Home / ಲೇಖನ / ಇತರೆ / ಸಾಧನೆ

ಸಾಧನೆ

ಪ್ರಿಯ ಸಖಿ,

ಕೆಲವರು ಬಯಸುತ್ತಾರೆ
ತಾವು ಇಡುವ
ಪಾದಗಳ ಕೆಳಗೆ
ಇರಬೇಕೆಂದು ರತ್ನಕಂಬಳಿಗಳು
ಅಮೃತ ಶಿಲೆಗಳು
ಡಾಂಬರಿನ
ನಯ ನಾಜೂಕಿನ ರಸ್ತೆಗಳು
ಆದರೆ ತಮ್ಮ ಕಾಲುಗಳ ಕೆಳಗೆ
ಹಿಮಾಲಯ ಪರ್ವತ ಶಿಖರಗಳೆ
ಇರಬೇಕೆಂದು ಮೆಟ್ಟಿದವರು
ತೇನ್ಸಿಂಗ್ ಹಿಲೇರಿಗಳು.

ಜರಗನಹಳ್ಳಿ ಶಿವಶಂಕರ್ ಅವರ ‘ಸಾಧನೆ’ ಎಂಬ ಈ ಹನಿಗವನವನ್ನು ನೋಡಿದೆಯಾ ಸಖಿ, ಸಾಧನೆಯೆಂಬುದು ವ್ಯಕ್ತಿಯು ಹಾಕಿಕೊಂಡ ಮಿತಿಯನ್ನು ಅನುಸರಿಸಿ ನಿರ್ಮಿಸಲಾಗುತ್ತಿರುತ್ತದೆ. ಹಲವರು ಅಲ್ಪತೃಪ್ತರು. ಅವರಿಗೆ ತನ್ನ ಕಾಲ ಕೆಳಗೆ ರತ್ನಗಂಬಳಿ, ಅಮೃತ ಶಿಲೆಗಳಿದ್ದರೆ ಸಾಕು. ಆದರೆ ತೇನ್ಸಿಂಗ್, ಹಿಲೇರಿಗಳಂತಾ ಕೆಲವೇ ಸಾಧಕರು, ತಮ್ಮ ಕಾಲ ಕೆಳಗೆ ಹಿಮಾಲಯ ಪರ್ವತವೇ ಇರಬೇಕೆಂದು ಬಯಸುತ್ತಾರೆ. ಇಂತಹ ಸಾಧನೆಗಳು ಕಷ್ಟವಾದರೂ ಅಸಾಧ್ಯವಾದುದೇನಲ್ಲಾ.

ಇಂದಿನ ನಮ್ಮ ನಿತ್ಯ ಜೀವನದ ಎಷ್ಟೆಷ್ಟೋ ಸೂಕ್ಷ್ಮಾತಿಸೂಕ್ಷ್ಮ ಪರಿಕರಗಳು ಕೂಡ ಇಂತಹ ಸಾಧಕರಿಂದಲೇ ಮೂಡಿಬಂದಂತದು. ಇತರರ ಸುಖಕ್ಕಾಗಿ ತಮ್ಮ ಜೀವಿತದ ಅಮೂಲ್ಯ ಸಮಯವನ್ನೆಲ್ಲಾ ಇಂತಹ  ಸಂಶೋಧನೆಗಾಗಿಯೇ ಮುಡಿಪಿಟ್ಟು ತಮ್ಮ ಜೀವ, ಜೀವನವನ್ನೇ ತೇಯ್ದುಕೊಂಡ ಎಷ್ಟೊಂದು ಸಾಧಕರನ್ನು ನಮ್ಮ ಕಣ್ಣ ಮುಂದೆ ಕಾಣುತ್ತಲೇ ಇರುತ್ತೇವೆ.

ಪ್ರತಿಯೊಬ್ಬ ವ್ಯಕ್ತಿಯೂ ಜೀವನದಲ್ಲಿ ಏನಾದರೊಂದು ಸಾಧಿಸುವ ಛಲಹೊಂದಿರಬೇಕು. ಕಷ್ಟಪಡದೇ ಇಲ್ಲೇನನ್ನೂ ಸಾಧಿಸಲಾಗುವುದಿಲ್ಲ. ನಿರಂತರ ಪರಿಶ್ರಮದಿಂದ ಮಾತ್ರ ಗುರಿಸೇರಲು ಸಾಧ್ಯ High aim is not crime ಎತ್ತರದ ಗುರಿ ಹೊಂದಿರುವುದು ಅಪರಾಧವಲ್ಲ. ಎನ್ನುತ್ತಾನೆ ದಾರ್ಶನಿಕನೊಬ್ಬ. ಸಖಿ, ಅದಕ್ಕೆಂದೇ ಬದುಕಿನಲ್ಲಿ ಉತ್ತಮ ಧ್ಯೇಯವೊಂದನ್ನು ಹೊಂದಿರುವುದರಲ್ಲಿ ತಪ್ಪೇನೂ ಇಲ್ಲ. ಅದನ್ನು ಸಾಧಿಸಿಯೇ ತೀರುತ್ತೇವೊ ಇಲ್ಲವೋ ಗೊತ್ತಿಲ್ಲ. ಸಾಧನೆಯ ಹಾದಿಯಲ್ಲಿ ಅವಿರತವಾಗಿ ಹೆಜ್ಜೆ ಹಾಕುತ್ತಿದ್ದರೆ ಅಷ್ಟೇ ಸಾಕು. ಅಲ್ಲವೇ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...