Home / ಲೇಖನ / ಇತರೆ / ಹುಚ್ಚು ಯಾರಿಗೆ?

ಹುಚ್ಚು ಯಾರಿಗೆ?

ಪ್ರಿಯ ಸಖಿ,
ಅವಳು. ದಿನವೂ ಯಾರದಾದರೂ ಮನೆಯ ಜಗುಲಿಯ ಮೇಲೆ ತನ್ನ ದೊಡ್ಡ ಬಟ್ಟೆಯ ಗಂಟನ್ನು ಇಟ್ಟುಕೊಂಡು ಕೂರುತ್ತಾಳೆ. ಸದಾ ಬಾಯಿ ವಟಗುಟ್ಟುತ್ತಲೇ ಇರುತ್ತದೆ ಕೆಲವೊಮ್ಮೆ ಯಾವುದಾದರೂ ಹಾಡನ್ನು ರಾಗವಾಗಿ ಹಾಡುತ್ತಿರುತ್ತಾಳೆ. ಇನ್ನೊಮ್ಮೆ ಶಾಲೆಯಲ್ಲಿ ಮಕ್ಕಳಿಗೆ ಪಾಠ ಮಾಡುತ್ತಿರುವ ಶಿಕ್ಷಕಿಯಂತೆ ಜೋರು ಜೋರಾಗಿ ಏನನ್ನೋ ಹೇಳುತ್ತಿರುತ್ತಾಳೆ. ಕೆಲವೊಮ್ಮೆ ಎತ್ತರದ ದನಿಯಲ್ಲಿ ಬಯ್ಯುತ್ತಿರುತ್ತಾಳೆ. ಇಂಗ್ಲೀಷನ್ನು ಅರೆದು ಕುಡಿದವಳೇನೋ! ನಿರರ್ಗಳವಾಗಿ ಇಂಗ್ಲೀಷಿನಲ್ಲಿ ಏನೇನೋ ವದರುತ್ತಿರುತ್ತಾಳೆ. ಶಿಷ್ಟ ಭಾಷೆಯಲ್ಲಿ ಹೇಳುವುದಾದರೆ ಅವಳೊಬ್ಬ ಮನೋರೋಗಿ. ಆಡುಭಾಷೆಯಲ್ಲಿ ಹೇಳುವುದಾದರೆ ಅವಳೊಬ್ಬ ಹುಚ್ಚಿ!

ನೋಡಲು ಲಕ್ಷಣವಾಗಿರುವ, ಸುಸಂಸ್ಕೃತ ಮನೆತನದವಳೆನಿಸುವ ಮಧ್ಯ ವಯಸ್ಸಿನ ಈ ಹೆಣ್ಣಿಗೆ ಅದ್ಯಾವ ಆಘಾತವಾಗಿರಬಹುದು? ಅವಳ ಬುದ್ದಿ ಕೆಡಲು ಕಾರಣರಾರು? ಸಮಾಜವೇ? ಮನೆಯವರೇ? ಮಿತ್ರರೇ? ಶತ್ರುಗಳೇ? ಹೆದರಿಕೆ ಹುಟ್ಟಿಸುವಂಥಾ, ಅಸಹ್ಯಗೊಳ್ಳುವಂತಾ ವೇಷ ತೊಟ್ಟು, ತಲೆಬಿರಿದುಕೊಂಡು, ಚಂಡಿಚಾಮುಂಡಿಯಂತೆ ಅಟ್ಟಹಾಸದಿ ನಗುತ್ತಾ, ಬೈಯ್ದುಕೊಳ್ಳುತ್ತಾ ತಿರುಗುವ ಇವಳು ಹೀಗೇಕಾದಳು?

