Home / ಲೇಖನ / ಇತರೆ / ಇಕ್ಕಳ

ಇಕ್ಕಳ

ಪ್ರಿಯ ಸಖಿ,
ಚಳಿಗಾಲ ಬಂದಾಗ ‘ಎಷ್ಟು ಚಳಿ?’ ಎಂದರು
ಬಂತಲ್ಲ ಬೇಸಿಗೆ ‘ಕೆಟ್ಟ ಬಿಸಿಲೆಂ’ದರು
ಮಳೆ ಬಿತ್ತೋ ‘ಬಿಡದಲ್ಲ ಶನಿ’ ಎಂಬ ಟೀಕೆ
ಇವರು ಮೆಚ್ಚುವ ವಸ್ತು ಇಲ್ಲಿಲ್ಲ ಜೋಕೆ.
ಕವಿ ಕೆ. ಎಸ್. ನರಸಿಂಹಸ್ವಾಮಿಯವರ ‘ಇಕ್ಕಳ’ ಕವನದ ಈ ಸಾಲುಗಳು ವಿಕ್ಷಿಪ್ತ ಮನೋಭಾವದ ವ್ಯಕ್ತಿಗಳ ಮನೋಭಾವವನ್ನು ಕುರಿತ ಚಿತ್ರಣವನ್ನು ನೀಡುತ್ತದೆ. ಸದಾ ಟೀಕಿಸುವುದನ್ನೇ ಗುರಿಯಾಗಿ ಇಟ್ಟುಕೊಂಡ ಇಂತವರಿಗೆ ಎಲ್ಲದರಲ್ಲೂ ತಪ್ಪು ಕಂಡು ಹಿಡಿಯುವ ಪ್ರವೃತ್ತಿ, ಟೀಕೆ ಮಾಡಿ ಗೊಣಗಾಡದಿದ್ದರೆ ಇವರಿಗೆ ಸಮಾಧಾನವೇ ಇಲ್ಲ. ಚಳಿಗಾಲ, ಬೇಸಿಗೆಗಾಲ, ಮಳೆಗಾಲ ಎಲ್ಲದರ ಬಗೆಗೂ ಇವರಿಗೆ ಅಸಮಾಧಾನವೇ. ಕವನವಮ್ನ ಮುಂದುವರೆಸುತ್ತಾ ಕವಿ
ನಿಂತವರ ಕೇಳುವರು, ನೀನೇಕೆ ನಿಂತೆ?
ಮಲಗಿದರೆ ಗೊಣಗುವರು. ನಿನಗಿಲ್ಲ ಚಿಂತೆ!
ಓಡಿದರೆ ಬೆನ್ನ ಹಿಂದೆಯೇ ಇವರ ಟೀಕೆ!
ಇವರು ಮೆಚ್ಚುವ ವಸ್ತು ಇಲ್ಲಿಲ್ಲ ಜೋಕೆ!
ಯಾವುದನ್ನೂ ಒಪ್ಪದ ಇವರಿಗೆ ನಿಂತರೂ ತಪ್ಪು ಮಲಗಿದರೂ ತಪ್ಪು, ಓಡಿದರೂ ತಪ್ಪು! ಒಟ್ಟಿನಲ್ಲಿ ಯಾವ ವಸ್ತುವನ್ನೇ ಆಗಲಿ ಪರಿಸ್ಥಿತಿಯನ್ನೇ ಆಗಲಿ, ಕಾಲವನ್ನೇ ಆಗಲಿ, ವ್ಯಕ್ತಿಯನ್ನೇ ಆಗಲಿ ಟೇಕಿಸುತ್ತಲೇ ಇರುವುದು ಇವರ ಸ್ವಭಾವ. ಇದೊಂದು ರೀತಿಯ ಮನೋರೋಗವೂ ಹೌದು. ಅತೃಪ್ತ ಮನಸ್ಸಿಗೆ ಸದಾಲೋಕವೇ ಡೊಂಕಾಗಿ ಕಾಣುತ್ತದೆ. ಯಾವುದರಿಂದಲೂ ತೃಪ್ತಿ ಹೊಂದದ ವಿಲಕ್ಷಣ ವ್ಯಕ್ತಿಗಳೊಂದಗಿನ ಬಾಳೂ ಅಸಹನೀಯವೇ.

ಇಂತಹವರ ಕೈಗಳಿಗೆ ಸಿಕ್ಕಿಕೊಂಡ ವ್ಯಕ್ತಿ ಇಕ್ಕಳದ ಮಧ್ಯೆ ಸಿಕ್ಕಂತೆ ಚಡಪಡಿಸ ಬೇಕಾಗುತ್ತದೆ. ಯಾವುದು ಸರಿಯೋ? ಯಾವುದು ತಪ್ಪೋ? ಯಾವುದನ್ನು ಮಾಡಬೇಕು? ಯಾವುದನ್ನು ಬಿಡಬೇಕು? ಹೇಗೆ ನಡೆದುಕೊಂಡರೆ ಸರಿ? ಎಂದು ಅರಿಯದೇ ಚಡಪಡಿಸಿ, ಗೊಂದಲಕ್ಕೊಳಗಾಗುತ್ತಾನೆ. ಆದರೆ ಇಂತಹ ಅತೃಪ್ತ ಮನಸ್ಸಿನವರ ಟೀಕೆಗೆ ಕಿವಿಗೊಟ್ಟು ಮಾನಸಿಕ ಕ್ಷೋಭೆಗೊಳಗಾಗುವುದಕ್ಕಿಂತಾ, ಅವರನ್ನು ಅವರ ಪಾಡಿಗೆ ಟೀಕಿಸಲು ಬಿಟ್ಟು, ನಮ್ಮ ವಿವೇಚನೆಯಿಂದ ಸರಿ ತಪ್ಪನ್ನು ತಿಳಿದುಕೊಂಡು ಅವರ ಮಾತುಗಳಿಗೆ ಜಾಣ ಕಿವುಡು ನಟಿಸುವುದೇ ಉತ್ತಮವಾದ ಮಾರ್ಗ ಎಂದು ನನಗನ್ನಿಸುತ್ತದೆ. ನಿನ್ನ ಅಭಿಪ್ರಾಯವೇನು ಸಖಿ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...