Home / ಲೇಖನ / ಇತರೆ / ಇಕ್ಕಳ

ಇಕ್ಕಳ

ಪ್ರಿಯ ಸಖಿ,
ಚಳಿಗಾಲ ಬಂದಾಗ ‘ಎಷ್ಟು ಚಳಿ?’ ಎಂದರು
ಬಂತಲ್ಲ ಬೇಸಿಗೆ ‘ಕೆಟ್ಟ ಬಿಸಿಲೆಂ’ದರು
ಮಳೆ ಬಿತ್ತೋ ‘ಬಿಡದಲ್ಲ ಶನಿ’ ಎಂಬ ಟೀಕೆ
ಇವರು ಮೆಚ್ಚುವ ವಸ್ತು ಇಲ್ಲಿಲ್ಲ ಜೋಕೆ.
ಕವಿ ಕೆ. ಎಸ್. ನರಸಿಂಹಸ್ವಾಮಿಯವರ ‘ಇಕ್ಕಳ’ ಕವನದ ಈ ಸಾಲುಗಳು ವಿಕ್ಷಿಪ್ತ ಮನೋಭಾವದ ವ್ಯಕ್ತಿಗಳ ಮನೋಭಾವವನ್ನು ಕುರಿತ ಚಿತ್ರಣವನ್ನು ನೀಡುತ್ತದೆ. ಸದಾ ಟೀಕಿಸುವುದನ್ನೇ ಗುರಿಯಾಗಿ ಇಟ್ಟುಕೊಂಡ ಇಂತವರಿಗೆ ಎಲ್ಲದರಲ್ಲೂ ತಪ್ಪು ಕಂಡು ಹಿಡಿಯುವ ಪ್ರವೃತ್ತಿ, ಟೀಕೆ ಮಾಡಿ ಗೊಣಗಾಡದಿದ್ದರೆ ಇವರಿಗೆ ಸಮಾಧಾನವೇ ಇಲ್ಲ. ಚಳಿಗಾಲ, ಬೇಸಿಗೆಗಾಲ, ಮಳೆಗಾಲ ಎಲ್ಲದರ ಬಗೆಗೂ ಇವರಿಗೆ ಅಸಮಾಧಾನವೇ. ಕವನವಮ್ನ ಮುಂದುವರೆಸುತ್ತಾ ಕವಿ
ನಿಂತವರ ಕೇಳುವರು, ನೀನೇಕೆ ನಿಂತೆ?
ಮಲಗಿದರೆ ಗೊಣಗುವರು. ನಿನಗಿಲ್ಲ ಚಿಂತೆ!
ಓಡಿದರೆ ಬೆನ್ನ ಹಿಂದೆಯೇ ಇವರ ಟೀಕೆ!
ಇವರು ಮೆಚ್ಚುವ ವಸ್ತು ಇಲ್ಲಿಲ್ಲ ಜೋಕೆ!
ಯಾವುದನ್ನೂ ಒಪ್ಪದ ಇವರಿಗೆ ನಿಂತರೂ ತಪ್ಪು ಮಲಗಿದರೂ ತಪ್ಪು, ಓಡಿದರೂ ತಪ್ಪು! ಒಟ್ಟಿನಲ್ಲಿ ಯಾವ ವಸ್ತುವನ್ನೇ ಆಗಲಿ ಪರಿಸ್ಥಿತಿಯನ್ನೇ ಆಗಲಿ, ಕಾಲವನ್ನೇ ಆಗಲಿ, ವ್ಯಕ್ತಿಯನ್ನೇ ಆಗಲಿ ಟೇಕಿಸುತ್ತಲೇ ಇರುವುದು ಇವರ ಸ್ವಭಾವ. ಇದೊಂದು ರೀತಿಯ ಮನೋರೋಗವೂ ಹೌದು. ಅತೃಪ್ತ ಮನಸ್ಸಿಗೆ ಸದಾಲೋಕವೇ ಡೊಂಕಾಗಿ ಕಾಣುತ್ತದೆ. ಯಾವುದರಿಂದಲೂ ತೃಪ್ತಿ ಹೊಂದದ ವಿಲಕ್ಷಣ ವ್ಯಕ್ತಿಗಳೊಂದಗಿನ ಬಾಳೂ ಅಸಹನೀಯವೇ.

ಇಂತಹವರ ಕೈಗಳಿಗೆ ಸಿಕ್ಕಿಕೊಂಡ ವ್ಯಕ್ತಿ ಇಕ್ಕಳದ ಮಧ್ಯೆ ಸಿಕ್ಕಂತೆ ಚಡಪಡಿಸ ಬೇಕಾಗುತ್ತದೆ. ಯಾವುದು ಸರಿಯೋ? ಯಾವುದು ತಪ್ಪೋ? ಯಾವುದನ್ನು ಮಾಡಬೇಕು? ಯಾವುದನ್ನು ಬಿಡಬೇಕು? ಹೇಗೆ ನಡೆದುಕೊಂಡರೆ ಸರಿ? ಎಂದು ಅರಿಯದೇ ಚಡಪಡಿಸಿ, ಗೊಂದಲಕ್ಕೊಳಗಾಗುತ್ತಾನೆ. ಆದರೆ ಇಂತಹ ಅತೃಪ್ತ ಮನಸ್ಸಿನವರ ಟೀಕೆಗೆ ಕಿವಿಗೊಟ್ಟು ಮಾನಸಿಕ ಕ್ಷೋಭೆಗೊಳಗಾಗುವುದಕ್ಕಿಂತಾ, ಅವರನ್ನು ಅವರ ಪಾಡಿಗೆ ಟೀಕಿಸಲು ಬಿಟ್ಟು, ನಮ್ಮ ವಿವೇಚನೆಯಿಂದ ಸರಿ ತಪ್ಪನ್ನು ತಿಳಿದುಕೊಂಡು ಅವರ ಮಾತುಗಳಿಗೆ ಜಾಣ ಕಿವುಡು ನಟಿಸುವುದೇ ಉತ್ತಮವಾದ ಮಾರ್ಗ ಎಂದು ನನಗನ್ನಿಸುತ್ತದೆ. ನಿನ್ನ ಅಭಿಪ್ರಾಯವೇನು ಸಖಿ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...