Home / ಲೇಖನ / ಇತರೆ / ನಿತ್ಯ ಹಸಿರು

ನಿತ್ಯ ಹಸಿರು

ಪ್ರಿಯ ಸಖಿ,
ಮನುಷ್ಯನ ಬದುಕಿನಲ್ಲಿ ಯಾವುದು ನಿತ್ಯ ಹಸಿರಾಗಿರುತ್ತದೆ? ಮತ್ತೆ ಯಾವುದು ಬೇಗ ಬಾಡಿಹೋಗುತ್ತದೆ? ನಿನಗೆ ಗೊತ್ತೇ? ಚಿಂತಕ ಮುಸೋಲಿನಿ ಹೀಗೆ
ಹೇಳುತ್ತಾನೆ.
Beauty, Strength, Youth
are flowers but,
fading soon
duty, faith, love
are roots and
evergreen
ಸೌಂದರ್ಯ, ಶಕ್ತಿ ಮತ್ತು ಯೌವ್ವನ ಹೂವುಗಳಿದ್ದಂತೆ, ಆದರೆ ಬೇಗ ಬಾಡಿ ಹೋಗುತ್ತವೆ. ಕರ್ತವ್ಯ, ನಂಬಿಕೆ, ಶ್ರದ್ಧೆ, ಪ್ರೀತಿ ಬೇರುಗಳಿದ್ದಂತೆ. ಅವು ನಿತ್ಯ ಹಸಿರಾಗಿರುತ್ತವೆ.

ದಿನಕಳೆದಂತೆ ಕಳೆಗುಂದುವ ಅಲ್ಪಾಯುವಾದ ಸೌಂದರ್ಯ ಶಕ್ತಿ ಮತ್ತು ಯೌವನವನ್ನು ವೃದ್ಧಿಗೊಳಿಸುವತ್ತ ನಮ್ಮ ಗಮನವನ್ನು ಕೇಂದ್ರೀಕರಿಸಿದರೆ ಅದರಿಂದ ಪ್ರಯೋಜನವೇನೂ ಇಲ್ಲ. ಅದು ಸಮಯ ಕಳೆದಂತೆ ತನ್ನ ಬೆಲೆಯನ್ನು ಕಳೆದುಕೊಳ್ಳುತ್ತದೆ ಆದರೆ ಕರ್ತವ್ಯ, ಶ್ರದ್ಧೆ, ಪ್ರೀತಿ ಎಂಬ ಬೇರುಗಳನ್ನು ಗಟ್ಟಿಗೊಳಿಸುತ್ತಾ ಸಾಗಿದರೆ ಅದರಿಂದ ಬದುಕು ಸುಂದರವಾಗುತ್ತದೆ. ಜೊತೆಗೆ ಶಾಶ್ವತ ಆಂತರಿಕ ಬೆಳವಣಿಗೆಯೂ ಸಾಧ್ಯವಾಗುತ್ತದೆ. ತನ್ನ ಕರ್ತವ್ಯ, ಶ್ರದ್ಧೆ ಮತ್ತು ಪ್ರೀತಿಯಲ್ಲಿ ವಿಶ್ವಾಸವಿರಿಸಿರುವ ವ್ಯಕ್ತಿ ಸದಾ ಗೆಲ್ಲುತ್ತಲೇ ಹೋಗುತ್ತಾನೆ. ಅವನಿಗೆ ಸೋಲೆಂಬುದೇ ಇಲ್ಲ. ನಿಜವಾದ ಬದುಕಿನ ಮರ್ಮ ಅಡಗಿರುವುದೂ ಕ್ಷಣಿಕ. ಬಾಡಿಹೋಗುವ ಸೌಂದರ್ಯ, ಶಕ್ತಿ, ಯೌವನದಲ್ಲಿ ಅಲ್ಲ. ಇದನ್ನೂ ಮೀರಿ ಬದುಕಿನಲ್ಲಿ ಅನೇಕ ಮೌಲಿಕ ವಿಚಾರಗಳಿವೆ. ಅವುಗಳ ಅಳವಡಿಕೆಯಿಂದ ಮಾತ್ರ ನಾವು ಪರಿಪೂರ್ಣ ಮಾನವರಾಗಲು ಸಾಧ್ಯ ಎನ್ನುವುದನ್ನು ಅರಿತ ವ್ಯಕ್ತಿಯೇ ನಿಜಕ್ಕೂ ಧನ್ಯ. ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...