Home / ಲೇಖನ / ಇತರೆ / ನಿತ್ಯ ಹಸಿರು

ನಿತ್ಯ ಹಸಿರು

ಪ್ರಿಯ ಸಖಿ,
ಮನುಷ್ಯನ ಬದುಕಿನಲ್ಲಿ ಯಾವುದು ನಿತ್ಯ ಹಸಿರಾಗಿರುತ್ತದೆ? ಮತ್ತೆ ಯಾವುದು ಬೇಗ ಬಾಡಿಹೋಗುತ್ತದೆ? ನಿನಗೆ ಗೊತ್ತೇ? ಚಿಂತಕ ಮುಸೋಲಿನಿ ಹೀಗೆ
ಹೇಳುತ್ತಾನೆ.
Beauty, Strength, Youth
are flowers but,
fading soon
duty, faith, love
are roots and
evergreen
ಸೌಂದರ್ಯ, ಶಕ್ತಿ ಮತ್ತು ಯೌವ್ವನ ಹೂವುಗಳಿದ್ದಂತೆ, ಆದರೆ ಬೇಗ ಬಾಡಿ ಹೋಗುತ್ತವೆ. ಕರ್ತವ್ಯ, ನಂಬಿಕೆ, ಶ್ರದ್ಧೆ, ಪ್ರೀತಿ ಬೇರುಗಳಿದ್ದಂತೆ. ಅವು ನಿತ್ಯ ಹಸಿರಾಗಿರುತ್ತವೆ.

ದಿನಕಳೆದಂತೆ ಕಳೆಗುಂದುವ ಅಲ್ಪಾಯುವಾದ ಸೌಂದರ್ಯ ಶಕ್ತಿ ಮತ್ತು ಯೌವನವನ್ನು ವೃದ್ಧಿಗೊಳಿಸುವತ್ತ ನಮ್ಮ ಗಮನವನ್ನು ಕೇಂದ್ರೀಕರಿಸಿದರೆ ಅದರಿಂದ ಪ್ರಯೋಜನವೇನೂ ಇಲ್ಲ. ಅದು ಸಮಯ ಕಳೆದಂತೆ ತನ್ನ ಬೆಲೆಯನ್ನು ಕಳೆದುಕೊಳ್ಳುತ್ತದೆ ಆದರೆ ಕರ್ತವ್ಯ, ಶ್ರದ್ಧೆ, ಪ್ರೀತಿ ಎಂಬ ಬೇರುಗಳನ್ನು ಗಟ್ಟಿಗೊಳಿಸುತ್ತಾ ಸಾಗಿದರೆ ಅದರಿಂದ ಬದುಕು ಸುಂದರವಾಗುತ್ತದೆ. ಜೊತೆಗೆ ಶಾಶ್ವತ ಆಂತರಿಕ ಬೆಳವಣಿಗೆಯೂ ಸಾಧ್ಯವಾಗುತ್ತದೆ. ತನ್ನ ಕರ್ತವ್ಯ, ಶ್ರದ್ಧೆ ಮತ್ತು ಪ್ರೀತಿಯಲ್ಲಿ ವಿಶ್ವಾಸವಿರಿಸಿರುವ ವ್ಯಕ್ತಿ ಸದಾ ಗೆಲ್ಲುತ್ತಲೇ ಹೋಗುತ್ತಾನೆ. ಅವನಿಗೆ ಸೋಲೆಂಬುದೇ ಇಲ್ಲ. ನಿಜವಾದ ಬದುಕಿನ ಮರ್ಮ ಅಡಗಿರುವುದೂ ಕ್ಷಣಿಕ. ಬಾಡಿಹೋಗುವ ಸೌಂದರ್ಯ, ಶಕ್ತಿ, ಯೌವನದಲ್ಲಿ ಅಲ್ಲ. ಇದನ್ನೂ ಮೀರಿ ಬದುಕಿನಲ್ಲಿ ಅನೇಕ ಮೌಲಿಕ ವಿಚಾರಗಳಿವೆ. ಅವುಗಳ ಅಳವಡಿಕೆಯಿಂದ ಮಾತ್ರ ನಾವು ಪರಿಪೂರ್ಣ ಮಾನವರಾಗಲು ಸಾಧ್ಯ ಎನ್ನುವುದನ್ನು ಅರಿತ ವ್ಯಕ್ತಿಯೇ ನಿಜಕ್ಕೂ ಧನ್ಯ. ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...