Home / ಲೇಖನ / ಇತರೆ / ಕೀಳರಿಮೆ ಏಕೆ?

ಕೀಳರಿಮೆ ಏಕೆ?

ಪ್ರಿಯ ಸಖಿ,
ಬಸ್ಸಿನ ಪ್ರಯಾಣದಲ್ಲೊಮ್ಮೆ ಕಾಲೇಜು ಯುವತಿಯೊಬ್ಬಳು ಜೊತೆಯಾದಳು. ಏನೇನೋ ಕಾಡು ಹರಟೆ ಹೊಡೆಯುತ್ತಾ ದಾರಿ ಸವೆಸುತ್ತಿರಲು, ಇದ್ದಕ್ಕಿದ್ದಂತೆ ಆ ಯುವತಿ ಕೂತ ಸೀಟಿನಲ್ಲೆ ಮಿಸುಕಾಡಲಾರಂಭಿಸಿದಳು. ಹಿಂದೆ ಮುಂದೆ, ಅಕ್ಕಪಕ್ಕಕ್ಕೆ ಜರುಗುತ್ತಾ ಹೇಗೆ ಕುಳಿತರೂ ಸಮಾಧಾನವಿಲ್ಲವೆಂಬಂತೆ ಗಲಿಬಿಲಿಯಲ್ಲಿದ್ದಳು. ನಿಧಾನಕ್ಕೆ ಕಣ್ಣು ಹಾಯಿಸಿದವಳಿಗೆ ಹಿಂದಿನ ಸೀಟಿನ ಯುವಕನೊಬ್ಬನ ಕಾಲ್ಚಳಕಕ್ಕೆ ಇವಳು ಹೀಗೆ ಒದ್ದಾಡುತ್ತಿದ್ದಾಳೆ ಎಂಬುದರಿವಾಯ್ತು. ‘ಆ ಹುಡುಗಂಗೆ ಕಾಲು ತೆಗೆಯೋದಕ್ಕೆ ಹೇಳಿ’ ಎಂದೆ. ಪಕ್ಕದವಳಿಗೆ. ಅದಕ್ಕವಳು ‘ಹೇಗೆ ಹೇಳೋದು ಅವನೇನಾದ್ರೂ ಒರಟಾಗಿ ಉತ್ತರ ಕೊಟ್ರೆ?’ ಎಂದಳು.

‘ಕೊಡ್ಲಿ ನಮಗೇನು ಬಾಯಿಲ್ಲವಾ ನಾವೂ ಮಾತಾಡಿದ್ರಾಯ್ತು’ ಎಂದೆ. ‘ಜನರೆದುರಿಗೆ ನಂಗೆ ಅವಮಾನ ಆಗುತ್ತೆ’ ಎಂದಳು ಹಿಂಜರಿಯುತ್ತಾ. ನಾನು ಅವಕ್ಕಾದೆ. ಅಲ್ಲ ಅವಮಾನವಾಗುವುದು ಇವಳಿಗಾ? ಅವನಿಗಾ? ಅವಳ ಒದ್ದಾಟ ನೋಡಲಾರದೇ ಕೊನೆಗೆ ನಾನೇ ಎದ್ದುನಿಂತು ‘ಸೀಟಿನಿಂದ ಕಾಲು ತೆಗೀರಿ ತೊಂದರೆ ಆಗುತ್ತೆ’ ಎಂದೆ. ಬಸ್ಸಿನಲ್ಲಿದ್ದ ಅನೇಕರ ಗಮನ ಆ ಕಡೆ ಬಿತ್ತು. ನಾಚಿದ ಯುವಕ ತಟ್ಟನೆ ಕಾಲ್ತೆಗೆದ. ಮುಂದೆ ಪ್ರಯಾಣದುದ್ದಕ್ಕೂ ಅನೇಕ ಪ್ರಜ್ಞಾವಂತರ ಚುಚ್ಚುನೋಟಗಳನ್ನು ಅವನು ಎದುರಿಸಬೇಕಾಯ್ತು!

ಸಖಿ, ಇಲ್ಲಿ ನನ್ನ ಕಾಳಜಿ ಇರುವುದು ಅವನ ಬಗೆಗಲ್ಲಾ. ಅವನು ಇದರಿಂದ ಪಾಠ ಕಲಿತನೋ ಇಲ್ಲವೋ ನನಗೆ ಗೊತ್ತಿಲ್ಲ. ಆದರೆ …….. ಆ ಯುವತಿಯ ಸ್ವಾನುಕಂಪದ ಬಗೆಗೆ ನನಗೆ ತೀವ್ರ ಬೇಸರವಾಯ್ತು. ಇಷ್ಟು ಸಣ್ಣ ಕಿರುಕುಳವನ್ನೇ ಎದುರಿಸಲಾಗದವಳು ನಾಳೆ ಅಕಸ್ಮಾತ್ ದೊಡ್ಡ ಶೋಷಣೆ, ದೌರ್ಜನ್ಯ ಎದುರಾದರೆ ಹೇಗೆ ಎದುರಿಸಿಯಾಳು?

ಇದು ಮಹಿಳಾ ಸಬಲೀಕರಣ ವರ್ಷ. ಅವರು ಹೀಗೆಂದುಕೊಂಡರೆ, ಇವರು ಹಾಗೆಂದುಕೊಂಡರೆ ಎಂಬ ಸ್ವಯಂ ಕಲ್ಪಿತ ಭ್ರಮಾಲೋಕದಲ್ಲಿ ತೇಲುತ್ತಾ ವಾಸ್ತವ ವನ್ನೆದುರಿಸಲು ಹಿಂಜರಿಯುವ ಇಂತಹಾ ಸ್ತ್ರೀಯರು ಸಬಲರಾಗುವುದು ಯಾವಾಗ? ಇದು ನನ್ನ ಕರ್ಮ. ಇದನ್ನು ನಾನು ಹೇಗಾದರೂ ಸರಿ ಅನುಭವಿಸಲೇಬೇಕು ಎಂಬ ಕಣ್ಪಟ್ಟಿಯನ್ನು ಕಟ್ಟಿಕೊಂಡು ಅಂಧರಾಗಿರುವ ಮಹಿಳೆಯರು, ಈ ತಮ್ಮ ಕೀಳರಿಮೆಯಿಂದ ಮೊದಲು ಹೊರಬರಬೇಕು. ಯಾರೋ ಬಂದು ನನ್ನನ್ನು ಉದ್ಧಾರ ಮಾಡುವರೆಂದು ಕಾಯದೇ ತನಗೊದಗುವ ಎಲ್ಲಾ ಸಣ್ಣ, ದೊಡ್ಡ ಆಪತ್ತುಗಳನ್ನು ಸ್ವತಹ ತಾನೇ ಎದುರಿಸಲು ಸಿದ್ಧರಾಗಬೇಕು! ಆಗಷ್ಟೇ ಹೆಣ್ಣು ಸಬಲೆಯಾಗುವತ್ತ ಒಂದು ಹೆಜ್ಜೆ ಇರಿಸಿದಂತಾಗುತ್ತದೆ.

ಬೆನ್ನಿಗೆ ಬಿದ್ದ ಶಿಲುಬೆಯನ್ನು ಹೊರುವುದೂ ಅದನ್ನು ತುಂಡರಿಸಿ ಕಿತ್ತೂಗೆಯುವುದು ಎರಡೂ ನಮ್ಮ ಕೈಯಲ್ಲೇ ಇರುವುದಿಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...