Home / ಲೇಖನ / ಇತರೆ / ಪಲಾಯನ ಉತ್ತರವಲ್ಲ

ಪಲಾಯನ ಉತ್ತರವಲ್ಲ

ಪ್ರಿಯ ಸಖಿ,
ಇವನು ಐದು ವರ್ಷಗಳ ತನ್ನ ವಿದೇಶ ವಾಸ ಮುಗಿಸಿ ಈಗಷ್ಟೇ ತನ್ನ ಮಾತೃಭೂಮಿಗೆ ಕಾಲಿಡುತ್ತಿದ್ದಾನೆ. ಈಗ ಇವನಿಗೆ ಇಲ್ಲಿಯದೆಲ್ಲವೂ ಕೆಟ್ಟದಾಗಿ, ಅಸಹ್ಯವಾಗಿ, ಕೀಳಾಗಿ ಕಾಣುತ್ತಿದೆ.

ಗಳಿಗೆಗೊಂದು ಬಾರೀ ವಿದೇಶೀಯರ ಶುಚಿತ್ವ, ಅಲ್ಲಿನ ರಸ್ತೆಗಳು, ಅವರ ಶಿಸ್ತು, ಶ್ರೀಮಂತಿಕೆ, ವೈಭೋಗ, ಕರ್ತವ್ಯಪಾಲನೆ, ಸ್ಯಾಂಡ್ವಿಚ್, ಪಿಜ್ಜಾ……….. ಇತ್ಯಾದಿ ಇತ್ಯಾದಿ ಕುರಿತು ಭಾಷಣ ಬಿಗಿಯುತ್ತಾನೆ. ಹೌದು ಅವನು ಹೇಳುವುದೆಲ್ಲ ನಿಜವೇ ಇರಬಹುದು. ಹಾಗೇ ಇಲ್ಲಿನ ಈ ಅವ್ಯವಸ್ಥೆ ಅಶಿಸ್ತು, ಕೊಳಕು, ಭ್ರಷ್ಟತೆ, ಲಂಚಗುಳಿತನ…. ಇತ್ಯಾದಿ ಎಲ್ಲವೂ ನಿಜವೇ ಸಖಿ. ಆದರೆ ಈ ಎಲ್ಲಾ ಕೊಳಕಿನ ಬಗೆಗೆ ಮೋರೆ ಸಿಂಡರಿಸುವ ಇವನು ಮಾಡುವುದೇನು ಗೊತ್ತೇ? ಅದನ್ನು ಹೇಗೆ ಸರಿಪಡಿಸಲಿ ಎಂದು ಯೋಚಿಸುವುದಿಲ್ಲ. ದಾರಿಗಳನ್ನು ಹುಡುಕುವುದಿಲ್ಲ. ಭೂಲೋಕದ ಸ್ವರ್ಗವೆಂದು ಇವನು ನಂಬಿರುವ ವಿದೇಶಕ್ಕೆ (ಹೆಚ್ಚಿನಂಶ ಅಮೇರಿಕಾ) ಹೇಗೂ ದಾರಿ ತೆರೆದಿದೆ. ಪಕ್ಕಕ್ಕೆ ರೆಕ್ಕೆ ಕಟ್ಟಿಕೊಂಡು ಹಾರಿದರಾಯ್ತು. ಮೈ ಮುರಿದು ದುಡಿಸಿಕೊಂಡರೂ, ಕೈತುಂಬ ಮಿಕ್ಕುವಷ್ಟು ಹಣ ಸಿಕ್ಕುತ್ತದೆ. ಎಲ್ಲವೂ ವ್ಯವಸ್ಥಿತವಾಗಿ ತಯಾರಾಗಿ ನಿಂತಿರುವಾಗ ನಾವದನ್ನು ಅನುಭವಿಸಿದರಾಯ್ತು. ಇಲ್ಲಿನ ಈ ಎಲ್ಲಾ ಅವ್ಯವಸ್ಥೆ ನಡುವೆ ಏಕೆ ಹೆಣಗಬೇಕು? ಹಣ ಮಾಡಿಕೊಂಡು ವಾಪಸ್ ಬಂದರೂ ಆಯ್ತು. ಇಲ್ಲದಿದ್ದರೆ ಅಲ್ಲಿನದೇ ಸಿಟಿಜನ್ಶಿಪ್ ಪಡೆದು ಅಲ್ಲೇ ನೆಲೆಯೂರಿದರೂ ಆಯ್ತು. ಇಲ್ಲಿದ್ದರೂ ಅಲ್ಲಿದ್ದರೂ ಇವನಿಗೆ ಭಾರತದೊಂದಿಗಿನ ಭಾವನಾತ್ಮಕ ನಂಟು ಪೂರ್ತಿ ಕಡಿದುಕೊಂಡಂತೆಯೇ!  ಇವನು ಇಲ್ಲಿದ್ದರೂ ಮಾನಸಿಕವಾಗಿ ವಿದೇಶದಲ್ಲೇ ಇರುತ್ತಾನೆ. ಅಲ್ಲಿದ್ದು ಅವನು ಭಾರತೀಯರಂತೆ ಜೀವನ ನಡೆಸಿದರೂ ಎಂದಿಗೂ ಅಲ್ಲಿನವನಂತೂ ಆಗುವುದು ಸಾಧ್ಯವಿಲ್ಲ. ಇಲ್ಲಿನವನೂ ಆಗುವುದಿಲ್ಲವೆಂಬುದೂ ಅಷ್ಟೇ ಸತ್ಯ.

ಬಡವಳೆಂದು, ಕೊಳಕಳೆಂದು, ಬುದ್ದಿ ತಿಳಿಯದವಳೆಂದು, ವಿವೇಕವಿಲ್ಲದವಳೆಂದು ಯಾರಾದರೂ ತನ್ನ ತಾಯಿಯನ್ನು ಬದಲಾಯಿಸಿಕೊಳ್ಳಲು ಸಾಧ್ಯವೇ? ಅವಳನ್ನು ಬಿಟ್ಟು ಇನ್ಯಾವುದೋ ಶ್ರೀಮಂತ, ಶುಚಿಯಾದ, ವಿವೇಕಿ ಹೆಂಗಸನ್ನು ನಮ್ಮ ಅಮ್ಮನನ್ನಾಗಿ ಮಾಡಿಕೊಳ್ಳಲು ಸಾಧ್ಯವೇ?

ಪ್ರಿಯ ಸಖಿ, ದೇಶವನ್ನುವುದು ನಮ್ಮ ತಾಯಿಯಂತೆ. ಅವಳನ್ನು ಹೇಗೆ ಬವಲಿಸಲು ಸಾಧ್ಯ? ಅದಕ್ಕೆಂದೇ ಎಲ್ಲ ಅನಿಷ್ಟಗಳ ನಡುವೆಯೂ ಅವಳನ್ನು ಪ್ರೀತಿಸಲು ಸಾಧ್ಯ. ಒಪ್ಪಿಕೊಳ್ಳಲು ಸಾಧ್ಯ. ಹಾಗೇ ಅವಳ ಎಲ್ಲ ಋಣಾತ್ಮಕ ಅಂಶಗಳಿಗೂ ಹೊಂದಿಕೊಳ್ಳುವುದು ಅಥವಾ ತಿದ್ದುವುದೂ ನಮ್ಮಿಂದಲೇ ಸಾಧ್ಯ. ಪಲಾಯನ ಇದಕ್ಕೆ ಉತ್ತರವಲ್ಲ ಅಲ್ಲವೇ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...