Home / ಲೇಖನ / ಇತರೆ / ಸಾಧನೆ

ಸಾಧನೆ

ಪ್ರಿಯ ಸಖಿ,

ಕೆಲವರು ಬಯಸುತ್ತಾರೆ
ತಾವು ಇಡುವ
ಪಾದಗಳ ಕೆಳಗೆ
ಇರಬೇಕೆಂದು ರತ್ನಕಂಬಳಿಗಳು
ಅಮೃತ ಶಿಲೆಗಳು
ಡಾಂಬರಿನ
ನಯ ನಾಜೂಕಿನ ರಸ್ತೆಗಳು
ಆದರೆ ತಮ್ಮ ಕಾಲುಗಳ ಕೆಳಗೆ
ಹಿಮಾಲಯ ಪರ್ವತ ಶಿಖರಗಳೆ
ಇರಬೇಕೆಂದು ಮೆಟ್ಟಿದವರು
ತೇನ್ಸಿಂಗ್ ಹಿಲೇರಿಗಳು.

ಜರಗನಹಳ್ಳಿ ಶಿವಶಂಕರ್ ಅವರ ‘ಸಾಧನೆ’ ಎಂಬ ಈ ಹನಿಗವನವನ್ನು ನೋಡಿದೆಯಾ ಸಖಿ, ಸಾಧನೆಯೆಂಬುದು ವ್ಯಕ್ತಿಯು ಹಾಕಿಕೊಂಡ ಮಿತಿಯನ್ನು ಅನುಸರಿಸಿ ನಿರ್ಮಿಸಲಾಗುತ್ತಿರುತ್ತದೆ. ಹಲವರು ಅಲ್ಪತೃಪ್ತರು. ಅವರಿಗೆ ತನ್ನ ಕಾಲ ಕೆಳಗೆ ರತ್ನಗಂಬಳಿ, ಅಮೃತ ಶಿಲೆಗಳಿದ್ದರೆ ಸಾಕು. ಆದರೆ ತೇನ್ಸಿಂಗ್, ಹಿಲೇರಿಗಳಂತಾ ಕೆಲವೇ ಸಾಧಕರು, ತಮ್ಮ ಕಾಲ ಕೆಳಗೆ ಹಿಮಾಲಯ ಪರ್ವತವೇ ಇರಬೇಕೆಂದು ಬಯಸುತ್ತಾರೆ. ಇಂತಹ ಸಾಧನೆಗಳು ಕಷ್ಟವಾದರೂ ಅಸಾಧ್ಯವಾದುದೇನಲ್ಲಾ.

ಇಂದಿನ ನಮ್ಮ ನಿತ್ಯ ಜೀವನದ ಎಷ್ಟೆಷ್ಟೋ ಸೂಕ್ಷ್ಮಾತಿಸೂಕ್ಷ್ಮ ಪರಿಕರಗಳು ಕೂಡ ಇಂತಹ ಸಾಧಕರಿಂದಲೇ ಮೂಡಿಬಂದಂತದು. ಇತರರ ಸುಖಕ್ಕಾಗಿ ತಮ್ಮ ಜೀವಿತದ ಅಮೂಲ್ಯ ಸಮಯವನ್ನೆಲ್ಲಾ ಇಂತಹ  ಸಂಶೋಧನೆಗಾಗಿಯೇ ಮುಡಿಪಿಟ್ಟು ತಮ್ಮ ಜೀವ, ಜೀವನವನ್ನೇ ತೇಯ್ದುಕೊಂಡ ಎಷ್ಟೊಂದು ಸಾಧಕರನ್ನು ನಮ್ಮ ಕಣ್ಣ ಮುಂದೆ ಕಾಣುತ್ತಲೇ ಇರುತ್ತೇವೆ.

ಪ್ರತಿಯೊಬ್ಬ ವ್ಯಕ್ತಿಯೂ ಜೀವನದಲ್ಲಿ ಏನಾದರೊಂದು ಸಾಧಿಸುವ ಛಲಹೊಂದಿರಬೇಕು. ಕಷ್ಟಪಡದೇ ಇಲ್ಲೇನನ್ನೂ ಸಾಧಿಸಲಾಗುವುದಿಲ್ಲ. ನಿರಂತರ ಪರಿಶ್ರಮದಿಂದ ಮಾತ್ರ ಗುರಿಸೇರಲು ಸಾಧ್ಯ High aim is not crime ಎತ್ತರದ ಗುರಿ ಹೊಂದಿರುವುದು ಅಪರಾಧವಲ್ಲ. ಎನ್ನುತ್ತಾನೆ ದಾರ್ಶನಿಕನೊಬ್ಬ. ಸಖಿ, ಅದಕ್ಕೆಂದೇ ಬದುಕಿನಲ್ಲಿ ಉತ್ತಮ ಧ್ಯೇಯವೊಂದನ್ನು ಹೊಂದಿರುವುದರಲ್ಲಿ ತಪ್ಪೇನೂ ಇಲ್ಲ. ಅದನ್ನು ಸಾಧಿಸಿಯೇ ತೀರುತ್ತೇವೊ ಇಲ್ಲವೋ ಗೊತ್ತಿಲ್ಲ. ಸಾಧನೆಯ ಹಾದಿಯಲ್ಲಿ ಅವಿರತವಾಗಿ ಹೆಜ್ಜೆ ಹಾಕುತ್ತಿದ್ದರೆ ಅಷ್ಟೇ ಸಾಕು. ಅಲ್ಲವೇ?
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಮ್ ಎನ್ ಎಸ್ ರಾವ್