Home / ಲೇಖನ / ಇತರೆ / ಇಕ್ಕಳ

ಇಕ್ಕಳ

ಪ್ರಿಯ ಸಖಿ,
ಚಳಿಗಾಲ ಬಂದಾಗ ‘ಎಷ್ಟು ಚಳಿ?’ ಎಂದರು
ಬಂತಲ್ಲ ಬೇಸಿಗೆ ‘ಕೆಟ್ಟ ಬಿಸಿಲೆಂ’ದರು
ಮಳೆ ಬಿತ್ತೋ ‘ಬಿಡದಲ್ಲ ಶನಿ’ ಎಂಬ ಟೀಕೆ
ಇವರು ಮೆಚ್ಚುವ ವಸ್ತು ಇಲ್ಲಿಲ್ಲ ಜೋಕೆ.
ಕವಿ ಕೆ. ಎಸ್. ನರಸಿಂಹಸ್ವಾಮಿಯವರ ‘ಇಕ್ಕಳ’ ಕವನದ ಈ ಸಾಲುಗಳು ವಿಕ್ಷಿಪ್ತ ಮನೋಭಾವದ ವ್ಯಕ್ತಿಗಳ ಮನೋಭಾವವನ್ನು ಕುರಿತ ಚಿತ್ರಣವನ್ನು ನೀಡುತ್ತದೆ. ಸದಾ ಟೀಕಿಸುವುದನ್ನೇ ಗುರಿಯಾಗಿ ಇಟ್ಟುಕೊಂಡ ಇಂತವರಿಗೆ ಎಲ್ಲದರಲ್ಲೂ ತಪ್ಪು ಕಂಡು ಹಿಡಿಯುವ ಪ್ರವೃತ್ತಿ, ಟೀಕೆ ಮಾಡಿ ಗೊಣಗಾಡದಿದ್ದರೆ ಇವರಿಗೆ ಸಮಾಧಾನವೇ ಇಲ್ಲ. ಚಳಿಗಾಲ, ಬೇಸಿಗೆಗಾಲ, ಮಳೆಗಾಲ ಎಲ್ಲದರ ಬಗೆಗೂ ಇವರಿಗೆ ಅಸಮಾಧಾನವೇ. ಕವನವಮ್ನ ಮುಂದುವರೆಸುತ್ತಾ ಕವಿ
ನಿಂತವರ ಕೇಳುವರು, ನೀನೇಕೆ ನಿಂತೆ?
ಮಲಗಿದರೆ ಗೊಣಗುವರು. ನಿನಗಿಲ್ಲ ಚಿಂತೆ!
ಓಡಿದರೆ ಬೆನ್ನ ಹಿಂದೆಯೇ ಇವರ ಟೀಕೆ!
ಇವರು ಮೆಚ್ಚುವ ವಸ್ತು ಇಲ್ಲಿಲ್ಲ ಜೋಕೆ!
ಯಾವುದನ್ನೂ ಒಪ್ಪದ ಇವರಿಗೆ ನಿಂತರೂ ತಪ್ಪು ಮಲಗಿದರೂ ತಪ್ಪು, ಓಡಿದರೂ ತಪ್ಪು! ಒಟ್ಟಿನಲ್ಲಿ ಯಾವ ವಸ್ತುವನ್ನೇ ಆಗಲಿ ಪರಿಸ್ಥಿತಿಯನ್ನೇ ಆಗಲಿ, ಕಾಲವನ್ನೇ ಆಗಲಿ, ವ್ಯಕ್ತಿಯನ್ನೇ ಆಗಲಿ ಟೇಕಿಸುತ್ತಲೇ ಇರುವುದು ಇವರ ಸ್ವಭಾವ. ಇದೊಂದು ರೀತಿಯ ಮನೋರೋಗವೂ ಹೌದು. ಅತೃಪ್ತ ಮನಸ್ಸಿಗೆ ಸದಾಲೋಕವೇ ಡೊಂಕಾಗಿ ಕಾಣುತ್ತದೆ. ಯಾವುದರಿಂದಲೂ ತೃಪ್ತಿ ಹೊಂದದ ವಿಲಕ್ಷಣ ವ್ಯಕ್ತಿಗಳೊಂದಗಿನ ಬಾಳೂ ಅಸಹನೀಯವೇ.

ಇಂತಹವರ ಕೈಗಳಿಗೆ ಸಿಕ್ಕಿಕೊಂಡ ವ್ಯಕ್ತಿ ಇಕ್ಕಳದ ಮಧ್ಯೆ ಸಿಕ್ಕಂತೆ ಚಡಪಡಿಸ ಬೇಕಾಗುತ್ತದೆ. ಯಾವುದು ಸರಿಯೋ? ಯಾವುದು ತಪ್ಪೋ? ಯಾವುದನ್ನು ಮಾಡಬೇಕು? ಯಾವುದನ್ನು ಬಿಡಬೇಕು? ಹೇಗೆ ನಡೆದುಕೊಂಡರೆ ಸರಿ? ಎಂದು ಅರಿಯದೇ ಚಡಪಡಿಸಿ, ಗೊಂದಲಕ್ಕೊಳಗಾಗುತ್ತಾನೆ. ಆದರೆ ಇಂತಹ ಅತೃಪ್ತ ಮನಸ್ಸಿನವರ ಟೀಕೆಗೆ ಕಿವಿಗೊಟ್ಟು ಮಾನಸಿಕ ಕ್ಷೋಭೆಗೊಳಗಾಗುವುದಕ್ಕಿಂತಾ, ಅವರನ್ನು ಅವರ ಪಾಡಿಗೆ ಟೀಕಿಸಲು ಬಿಟ್ಟು, ನಮ್ಮ ವಿವೇಚನೆಯಿಂದ ಸರಿ ತಪ್ಪನ್ನು ತಿಳಿದುಕೊಂಡು ಅವರ ಮಾತುಗಳಿಗೆ ಜಾಣ ಕಿವುಡು ನಟಿಸುವುದೇ ಉತ್ತಮವಾದ ಮಾರ್ಗ ಎಂದು ನನಗನ್ನಿಸುತ್ತದೆ. ನಿನ್ನ ಅಭಿಪ್ರಾಯವೇನು ಸಖಿ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...