ಸಾಧನೆ

ಪ್ರಿಯ ಸಖಿ,

ಕೆಲವರು ಬಯಸುತ್ತಾರೆ
ತಾವು ಇಡುವ
ಪಾದಗಳ ಕೆಳಗೆ
ಇರಬೇಕೆಂದು ರತ್ನಕಂಬಳಿಗಳು
ಅಮೃತ ಶಿಲೆಗಳು
ಡಾಂಬರಿನ
ನಯ ನಾಜೂಕಿನ ರಸ್ತೆಗಳು
ಆದರೆ ತಮ್ಮ ಕಾಲುಗಳ ಕೆಳಗೆ
ಹಿಮಾಲಯ ಪರ್ವತ ಶಿಖರಗಳೆ
ಇರಬೇಕೆಂದು ಮೆಟ್ಟಿದವರು
ತೇನ್ಸಿಂಗ್ ಹಿಲೇರಿಗಳು.

ಜರಗನಹಳ್ಳಿ ಶಿವಶಂಕರ್ ಅವರ ‘ಸಾಧನೆ’ ಎಂಬ ಈ ಹನಿಗವನವನ್ನು ನೋಡಿದೆಯಾ ಸಖಿ, ಸಾಧನೆಯೆಂಬುದು ವ್ಯಕ್ತಿಯು ಹಾಕಿಕೊಂಡ ಮಿತಿಯನ್ನು ಅನುಸರಿಸಿ ನಿರ್ಮಿಸಲಾಗುತ್ತಿರುತ್ತದೆ. ಹಲವರು ಅಲ್ಪತೃಪ್ತರು. ಅವರಿಗೆ ತನ್ನ ಕಾಲ ಕೆಳಗೆ ರತ್ನಗಂಬಳಿ, ಅಮೃತ ಶಿಲೆಗಳಿದ್ದರೆ ಸಾಕು. ಆದರೆ ತೇನ್ಸಿಂಗ್, ಹಿಲೇರಿಗಳಂತಾ ಕೆಲವೇ ಸಾಧಕರು, ತಮ್ಮ ಕಾಲ ಕೆಳಗೆ ಹಿಮಾಲಯ ಪರ್ವತವೇ ಇರಬೇಕೆಂದು ಬಯಸುತ್ತಾರೆ. ಇಂತಹ ಸಾಧನೆಗಳು ಕಷ್ಟವಾದರೂ ಅಸಾಧ್ಯವಾದುದೇನಲ್ಲಾ.

ಇಂದಿನ ನಮ್ಮ ನಿತ್ಯ ಜೀವನದ ಎಷ್ಟೆಷ್ಟೋ ಸೂಕ್ಷ್ಮಾತಿಸೂಕ್ಷ್ಮ ಪರಿಕರಗಳು ಕೂಡ ಇಂತಹ ಸಾಧಕರಿಂದಲೇ ಮೂಡಿಬಂದಂತದು. ಇತರರ ಸುಖಕ್ಕಾಗಿ ತಮ್ಮ ಜೀವಿತದ ಅಮೂಲ್ಯ ಸಮಯವನ್ನೆಲ್ಲಾ ಇಂತಹ  ಸಂಶೋಧನೆಗಾಗಿಯೇ ಮುಡಿಪಿಟ್ಟು ತಮ್ಮ ಜೀವ, ಜೀವನವನ್ನೇ ತೇಯ್ದುಕೊಂಡ ಎಷ್ಟೊಂದು ಸಾಧಕರನ್ನು ನಮ್ಮ ಕಣ್ಣ ಮುಂದೆ ಕಾಣುತ್ತಲೇ ಇರುತ್ತೇವೆ.

ಪ್ರತಿಯೊಬ್ಬ ವ್ಯಕ್ತಿಯೂ ಜೀವನದಲ್ಲಿ ಏನಾದರೊಂದು ಸಾಧಿಸುವ ಛಲಹೊಂದಿರಬೇಕು. ಕಷ್ಟಪಡದೇ ಇಲ್ಲೇನನ್ನೂ ಸಾಧಿಸಲಾಗುವುದಿಲ್ಲ. ನಿರಂತರ ಪರಿಶ್ರಮದಿಂದ ಮಾತ್ರ ಗುರಿಸೇರಲು ಸಾಧ್ಯ High aim is not crime ಎತ್ತರದ ಗುರಿ ಹೊಂದಿರುವುದು ಅಪರಾಧವಲ್ಲ. ಎನ್ನುತ್ತಾನೆ ದಾರ್ಶನಿಕನೊಬ್ಬ. ಸಖಿ, ಅದಕ್ಕೆಂದೇ ಬದುಕಿನಲ್ಲಿ ಉತ್ತಮ ಧ್ಯೇಯವೊಂದನ್ನು ಹೊಂದಿರುವುದರಲ್ಲಿ ತಪ್ಪೇನೂ ಇಲ್ಲ. ಅದನ್ನು ಸಾಧಿಸಿಯೇ ತೀರುತ್ತೇವೊ ಇಲ್ಲವೋ ಗೊತ್ತಿಲ್ಲ. ಸಾಧನೆಯ ಹಾದಿಯಲ್ಲಿ ಅವಿರತವಾಗಿ ಹೆಜ್ಜೆ ಹಾಕುತ್ತಿದ್ದರೆ ಅಷ್ಟೇ ಸಾಕು. ಅಲ್ಲವೇ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗಿಡ ಮರ ಪ್ರಾಣಿ ಎಲ್ಲ
Next post ಸಿಂಕ್ಲೇರನಿಗೆ

ಸಣ್ಣ ಕತೆ

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

cheap jordans|wholesale air max|wholesale jordans|wholesale jewelry|wholesale jerseys