Home / ಲೇಖನ / ಇತರೆ / ಸಾಧನೆ

ಸಾಧನೆ

ಪ್ರಿಯ ಸಖಿ,

ಕೆಲವರು ಬಯಸುತ್ತಾರೆ
ತಾವು ಇಡುವ
ಪಾದಗಳ ಕೆಳಗೆ
ಇರಬೇಕೆಂದು ರತ್ನಕಂಬಳಿಗಳು
ಅಮೃತ ಶಿಲೆಗಳು
ಡಾಂಬರಿನ
ನಯ ನಾಜೂಕಿನ ರಸ್ತೆಗಳು
ಆದರೆ ತಮ್ಮ ಕಾಲುಗಳ ಕೆಳಗೆ
ಹಿಮಾಲಯ ಪರ್ವತ ಶಿಖರಗಳೆ
ಇರಬೇಕೆಂದು ಮೆಟ್ಟಿದವರು
ತೇನ್ಸಿಂಗ್ ಹಿಲೇರಿಗಳು.

ಜರಗನಹಳ್ಳಿ ಶಿವಶಂಕರ್ ಅವರ ‘ಸಾಧನೆ’ ಎಂಬ ಈ ಹನಿಗವನವನ್ನು ನೋಡಿದೆಯಾ ಸಖಿ, ಸಾಧನೆಯೆಂಬುದು ವ್ಯಕ್ತಿಯು ಹಾಕಿಕೊಂಡ ಮಿತಿಯನ್ನು ಅನುಸರಿಸಿ ನಿರ್ಮಿಸಲಾಗುತ್ತಿರುತ್ತದೆ. ಹಲವರು ಅಲ್ಪತೃಪ್ತರು. ಅವರಿಗೆ ತನ್ನ ಕಾಲ ಕೆಳಗೆ ರತ್ನಗಂಬಳಿ, ಅಮೃತ ಶಿಲೆಗಳಿದ್ದರೆ ಸಾಕು. ಆದರೆ ತೇನ್ಸಿಂಗ್, ಹಿಲೇರಿಗಳಂತಾ ಕೆಲವೇ ಸಾಧಕರು, ತಮ್ಮ ಕಾಲ ಕೆಳಗೆ ಹಿಮಾಲಯ ಪರ್ವತವೇ ಇರಬೇಕೆಂದು ಬಯಸುತ್ತಾರೆ. ಇಂತಹ ಸಾಧನೆಗಳು ಕಷ್ಟವಾದರೂ ಅಸಾಧ್ಯವಾದುದೇನಲ್ಲಾ.

ಇಂದಿನ ನಮ್ಮ ನಿತ್ಯ ಜೀವನದ ಎಷ್ಟೆಷ್ಟೋ ಸೂಕ್ಷ್ಮಾತಿಸೂಕ್ಷ್ಮ ಪರಿಕರಗಳು ಕೂಡ ಇಂತಹ ಸಾಧಕರಿಂದಲೇ ಮೂಡಿಬಂದಂತದು. ಇತರರ ಸುಖಕ್ಕಾಗಿ ತಮ್ಮ ಜೀವಿತದ ಅಮೂಲ್ಯ ಸಮಯವನ್ನೆಲ್ಲಾ ಇಂತಹ  ಸಂಶೋಧನೆಗಾಗಿಯೇ ಮುಡಿಪಿಟ್ಟು ತಮ್ಮ ಜೀವ, ಜೀವನವನ್ನೇ ತೇಯ್ದುಕೊಂಡ ಎಷ್ಟೊಂದು ಸಾಧಕರನ್ನು ನಮ್ಮ ಕಣ್ಣ ಮುಂದೆ ಕಾಣುತ್ತಲೇ ಇರುತ್ತೇವೆ.

ಪ್ರತಿಯೊಬ್ಬ ವ್ಯಕ್ತಿಯೂ ಜೀವನದಲ್ಲಿ ಏನಾದರೊಂದು ಸಾಧಿಸುವ ಛಲಹೊಂದಿರಬೇಕು. ಕಷ್ಟಪಡದೇ ಇಲ್ಲೇನನ್ನೂ ಸಾಧಿಸಲಾಗುವುದಿಲ್ಲ. ನಿರಂತರ ಪರಿಶ್ರಮದಿಂದ ಮಾತ್ರ ಗುರಿಸೇರಲು ಸಾಧ್ಯ High aim is not crime ಎತ್ತರದ ಗುರಿ ಹೊಂದಿರುವುದು ಅಪರಾಧವಲ್ಲ. ಎನ್ನುತ್ತಾನೆ ದಾರ್ಶನಿಕನೊಬ್ಬ. ಸಖಿ, ಅದಕ್ಕೆಂದೇ ಬದುಕಿನಲ್ಲಿ ಉತ್ತಮ ಧ್ಯೇಯವೊಂದನ್ನು ಹೊಂದಿರುವುದರಲ್ಲಿ ತಪ್ಪೇನೂ ಇಲ್ಲ. ಅದನ್ನು ಸಾಧಿಸಿಯೇ ತೀರುತ್ತೇವೊ ಇಲ್ಲವೋ ಗೊತ್ತಿಲ್ಲ. ಸಾಧನೆಯ ಹಾದಿಯಲ್ಲಿ ಅವಿರತವಾಗಿ ಹೆಜ್ಜೆ ಹಾಕುತ್ತಿದ್ದರೆ ಅಷ್ಟೇ ಸಾಕು. ಅಲ್ಲವೇ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...