Home / ಕವನ / ಕವಿತೆ / ಶ್ರೇಷ್ಠ ಕನಿಷ್ಠ ಪ್ರಶ್ನೆಯೇ… ಅಸಂಗತ

ಶ್ರೇಷ್ಠ ಕನಿಷ್ಠ ಪ್ರಶ್ನೆಯೇ… ಅಸಂಗತ

ಕ್ಯಾತೆ ತೆಗೆದಿತ್ತು
ಜೀವನ ಸಾವ ಜೊತೆಗೆ
ಶ್ರೇಷ್ಠರಾರು ? ಪ್ರಶ್ನೆಯೆತ್ತಿಕೊಂಡು
ತುಸು ಗಂಭೀರವಾಗಿಯೇ !

ಜೀವನ, ನಾನು ಮೊದಲು !
ಜೀವ-ಜೀವಕ್ಕೆ, ಜಡ-ಜಡಕ್ಕೆ, ಕಾಲ-ಕಾಲಕ್ಕೆ
ಭಿನ್ನ! ಭಿನ್ನ! ರಂಗು! ರಂಗು!
ಬೆಳಕು; ಸಂತಸ.

ಕರುಣಿಸುವೆನು
ಅಂಗಳದಿ ಸೋಲು, ಗೆಲುವು, ಸಮಾಧಾನ;
ತಮ್ಮ, ತಮ್ಮ ಗುಣಾವಗುಣ,
ಅಭಿರುಚಿ, ಅನುಕೂಲ, ಶಕ್ತಿ, ದೌರ್ಬಲ್ಯಗಳಿಗೆ ತಕ್ಕಂತೆ.

ತುಡಿಸುವೆನು
ನನ್ನ ಪಂದ್ಯದಲಿರಲು
ಎಲ್ಲವನು ಎಲ್ಲರನು ಸದಾ!
ಜೀವಂತಿಕೆಯೇ ನನ್ನ ಹೂರಣ.

ಮಾಡುವೆನು ಅದಲು, ಬದಲು
ನಿಧಾನವಾಗಿ, ವೇಗವಾಗಿ, ಬೇಕಾದ ಹಾಗೆ!
ನೆಚ್ಚದಂತೆ.
ನಿಲ್ಲಿಸೆನು ಯಾವುದನೂ ಒಂದೇ ಸ್ತರದಲಿ
ಕೆಲ, ಕೆಲವರನು ಬಿಟ್ಟು,

ನಾನು ವಿಕ್ಷಿಪ್ತನಲ್ಲ!
ಹುಟ್ಟಿ ಬರುವ ಎಲ್ಲಕ್ಕೂ ಎಲ್ಲರಿಗೂ ಸಲ್ಲುವೆನು
ನನ್ನಲ್ಲಿ ಅರಳಿ ಬೆಳೆದವರು ಸಾವ ಗೆಲುವರು
ಉಳಿಯುವರು; ಬೆಳಗುವರು
ಚರಿತ್ರೆಯಲಿ ಚಿರಕಾಲ.

ನಾನು ಸಾವು,
ಭಯ! ನೋವು! ಕತ್ತಲು! ಮೌನ!
ಸತ್ಯ! ಸಾರ್ವತ್ರಿಕ! ಬಿಡುಗಡೆ!!

ನನಗೆ ಸ್ವಾಗತವಿಲ್ಲ; ಆರಾಧನೆಯಿಲ್ಲ
ಯಾರೂ… ತಾವೇ ಬಂದು ಬೀಳರು
ನನ್ನ ಮಡಿಲಿಗೆ
ಬಹಳ ಬದುಕಲರಿಯದವರು; ಧೀರರು ವಿನಃ.

ಶರಣು!
ಸತ್ತು ಬದುಕುವ ಗೆದ್ದವರಿಗೆ
ನಾನು, ಈಗ… ಆಗ… ಯಾವಾಗ ಬೇಕಾದರೂ…
ಯಾವರೂಪದಲ್ಲಾದರೂ…
ಬಂದೆರಗಬಹುದು; ಮುಗಿಸಬಹುದು.
ಸತ್ಯವಿದನು ತಿಳಿದೂ… ತಿಳಿದೂ
ಏನು ನಿಲ್ಲಿಸದೆ ಎಲ್ಲವನು ಮಾಮೂಲಾಗಿ
ಮುಂದುವರಿಸುವ
ಜೀವ ವಿಶೇಷರಿಗೆ.

ಹುಟ್ಹುಟ್ಟಿ ಬರುವ
ಜೀವದಲೆ ಎಲೆಗಳು ಬಾಳಿ
ಹಣ್ಣಾಗಿ ಉದುರಬೇಕು
ಚಿಗುರಾಗಿ ಮೂಡಬೇಕು; ಬೆಳೆಯಬೇಕು
ಬಾಳೆಂಬ ತೇರು ತರು ಹೊಸ ಹೊಸದಾಗಿ
ಸಿಂಗಾರಗೊಳಬೇಕು
ಅರ್ಥಪೂರ್ಣವಾಗಬೇಕು.

ಇದು ನ್ಯಾಯ! ಸರ್ವ ಸಮ್ಮತ !
ಜಗದಲಿ ಶ್ರೇಷ್ಠ, ಕನಿಷ್ಠ ಪ್ರಶ್ನೆಯೇ ಅಸಂಗತ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...