Home / ಲೇಖನ / ಇತರೆ / ಜೀವನ ಬೇವು-ಬೆಲ್ಲ

ಜೀವನ ಬೇವು-ಬೆಲ್ಲ

ಪ್ರಿಯ ಸಖಿ,
ಅರ್ಥಪೂರ್ಣವಾದ ಹಳೆಯ ಚಿತ್ರಗೀತೆಯೊಂದು ತೇಲಿಬರುತ್ತಿದೆ.
ಈ ಜೀವನ ಬೇವುಬೆಲ್ಲ
ಬಲ್ಲಾತಗೆ ನೋವೇ ಇಲ್ಲ
ಬಾ ಧೀರರಿಗೆ ಈ ಕಾಲ
ನಿನಗುಂಟು ಜಯ
ನಿನಗುಂಟು ಜಯ ?
ನಿಜಕ್ಕೂ ಈ ಬದುಕು ಬೇವು ಬೆಲ್ಲಗಳ ಸಮಪಾಕವೇ ಅಲ್ಲವೇ ಸಖಿ. ಬದುಕಿನ ನಾಣ್ಯದ ಒಂದು ಮಗ್ಗುಲಿಗೆ ಸುಖ ಇನ್ನೊಂದು ಮಗ್ಗುಲಿಗೆ ದುಃಖ ಸುಖ ಅಥವಾ ದುಃಖ ಒಂದೇ ಸದಾ ಇಲ್ಲಿ ಸ್ಥಿರವಾಗಿರುವುದಿಲ್ಲ. ಈ ನಿಜವನ್ನು ಅರಿತವನು ತನಗೆ ಸದಾ ನೋವೇ ಎಂದು ವೃಥಾ ಚಿಂತಿಸಿ ಕೊರಗುವುದಿಲ್ಲ. ತನ್ನ ನೋವನ್ನೂ ದಿಟ್ಟತನದಿಂದ ನಲಿವನ್ನಾಗಿಸಿಕೊಳ್ಳಬಲ್ಲ ಕಲೆ ಅರಿತ ವ್ಯಕ್ತಿಗೆ ಸದಾ ಗೆಲುವು ಕಟ್ಟಿಟ್ಟ ಬುತ್ತಿ.

ಬರಿಯ ಸುಖವನ್ನೇ ಕಂಡ ಮನುಷ್ಯನಾಗಲೀ ಬರೀ ದುಃಖವನ್ನೇ ಕಂಡ ಮನುಷ್ಯನಾಗಲೀ ಎಂದಿಗೂ ಪರಿಪೂರ್ಣನಲ್ಲ. ಅವನ ಭಾವಗಳು ಪಕ್ವಗೊಳ್ಳಲು ದುಃಖ ಎರಡರ ಅನುಭವವೂ ವ್ಯಕ್ತಿಗೆ ಬೇಕು. ಹೀಗೆಂದೇ ಯುಗಾದಿಯಂದು ಸಾಂಕೇತಿಕವಾಗಿ, ನಾವು ಬೇವು ಬೆಲ್ಲವನ್ನು ಒಟ್ಟಾಗಿ ಸೇವಿಸಿ ವರ್ಷವಿಡೀ ಬದುಕು ಕಷ್ಪ ಸುಖಗಳ ಸಮನ್ವಯವಾಗಲೆಂದು ಆಶಿಸುತ್ತೇವೆ.

ಡಾ. ರೆಹೀನ್‍ಹೋಲ್ಡ್ ಅವರು,
God, grant me the sensibility
to accept the things I cannot change,
The courage to change the things I can,
And the wisdom to know the difference!

ದೇವರೇ, ನನ್ನಿಂದ ಬದಲಿಸಲಾಗದ ಸಂಗತಿಗಳನ್ನು ಒಪ್ಪಿಕೊಳ್ಳುವಂತಾ ತಿಳಿವು ನೀಡು. ನನ್ನಿಂದ ಬದಲಿಸಲಾಗುವ ಸಂಗತಿಗಳನ್ನು ಬದಲಿಸಲು ಧೈರ್ಯ ನೀಡು ಮತ್ತು ಇವೆರಡರ ನಡುವಿನ ವ್ಯತ್ಯಾಸ ತಿಳಿಯುವ ಬುದ್ಧಿಶಕ್ತಿ ನೀಡು ಎಂದು ಪ್ರಾರ್ಥಿಸುತ್ತಾರೆ. ಇಂತಹ ಮೌಲಿಕ ನುಡಿಗಳನ್ನು ಅರ್ಥೈಸಿಕೊಂಡು ನಮ್ಮ ಬದುಕಿನಲ್ಲೂ ಅಳಿವಡಿಸಿಕೊಂಡು, ಸುಖ-ದುಃಖ ಎರಡನ್ನೂ ಒಂದೇ ರೀತಿ ನೋಡುವ ಸ್ಥಿತ ಪ್ರಜ್ಞೆಯನ್ನು ನಾವೂ ಬೆಳೆಸಿಕೊಳ್ಳಲು ಸಾಧ್ಯವಾದರೆ, ಅದೇ ಈ ಹೊಸವರ್ಷಕ್ಕೆ, ಸಂವತ್ಸರಕ್ಕೆ ನಮಗೆ ನಾವು ಕೊಟ್ಟುಕೊಳ್ಳುವ ಕೊಡುಗೆ ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...