Home / ಕವನ / ಕವಿತೆ / ಶ್ರೇಷ್ಠ ಕನಿಷ್ಠ ಪ್ರಶ್ನೆಯೇ… ಅಸಂಗತ

ಶ್ರೇಷ್ಠ ಕನಿಷ್ಠ ಪ್ರಶ್ನೆಯೇ… ಅಸಂಗತ

ಕ್ಯಾತೆ ತೆಗೆದಿತ್ತು
ಜೀವನ ಸಾವ ಜೊತೆಗೆ
ಶ್ರೇಷ್ಠರಾರು ? ಪ್ರಶ್ನೆಯೆತ್ತಿಕೊಂಡು
ತುಸು ಗಂಭೀರವಾಗಿಯೇ !

ಜೀವನ, ನಾನು ಮೊದಲು !
ಜೀವ-ಜೀವಕ್ಕೆ, ಜಡ-ಜಡಕ್ಕೆ, ಕಾಲ-ಕಾಲಕ್ಕೆ
ಭಿನ್ನ! ಭಿನ್ನ! ರಂಗು! ರಂಗು!
ಬೆಳಕು; ಸಂತಸ.

ಕರುಣಿಸುವೆನು
ಅಂಗಳದಿ ಸೋಲು, ಗೆಲುವು, ಸಮಾಧಾನ;
ತಮ್ಮ, ತಮ್ಮ ಗುಣಾವಗುಣ,
ಅಭಿರುಚಿ, ಅನುಕೂಲ, ಶಕ್ತಿ, ದೌರ್ಬಲ್ಯಗಳಿಗೆ ತಕ್ಕಂತೆ.

ತುಡಿಸುವೆನು
ನನ್ನ ಪಂದ್ಯದಲಿರಲು
ಎಲ್ಲವನು ಎಲ್ಲರನು ಸದಾ!
ಜೀವಂತಿಕೆಯೇ ನನ್ನ ಹೂರಣ.

ಮಾಡುವೆನು ಅದಲು, ಬದಲು
ನಿಧಾನವಾಗಿ, ವೇಗವಾಗಿ, ಬೇಕಾದ ಹಾಗೆ!
ನೆಚ್ಚದಂತೆ.
ನಿಲ್ಲಿಸೆನು ಯಾವುದನೂ ಒಂದೇ ಸ್ತರದಲಿ
ಕೆಲ, ಕೆಲವರನು ಬಿಟ್ಟು,

ನಾನು ವಿಕ್ಷಿಪ್ತನಲ್ಲ!
ಹುಟ್ಟಿ ಬರುವ ಎಲ್ಲಕ್ಕೂ ಎಲ್ಲರಿಗೂ ಸಲ್ಲುವೆನು
ನನ್ನಲ್ಲಿ ಅರಳಿ ಬೆಳೆದವರು ಸಾವ ಗೆಲುವರು
ಉಳಿಯುವರು; ಬೆಳಗುವರು
ಚರಿತ್ರೆಯಲಿ ಚಿರಕಾಲ.

ನಾನು ಸಾವು,
ಭಯ! ನೋವು! ಕತ್ತಲು! ಮೌನ!
ಸತ್ಯ! ಸಾರ್ವತ್ರಿಕ! ಬಿಡುಗಡೆ!!

ನನಗೆ ಸ್ವಾಗತವಿಲ್ಲ; ಆರಾಧನೆಯಿಲ್ಲ
ಯಾರೂ… ತಾವೇ ಬಂದು ಬೀಳರು
ನನ್ನ ಮಡಿಲಿಗೆ
ಬಹಳ ಬದುಕಲರಿಯದವರು; ಧೀರರು ವಿನಃ.

ಶರಣು!
ಸತ್ತು ಬದುಕುವ ಗೆದ್ದವರಿಗೆ
ನಾನು, ಈಗ… ಆಗ… ಯಾವಾಗ ಬೇಕಾದರೂ…
ಯಾವರೂಪದಲ್ಲಾದರೂ…
ಬಂದೆರಗಬಹುದು; ಮುಗಿಸಬಹುದು.
ಸತ್ಯವಿದನು ತಿಳಿದೂ… ತಿಳಿದೂ
ಏನು ನಿಲ್ಲಿಸದೆ ಎಲ್ಲವನು ಮಾಮೂಲಾಗಿ
ಮುಂದುವರಿಸುವ
ಜೀವ ವಿಶೇಷರಿಗೆ.

ಹುಟ್ಹುಟ್ಟಿ ಬರುವ
ಜೀವದಲೆ ಎಲೆಗಳು ಬಾಳಿ
ಹಣ್ಣಾಗಿ ಉದುರಬೇಕು
ಚಿಗುರಾಗಿ ಮೂಡಬೇಕು; ಬೆಳೆಯಬೇಕು
ಬಾಳೆಂಬ ತೇರು ತರು ಹೊಸ ಹೊಸದಾಗಿ
ಸಿಂಗಾರಗೊಳಬೇಕು
ಅರ್ಥಪೂರ್ಣವಾಗಬೇಕು.

ಇದು ನ್ಯಾಯ! ಸರ್ವ ಸಮ್ಮತ !
ಜಗದಲಿ ಶ್ರೇಷ್ಠ, ಕನಿಷ್ಠ ಪ್ರಶ್ನೆಯೇ ಅಸಂಗತ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...