು ಹಸಿರಾಗಲಿ
ಹಿಡಿಯು ಅಕ್ಷಯವಾಗಲಿ
ಉಸಿರಾಗಲಿ ಸಸಿಗಳು
ನೀ ಬರುವ ತನಕ
ಹೋಗಿ ಬಾರೆಲೋ ಜೋಗಿ
ನಾಳೆಗಿನ ನೆನಪಿಗೆ
ನೀ ಹೋಗಿ ಬಾರಲೋ ಜೋಗಿ
ಉಷನಾಗಿದೆನೋ ಶಶಿಗಾಗಿ ಕಾಯುತಿರುವೆ
ನಿನ್ನ ಮಾತೇ ದೀವಿಗೆ
ನಡೆದು ಬಾ ಮತ್ತೆ
ಶಿಶಿರ ಬಂದ ಮೇಲೆ ಜೋಗಿ
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...