ಶ್ರೇಷ್ಠ ಕನಿಷ್ಠ ಪ್ರಶ್ನೆಯೇ… ಅಸಂಗತ

ಕ್ಯಾತೆ ತೆಗೆದಿತ್ತು
ಜೀವನ ಸಾವ ಜೊತೆಗೆ
ಶ್ರೇಷ್ಠರಾರು ? ಪ್ರಶ್ನೆಯೆತ್ತಿಕೊಂಡು
ತುಸು ಗಂಭೀರವಾಗಿಯೇ !

ಜೀವನ, ನಾನು ಮೊದಲು !
ಜೀವ-ಜೀವಕ್ಕೆ, ಜಡ-ಜಡಕ್ಕೆ, ಕಾಲ-ಕಾಲಕ್ಕೆ
ಭಿನ್ನ! ಭಿನ್ನ! ರಂಗು! ರಂಗು!
ಬೆಳಕು; ಸಂತಸ.

ಕರುಣಿಸುವೆನು
ಅಂಗಳದಿ ಸೋಲು, ಗೆಲುವು, ಸಮಾಧಾನ;
ತಮ್ಮ, ತಮ್ಮ ಗುಣಾವಗುಣ,
ಅಭಿರುಚಿ, ಅನುಕೂಲ, ಶಕ್ತಿ, ದೌರ್ಬಲ್ಯಗಳಿಗೆ ತಕ್ಕಂತೆ.

ತುಡಿಸುವೆನು
ನನ್ನ ಪಂದ್ಯದಲಿರಲು
ಎಲ್ಲವನು ಎಲ್ಲರನು ಸದಾ!
ಜೀವಂತಿಕೆಯೇ ನನ್ನ ಹೂರಣ.

ಮಾಡುವೆನು ಅದಲು, ಬದಲು
ನಿಧಾನವಾಗಿ, ವೇಗವಾಗಿ, ಬೇಕಾದ ಹಾಗೆ!
ನೆಚ್ಚದಂತೆ.
ನಿಲ್ಲಿಸೆನು ಯಾವುದನೂ ಒಂದೇ ಸ್ತರದಲಿ
ಕೆಲ, ಕೆಲವರನು ಬಿಟ್ಟು,

ನಾನು ವಿಕ್ಷಿಪ್ತನಲ್ಲ!
ಹುಟ್ಟಿ ಬರುವ ಎಲ್ಲಕ್ಕೂ ಎಲ್ಲರಿಗೂ ಸಲ್ಲುವೆನು
ನನ್ನಲ್ಲಿ ಅರಳಿ ಬೆಳೆದವರು ಸಾವ ಗೆಲುವರು
ಉಳಿಯುವರು; ಬೆಳಗುವರು
ಚರಿತ್ರೆಯಲಿ ಚಿರಕಾಲ.

ನಾನು ಸಾವು,
ಭಯ! ನೋವು! ಕತ್ತಲು! ಮೌನ!
ಸತ್ಯ! ಸಾರ್ವತ್ರಿಕ! ಬಿಡುಗಡೆ!!

ನನಗೆ ಸ್ವಾಗತವಿಲ್ಲ; ಆರಾಧನೆಯಿಲ್ಲ
ಯಾರೂ… ತಾವೇ ಬಂದು ಬೀಳರು
ನನ್ನ ಮಡಿಲಿಗೆ
ಬಹಳ ಬದುಕಲರಿಯದವರು; ಧೀರರು ವಿನಃ.

ಶರಣು!
ಸತ್ತು ಬದುಕುವ ಗೆದ್ದವರಿಗೆ
ನಾನು, ಈಗ… ಆಗ… ಯಾವಾಗ ಬೇಕಾದರೂ…
ಯಾವರೂಪದಲ್ಲಾದರೂ…
ಬಂದೆರಗಬಹುದು; ಮುಗಿಸಬಹುದು.
ಸತ್ಯವಿದನು ತಿಳಿದೂ… ತಿಳಿದೂ
ಏನು ನಿಲ್ಲಿಸದೆ ಎಲ್ಲವನು ಮಾಮೂಲಾಗಿ
ಮುಂದುವರಿಸುವ
ಜೀವ ವಿಶೇಷರಿಗೆ.

ಹುಟ್ಹುಟ್ಟಿ ಬರುವ
ಜೀವದಲೆ ಎಲೆಗಳು ಬಾಳಿ
ಹಣ್ಣಾಗಿ ಉದುರಬೇಕು
ಚಿಗುರಾಗಿ ಮೂಡಬೇಕು; ಬೆಳೆಯಬೇಕು
ಬಾಳೆಂಬ ತೇರು ತರು ಹೊಸ ಹೊಸದಾಗಿ
ಸಿಂಗಾರಗೊಳಬೇಕು
ಅರ್ಥಪೂರ್ಣವಾಗಬೇಕು.

ಇದು ನ್ಯಾಯ! ಸರ್ವ ಸಮ್ಮತ !
ಜಗದಲಿ ಶ್ರೇಷ್ಠ, ಕನಿಷ್ಠ ಪ್ರಶ್ನೆಯೇ ಅಸಂಗತ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಚೆಲುವಿನ ನಾಡು ಕರುನಾಡು
Next post ಮುತ್ತಿಗೆ

ಸಣ್ಣ ಕತೆ

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

cheap jordans|wholesale air max|wholesale jordans|wholesale jewelry|wholesale jerseys