ತಿನ್ನಲು ಏನಾದರೂ ಕೊಟ್ಟರೆ Thanks ಎಂದು ಹೇಳುವಷ್ಟು ಬುದ್ಧಿಯೂ, ತನ್ನನ್ನು ಕಲ್ಲಿನಿಂದ ಹೊಡೆಯಬಂದವರಿಗೆ ತಾನೂ ಕಲ್ಲಿನಿಂದ ಹೊಡೆದಟ್ಟಬೇಕೆಂಬ ಮಾನವ ಸಹಜ ತಿಳುವಳಿಕೆ ಇರುವ ಇವಳ ಸರಿಪಡಿಸಲಾಗುವುದಿಲ್ಲವೇ? ಅಥವಾ ಅವಳು ಸರಿಯಾಗುವುದು ಯಾರಿಗೂ ಬೇಕಿಲ್ಲವೇ? ಅವಳನ್ನು ಹುಚ್ಚಿಯಾಗಿಸಿದ ಸಮಾಜಕ್ಕೆ ಅವಳನ್ನು ಸರಿಪಡಿಸುವ ಜವಾಬ್ದಾರಿಯೂ ಇರಬೇಕಲ್ಲವೇ?

ಅವಳನ್ನೊಂದು ಮನರಂಜನೆಯ ವಸ್ತುವನ್ನಾಗಿ ಮಾಡಿಕೊಂಡು ಅವಳನ್ನು ಹಿಂಸಿಸಿ. ಗೋಳು ಗುಟ್ಟಿಸಿ, ಕಲ್ಲಿನಿಂದ ಹೊಡೆದು ತಮ್ಮ ವಿಕೃತ ಮನೋಭಾವವನ್ನು ಪ್ರದರ್ಶಿಸುವ ವ್ಯಕ್ತಿಗಳನ್ನು ಕಂಡಾಗ ಯಾರಿಗೆ ಹುಚ್ಚು? ಅವಳಿಗೋ? ಇವರಿಗೋ? ಅನಾಗರೀಕರಂತೆ ವರ್ತಿಸುತ್ತಿರುವ ಇವರು ಮನುಷ್ಯರೋ ಅಥವಾ ಮೃಗಗಳೋ ಎಂಬ ಪ್ರಶ್ನೆ ಕಾಡುತ್ತದೆ. ಬುದ್ಧಿ ಸ್ಥಿಮಿತದಲ್ಲಿಲ್ಲದಿದ್ದರೂ ತನ್ನನ್ನು ಹಿಂಸಿಸದವರಿಗೆ ಏನೂ ಮಾಡದೆ ತನಗೆ ತೊಂದರೆ ಕೊಡುವವರಿಗೆ ಮಾತ್ರ ತಾನೂ ತೊಂದರೆ ಕೊಡುವ ಆ ಹೆಂಗಸು ಬುದ್ಧಿ ಸರಿಯಿದ್ದೂ, ಅಮಾನವೀಯವಾಗಿ ಅವಳನ್ನು ಹಿಂಸಿಸಿ ಕಿರುಕುಳ ನೀಡುವ ಇಂತವರಿಗಿಂತಾ ಎಷ್ಟೋ ಮೇಲು ಎಂದೆನಿಸುತ್ತದೆ.

ಕಲ್ಲುಗಳಂದಾದ ಗಾಯದಿಂದ ಒಸರುವ ರಕ್ತಕ್ಕೆ ಮಣ್ಣು ಮೆತ್ತಿಕೊಳ್ಳುತ್ತಾ, ಕಣ್ಣಿನಲ್ಲಿ ನೀರು ಸುರಿಸುತ್ತಾ ಆ ಹೆಂಗಸು ‘ರಾಕ್ಷಸರು! ರಾಕ್ಷಸರು!’ ಎಂದುಕೊಳ್ಳುತ್ತಾ ಹೋಗುವಾಗ, ಬುದ್ಧಿ ಸರಿಯಿಲ್ಲದವರೂ, ಹಲವು ಬಾರಿ ನಿಜವನ್ನೇ ನುಡಿಯುತ್ತಾರಲ್ಲಾ? ಎಂದೆನಿಸುತ್ತದೆ ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಮ್ ಎನ್ ಎಸ್ ರಾವ್