Home / ಲೇಖನ / ಇತರೆ / ನಿತ್ಯ ಹಸಿರು

ನಿತ್ಯ ಹಸಿರು

ಪ್ರಿಯ ಸಖಿ,
ಮನುಷ್ಯನ ಬದುಕಿನಲ್ಲಿ ಯಾವುದು ನಿತ್ಯ ಹಸಿರಾಗಿರುತ್ತದೆ? ಮತ್ತೆ ಯಾವುದು ಬೇಗ ಬಾಡಿಹೋಗುತ್ತದೆ? ನಿನಗೆ ಗೊತ್ತೇ? ಚಿಂತಕ ಮುಸೋಲಿನಿ ಹೀಗೆ
ಹೇಳುತ್ತಾನೆ.
Beauty, Strength, Youth
are flowers but,
fading soon
duty, faith, love
are roots and
evergreen
ಸೌಂದರ್ಯ, ಶಕ್ತಿ ಮತ್ತು ಯೌವ್ವನ ಹೂವುಗಳಿದ್ದಂತೆ, ಆದರೆ ಬೇಗ ಬಾಡಿ ಹೋಗುತ್ತವೆ. ಕರ್ತವ್ಯ, ನಂಬಿಕೆ, ಶ್ರದ್ಧೆ, ಪ್ರೀತಿ ಬೇರುಗಳಿದ್ದಂತೆ. ಅವು ನಿತ್ಯ ಹಸಿರಾಗಿರುತ್ತವೆ.

ದಿನಕಳೆದಂತೆ ಕಳೆಗುಂದುವ ಅಲ್ಪಾಯುವಾದ ಸೌಂದರ್ಯ ಶಕ್ತಿ ಮತ್ತು ಯೌವನವನ್ನು ವೃದ್ಧಿಗೊಳಿಸುವತ್ತ ನಮ್ಮ ಗಮನವನ್ನು ಕೇಂದ್ರೀಕರಿಸಿದರೆ ಅದರಿಂದ ಪ್ರಯೋಜನವೇನೂ ಇಲ್ಲ. ಅದು ಸಮಯ ಕಳೆದಂತೆ ತನ್ನ ಬೆಲೆಯನ್ನು ಕಳೆದುಕೊಳ್ಳುತ್ತದೆ ಆದರೆ ಕರ್ತವ್ಯ, ಶ್ರದ್ಧೆ, ಪ್ರೀತಿ ಎಂಬ ಬೇರುಗಳನ್ನು ಗಟ್ಟಿಗೊಳಿಸುತ್ತಾ ಸಾಗಿದರೆ ಅದರಿಂದ ಬದುಕು ಸುಂದರವಾಗುತ್ತದೆ. ಜೊತೆಗೆ ಶಾಶ್ವತ ಆಂತರಿಕ ಬೆಳವಣಿಗೆಯೂ ಸಾಧ್ಯವಾಗುತ್ತದೆ. ತನ್ನ ಕರ್ತವ್ಯ, ಶ್ರದ್ಧೆ ಮತ್ತು ಪ್ರೀತಿಯಲ್ಲಿ ವಿಶ್ವಾಸವಿರಿಸಿರುವ ವ್ಯಕ್ತಿ ಸದಾ ಗೆಲ್ಲುತ್ತಲೇ ಹೋಗುತ್ತಾನೆ. ಅವನಿಗೆ ಸೋಲೆಂಬುದೇ ಇಲ್ಲ. ನಿಜವಾದ ಬದುಕಿನ ಮರ್ಮ ಅಡಗಿರುವುದೂ ಕ್ಷಣಿಕ. ಬಾಡಿಹೋಗುವ ಸೌಂದರ್ಯ, ಶಕ್ತಿ, ಯೌವನದಲ್ಲಿ ಅಲ್ಲ. ಇದನ್ನೂ ಮೀರಿ ಬದುಕಿನಲ್ಲಿ ಅನೇಕ ಮೌಲಿಕ ವಿಚಾರಗಳಿವೆ. ಅವುಗಳ ಅಳವಡಿಕೆಯಿಂದ ಮಾತ್ರ ನಾವು ಪರಿಪೂರ್ಣ ಮಾನವರಾಗಲು ಸಾಧ್ಯ ಎನ್ನುವುದನ್ನು ಅರಿತ ವ್ಯಕ್ತಿಯೇ ನಿಜಕ್ಕೂ ಧನ್ಯ. ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...