Home / ಲೇಖನ / ಇತರೆ / ಸಾಧನೆ

ಸಾಧನೆ

ಪ್ರಿಯ ಸಖಿ,

ಕೆಲವರು ಬಯಸುತ್ತಾರೆ
ತಾವು ಇಡುವ
ಪಾದಗಳ ಕೆಳಗೆ
ಇರಬೇಕೆಂದು ರತ್ನಕಂಬಳಿಗಳು
ಅಮೃತ ಶಿಲೆಗಳು
ಡಾಂಬರಿನ
ನಯ ನಾಜೂಕಿನ ರಸ್ತೆಗಳು
ಆದರೆ ತಮ್ಮ ಕಾಲುಗಳ ಕೆಳಗೆ
ಹಿಮಾಲಯ ಪರ್ವತ ಶಿಖರಗಳೆ
ಇರಬೇಕೆಂದು ಮೆಟ್ಟಿದವರು
ತೇನ್ಸಿಂಗ್ ಹಿಲೇರಿಗಳು.

ಜರಗನಹಳ್ಳಿ ಶಿವಶಂಕರ್ ಅವರ ‘ಸಾಧನೆ’ ಎಂಬ ಈ ಹನಿಗವನವನ್ನು ನೋಡಿದೆಯಾ ಸಖಿ, ಸಾಧನೆಯೆಂಬುದು ವ್ಯಕ್ತಿಯು ಹಾಕಿಕೊಂಡ ಮಿತಿಯನ್ನು ಅನುಸರಿಸಿ ನಿರ್ಮಿಸಲಾಗುತ್ತಿರುತ್ತದೆ. ಹಲವರು ಅಲ್ಪತೃಪ್ತರು. ಅವರಿಗೆ ತನ್ನ ಕಾಲ ಕೆಳಗೆ ರತ್ನಗಂಬಳಿ, ಅಮೃತ ಶಿಲೆಗಳಿದ್ದರೆ ಸಾಕು. ಆದರೆ ತೇನ್ಸಿಂಗ್, ಹಿಲೇರಿಗಳಂತಾ ಕೆಲವೇ ಸಾಧಕರು, ತಮ್ಮ ಕಾಲ ಕೆಳಗೆ ಹಿಮಾಲಯ ಪರ್ವತವೇ ಇರಬೇಕೆಂದು ಬಯಸುತ್ತಾರೆ. ಇಂತಹ ಸಾಧನೆಗಳು ಕಷ್ಟವಾದರೂ ಅಸಾಧ್ಯವಾದುದೇನಲ್ಲಾ.

ಇಂದಿನ ನಮ್ಮ ನಿತ್ಯ ಜೀವನದ ಎಷ್ಟೆಷ್ಟೋ ಸೂಕ್ಷ್ಮಾತಿಸೂಕ್ಷ್ಮ ಪರಿಕರಗಳು ಕೂಡ ಇಂತಹ ಸಾಧಕರಿಂದಲೇ ಮೂಡಿಬಂದಂತದು. ಇತರರ ಸುಖಕ್ಕಾಗಿ ತಮ್ಮ ಜೀವಿತದ ಅಮೂಲ್ಯ ಸಮಯವನ್ನೆಲ್ಲಾ ಇಂತಹ  ಸಂಶೋಧನೆಗಾಗಿಯೇ ಮುಡಿಪಿಟ್ಟು ತಮ್ಮ ಜೀವ, ಜೀವನವನ್ನೇ ತೇಯ್ದುಕೊಂಡ ಎಷ್ಟೊಂದು ಸಾಧಕರನ್ನು ನಮ್ಮ ಕಣ್ಣ ಮುಂದೆ ಕಾಣುತ್ತಲೇ ಇರುತ್ತೇವೆ.

ಪ್ರತಿಯೊಬ್ಬ ವ್ಯಕ್ತಿಯೂ ಜೀವನದಲ್ಲಿ ಏನಾದರೊಂದು ಸಾಧಿಸುವ ಛಲಹೊಂದಿರಬೇಕು. ಕಷ್ಟಪಡದೇ ಇಲ್ಲೇನನ್ನೂ ಸಾಧಿಸಲಾಗುವುದಿಲ್ಲ. ನಿರಂತರ ಪರಿಶ್ರಮದಿಂದ ಮಾತ್ರ ಗುರಿಸೇರಲು ಸಾಧ್ಯ High aim is not crime ಎತ್ತರದ ಗುರಿ ಹೊಂದಿರುವುದು ಅಪರಾಧವಲ್ಲ. ಎನ್ನುತ್ತಾನೆ ದಾರ್ಶನಿಕನೊಬ್ಬ. ಸಖಿ, ಅದಕ್ಕೆಂದೇ ಬದುಕಿನಲ್ಲಿ ಉತ್ತಮ ಧ್ಯೇಯವೊಂದನ್ನು ಹೊಂದಿರುವುದರಲ್ಲಿ ತಪ್ಪೇನೂ ಇಲ್ಲ. ಅದನ್ನು ಸಾಧಿಸಿಯೇ ತೀರುತ್ತೇವೊ ಇಲ್ಲವೋ ಗೊತ್ತಿಲ್ಲ. ಸಾಧನೆಯ ಹಾದಿಯಲ್ಲಿ ಅವಿರತವಾಗಿ ಹೆಜ್ಜೆ ಹಾಕುತ್ತಿದ್ದರೆ ಅಷ್ಟೇ ಸಾಕು. ಅಲ್ಲವೇ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...