Home / ಲೇಖನ / ಇತರೆ / ಜೀವನ ಬೇವು-ಬೆಲ್ಲ

ಜೀವನ ಬೇವು-ಬೆಲ್ಲ

ಪ್ರಿಯ ಸಖಿ,
ಅರ್ಥಪೂರ್ಣವಾದ ಹಳೆಯ ಚಿತ್ರಗೀತೆಯೊಂದು ತೇಲಿಬರುತ್ತಿದೆ.
ಈ ಜೀವನ ಬೇವುಬೆಲ್ಲ
ಬಲ್ಲಾತಗೆ ನೋವೇ ಇಲ್ಲ
ಬಾ ಧೀರರಿಗೆ ಈ ಕಾಲ
ನಿನಗುಂಟು ಜಯ
ನಿನಗುಂಟು ಜಯ ?
ನಿಜಕ್ಕೂ ಈ ಬದುಕು ಬೇವು ಬೆಲ್ಲಗಳ ಸಮಪಾಕವೇ ಅಲ್ಲವೇ ಸಖಿ. ಬದುಕಿನ ನಾಣ್ಯದ ಒಂದು ಮಗ್ಗುಲಿಗೆ ಸುಖ ಇನ್ನೊಂದು ಮಗ್ಗುಲಿಗೆ ದುಃಖ ಸುಖ ಅಥವಾ ದುಃಖ ಒಂದೇ ಸದಾ ಇಲ್ಲಿ ಸ್ಥಿರವಾಗಿರುವುದಿಲ್ಲ. ಈ ನಿಜವನ್ನು ಅರಿತವನು ತನಗೆ ಸದಾ ನೋವೇ ಎಂದು ವೃಥಾ ಚಿಂತಿಸಿ ಕೊರಗುವುದಿಲ್ಲ. ತನ್ನ ನೋವನ್ನೂ ದಿಟ್ಟತನದಿಂದ ನಲಿವನ್ನಾಗಿಸಿಕೊಳ್ಳಬಲ್ಲ ಕಲೆ ಅರಿತ ವ್ಯಕ್ತಿಗೆ ಸದಾ ಗೆಲುವು ಕಟ್ಟಿಟ್ಟ ಬುತ್ತಿ.

ಬರಿಯ ಸುಖವನ್ನೇ ಕಂಡ ಮನುಷ್ಯನಾಗಲೀ ಬರೀ ದುಃಖವನ್ನೇ ಕಂಡ ಮನುಷ್ಯನಾಗಲೀ ಎಂದಿಗೂ ಪರಿಪೂರ್ಣನಲ್ಲ. ಅವನ ಭಾವಗಳು ಪಕ್ವಗೊಳ್ಳಲು ದುಃಖ ಎರಡರ ಅನುಭವವೂ ವ್ಯಕ್ತಿಗೆ ಬೇಕು. ಹೀಗೆಂದೇ ಯುಗಾದಿಯಂದು ಸಾಂಕೇತಿಕವಾಗಿ, ನಾವು ಬೇವು ಬೆಲ್ಲವನ್ನು ಒಟ್ಟಾಗಿ ಸೇವಿಸಿ ವರ್ಷವಿಡೀ ಬದುಕು ಕಷ್ಪ ಸುಖಗಳ ಸಮನ್ವಯವಾಗಲೆಂದು ಆಶಿಸುತ್ತೇವೆ.

ಡಾ. ರೆಹೀನ್‍ಹೋಲ್ಡ್ ಅವರು,
God, grant me the sensibility
to accept the things I cannot change,
The courage to change the things I can,
And the wisdom to know the difference!

ದೇವರೇ, ನನ್ನಿಂದ ಬದಲಿಸಲಾಗದ ಸಂಗತಿಗಳನ್ನು ಒಪ್ಪಿಕೊಳ್ಳುವಂತಾ ತಿಳಿವು ನೀಡು. ನನ್ನಿಂದ ಬದಲಿಸಲಾಗುವ ಸಂಗತಿಗಳನ್ನು ಬದಲಿಸಲು ಧೈರ್ಯ ನೀಡು ಮತ್ತು ಇವೆರಡರ ನಡುವಿನ ವ್ಯತ್ಯಾಸ ತಿಳಿಯುವ ಬುದ್ಧಿಶಕ್ತಿ ನೀಡು ಎಂದು ಪ್ರಾರ್ಥಿಸುತ್ತಾರೆ. ಇಂತಹ ಮೌಲಿಕ ನುಡಿಗಳನ್ನು ಅರ್ಥೈಸಿಕೊಂಡು ನಮ್ಮ ಬದುಕಿನಲ್ಲೂ ಅಳಿವಡಿಸಿಕೊಂಡು, ಸುಖ-ದುಃಖ ಎರಡನ್ನೂ ಒಂದೇ ರೀತಿ ನೋಡುವ ಸ್ಥಿತ ಪ್ರಜ್ಞೆಯನ್ನು ನಾವೂ ಬೆಳೆಸಿಕೊಳ್ಳಲು ಸಾಧ್ಯವಾದರೆ, ಅದೇ ಈ ಹೊಸವರ್ಷಕ್ಕೆ, ಸಂವತ್ಸರಕ್ಕೆ ನಮಗೆ ನಾವು ಕೊಟ್ಟುಕೊಳ್ಳುವ ಕೊಡುಗೆ ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...